ಅರ್ಜಿ ವಿಲೇವಾರಿ ಗೊಂದಲ ಆರೋಪ:  ಕಾರ್ಮಿಕರಿಂದ ಪ್ರತಿಭಟನೆ


Team Udayavani, Aug 8, 2017, 6:00 AM IST

0708mlr51.jpg

ಮಹಾನಗರ: ಜಿಲ್ಲೆಯಲ್ಲಿ ಕಟ್ಟಡ ಕಾರ್ಮಿಕರು ವಿವಿಧ ಸವಲತ್ತುಗಳಿಗಾಗಿ ಸಲ್ಲಿಸಿದ ಅರ್ಜಿಗಳ ವಿಲೇವಾರಿ ಮಾಡುವಲ್ಲಿ ಕಾರ್ಮಿಕ ಇಲಾಖೆ ಗೊಂದಲ ಹಾಗೂ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಆರೋಪಿಸಿ ಸೋಮವಾರ ಸಿಐಟಿಯು ನೇತೃತ್ವದಲ್ಲಿ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರು ಮಂಗಳೂರು ಸಹಾಯಕ ಕಾರ್ಮಿಕ ಆಯುಕ್ತರ ಕಚೇರಿ ಎದುರು ಪ್ರತಿಭಟನ ಪ್ರದರ್ಶನ ನಡೆಸಿದರು.

ಅರ್ಜಿಗಳ ವಿಲೇವಾರಿ ಮಾಡಲೇಬೇಕು ಹಾಗೂ ಕಟ್ಟಡ ಕಾರ್ಮಿಕರ ಸಮಸ್ಯೆಗಳನ್ನು ಪರಿಹರಿಸಲೇ ಬೇಕು ಎಂದು ಕಾರ್ಮಿಕರು ಘೋಷಣೆ ಕೂಗಿದರು. 

ವಿನಾ ಕಾರಣ ಕಿರುಕುಳ 
ಪ್ರತಿಭಟನೆಯನ್ನು ಉದ್ಘಾಟಿಸಿದ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ. ಮಹಾಂತೇಶ್‌ ಮಾತನಾಡಿ, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಸುಮಾರು 12 ಲಕ್ಷ ಕಾರ್ಮಿಕರು ನೋಂದಣಿ ಮಾಡಿದ್ದು, ಈಗಾಗಲೇ 5,600 ಕೋಟಿ ರೂ. ಹಣ ಸಂಗ್ರಹವಾಗಿದೆ. ಅದರಲ್ಲಿ ಕಳೆದ 11 ವರ್ಷಗಳಲ್ಲಿ ಕಟ್ಟಡ ಕಾರ್ಮಿಕರಿಗಾಗಿ ಖರ್ಚು ಮಾಡಿದ್ದು ಕೇವಲ 171 ಕೋಟಿ ರೂ. ಮಾತ್ರ. ದೀರ್ಘ‌ ಕಾಲದ ಹೋರಾಟ ನಡೆದು ಕಲ್ಯಾಣ ಮಂಡಳಿ ರಚನೆಯಾಗಿ 12 ಬಗೆಯ ಸವಲತ್ತುಗಳು ಜಾರಿಗೊಂಡಿವೆ. ಅವುಗಳು ಕಟ್ಟಡ ಕಾರ್ಮಿಕರಿಗೆ ಸಿಗುವಲ್ಲಿ ಸಿಐಟಿಯು ಅವಿರತ ಪ್ರಯತ್ನ ನಡೆಸುತ್ತಿದೆ. ಆದರೆ ಕಾರ್ಮಿಕ ಇಲಾಖೆಯು ಈ ಸವಲತ್ತುಗಳು ಸಿಗದ ರೀತಿಯಲ್ಲಿ ಹತಾಶ ಪ್ರಯತ್ನ ನಡೆಸುತ್ತಿದೆ. ವಿನಾ ಕಾರಣ ಕಿರುಕುಳ ನೀಡಿ ಕಟ್ಟಡ ಕಾರ್ಮಿಕರನ್ನು ಸತಾಯಿಸುತ್ತಿದೆ ಎಂದು ಆರೋಪಿಸಿದರು.

ದುರುದ್ದೇಶದಿಂದ ಅರ್ಜಿ ರದ್ದು 
ಮದುವೆ, ಮರಣ ಹಾಗೂ ಮಕ್ಕಳ ಸ್ಕಾಲರ್‌ಶಿಪ್‌ಮುಂತಾದವುಗಳಿಗೆ ಸಂಬಂ ಧಿಸಿದ ಅರ್ಜಿಗಳನ್ನು ದುರುದ್ದೇಶದಿಂದಲೇ ರದ್ದುಪಡಿಸಿ ಕಾರ್ಮಿಕರನ್ನು ಸಂಕಷ್ಟಕ್ಕೊಳ ಪಡಿಸಿದೆ. ಮತ್ತೂಂದು ಕಡೆ ರಾಜ್ಯ ಸರಕಾರ ಕೂಡ ಮಂಡಳಿಯಲ್ಲಿ ಜಮಾವಣೆಗೊಂಡ ಹಣದ ಮೇಲೆ ಕಣ್ಣಿಟ್ಟಿದ್ದು ,ಅದನ್ನು ದುರುಪಯೋಗ ಪಡಿಸಲು ಹೊಂಚು ಹಾಕುತ್ತಿದೆ ಎಂದು   ಆರೋಪಿಸಿದ ಅವರು, ಸರಕಾರದ ಈ ಪ್ರಯತ್ನವನ್ನು ತಡೆದು ಕಟ್ಟಡ ಕಾರ್ಮಿಕರ ಪರವಾದ ನೀತಿಗಳನ್ನು ಜಾರಿಗೊಳಿಸಲು ಸಂಘಟಿತ ಹೋರಾಟ ರೂಪಿಸಲು ಕಂಕಣ ಬದ್ಧರಾಗಿ ದುಡಿಯ ಬೇಕೆಂದು ಕರೆ ನೀಡಿದರು.

ಅರ್ಧದಷ್ಟು ಸದಸ್ಯತ್ವ  ಬೋಗಸ್‌
ಸಿಐಟಯು ರಾಜ್ಯ ಉಪಾಧ್ಯಕ್ಷ ವಸಂತ ಆಚಾರಿ ಮಾತನಾಡಿ, ಕಲ್ಯಾಣ ಮಂಡಳಿಯಲ್ಲಿ  ಜಿಲ್ಲೆಯ ಸುಮಾರು 45,000 ಸದಸ್ಯರು ನೋಂದಣಿಯಾಗಿದ್ದರೂ ಅದರಲ್ಲಿ ಅರ್ಧದಷ್ಟು ಸದಸ್ಯತ್ವ  ಬೋಗಸ್‌ ಆಗಿದೆ ಎಂದು ಆಪಾದಿಸಿದರು.  

ಸಿಬಂದಿ ಅಸಹಕಾರ
ಕಟ್ಟಡ ಕಾರ್ಮಿಕರ ಸಂಘಟನೆಯ ಜಿಲ್ಲಾಧ್ಯಕ್ಷ ಸುನಿಲ್‌ ಕುಮಾರ್‌ ಬಜಾಲ್‌ ಮಾತನಾಡಿ, ಕಾರ್ಮಿಕರಿಗೆ ಸವಲತ್ತುಗಳನ್ನು ವಿಸ್ತರಿಸಲು ಇಲಾಖೆ ಸಿಬಂದಿ ಅಸಹಕಾರ ತೋರಿಸುತ್ತಿದ್ದಾರೆ ಎಂದು ಆರೋಪಿಸಿದರು.

ಸಂಘದ ಪ್ರಧಾನ ಕಾರ್ಯದರ್ಶಿ ಯೋಗೀಶ್‌ ಜಪ್ಪಿನಮೊಗರು ಮಾತನಾಡಿದರು. ಹೋರಾಟದ ನೇತೃತ್ವವನ್ನು ಕಟ್ಟಡ ಕಾರ್ಮಿಕರ ಸಂಘಟನೆಯ ಜಿಲ್ಲಾ ಮುಖಂಡರಾದ ರವಿಚಂದ್ರ ಕೊಂಚಾಡಿ, ಸಂತೋಷ್‌ ಶಕ್ತಿನಗರ, ಜಯಂತ ನಾಯ್ಕ, ಕೆ. ಪಿ. ಜೋನಿ, ವಸಂತಿ ಕುಪ್ಪೆಪದವು, ಪ್ರೇಮನಾಥ್‌ ಜಲ್ಲಿಗುಡ್ಡೆ, ಶಿವರಾಮ್‌ ಗೌಡ, ಬಿಜು ಅಗಸ್ಟಿನ್‌, ಶಂಕರ ಮೂಡಬಿದಿರೆ, ವಸಂತ ನಡ, ರಾಮಣ್ಣ ವಿಟ್ಲ, ಸೀತಾರಾಮ್‌ ಶೆಟ್ಟಿ, ಜನಾರ್ದನ ಕುತ್ತಾರ್‌ ಮುಂತಾದವರು ವಹಿಸಿದ್ದರು.

ಟಾಪ್ ನ್ಯೂಸ್

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

11

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

9

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿದ್ದ ಪತ್ನಿ ಮೇಲೆ ಬ್ಲೇಡ್‌ನಿಂದ ಹಲ್ಲೆ ಮಾಡಿ ಪರಾರಿಯಾದ ಪತಿ

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

1-wewewe

Mangaluru CCB  ಕಾರ್ಯಾಚರಣೆ: ಅಕ್ರಮ ಪಿಸ್ತೂಲ್ ಹೊಂದಿದ್ದ ಇಬ್ಬರ ಸೆರೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

11

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

9

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿದ್ದ ಪತ್ನಿ ಮೇಲೆ ಬ್ಲೇಡ್‌ನಿಂದ ಹಲ್ಲೆ ಮಾಡಿ ಪರಾರಿಯಾದ ಪತಿ

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.