ಪಾರ್ಶ್ವನಾಥ ಸ್ವಾಮಿಯ ಜೀವನಾದರ್ಶ ಪ್ರೇರಣೆ: ಮುನಿಶ್ರೀ


Team Udayavani, Aug 8, 2017, 6:30 AM IST

munishree.jpg

ವೇಣೂರು : 108 ಮುನಿಶ್ರೀ ಪ್ರಸಂಗಸಾಗರ ಮಹಾರಾಜರ ಭವ್ಯಮಂಗಲ ಚಾತುರ್ಮಾಸ್ಯ ವರ್ಷಾಯೋಗವು ವೇಣೂರು ಶ್ರೀ ಬಾಹುಬಲಿ ಕ್ಷೇತ್ರದಲ್ಲಿ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ಜೈನರ 23ನೇ  ತೀರ್ಥಂಕರರಾದ ಭಗವಾನ್‌ 108 ಶ್ರೀ ಪಾರ್ಶ್ವನಾಥ ಸ್ವಾಮಿಯ ಮೋಕ್ಷ ಕಲ್ಯಾಣ (ಮುಕುಟ ಸಪ್ತಮಿ) ಆಚರಣೆ ಜರಗಿತು.

ವೇಣೂರು ಶ್ರೀರಾಮ ಭಜನಾ ಮಂದಿರದಿಂದ 24 ಪಲ್ಲಕ್ಕಿಗಳಲ್ಲಿ 24 ತೀರ್ಥಂಕರುಗಳ ಜಿನಬಿಂಬಗಳನ್ನು ಇಟ್ಟು ವಾದ್ಯ ಘೋಷಗಳೊದಿಗೆ ಶ್ರೀ ಬಾಹುಬಲಿ ಸಭಾಭವನದವರೆಗೆ ಭವ್ಯ ಮೆರವಣಿಗೆ ನಡೆಸಿ, ವೇದಿಕೆಯಲ್ಲಿ 24 ತೀರ್ಥಂಕರುಗಳ ಜಿನಬಿಂಬಗಳಿಗೆ ವಿವಿಧ ಗ್ರಾಮದ ಬಂಧುಗಳು ಪಂಚಾಮƒತ ಅಭಿಷೇಕವನ್ನು ನೆರವೇರಿಸಿದರು.

23ನೇ ತೀರ್ಥಂಕರ ಶ್ರೀ ಪಾರ್ಶ್ವನಾಥ ಸ್ವಾಮೀಜಿ 23 ಕೆ.ಜಿ ತೂಕದ ಲಾಡನ್ನು ಹರಾಜಿನ ಮೂಲಕ ಪಡೆದುಕೊಂಡ ಉಪ್ಪಿನಂಗಡಿಯ ವಜ್ರ ಕುಮಾರ್‌ ದಂಪತಿಗಳು ಶ್ರೀ ಸ್ವಾಮಿಗೆ ಸಮರ್ಪಿಸಿದರು. ಬಳಿಕ 5 ಕೆ.ಜಿ ತೂಕದ ಲಾಡನ್ನು ಹಾಸನದ ಮಹಾವೀರ್‌ ಜೈನ್‌ ಕುಟುಂಬಿಕರು, ಕರ್ನಾಟಕ ರಾಜ್ಯ ಜೈನ ಸ್ವಯಂಸೇವಕ ತಂಡದವರು, ಬೆಳ್ತಂಗಡಿಯ ಶ್ರೀ ಪದ್ಮಾವತಿ ಜೈನ ಸ್ವಸಹಾಯ ಸಂಘ ಹಾಗೂ ಉಜಿರೆಯ ಪದ್ಮಪ್ರಸಾದ್‌ ದಂಪತಿಗಳು ಪಡೆದುಕೊಂಡು ಶ್ರೀ ಸ್ವಾಮಿಗೆ ಸಮರ್ಪಿಸಿದರು. ಬೆಳ್ಳಿತಟ್ಟೆಯ ಆರತಿ ಸೇವೆಯನ್ನು ವೇಣೂರು ಬಾಹುಬಲಿ ಯುವಜನ ಸಂಘದ ಸದಸ್ಯರು ನೆರವೇರಿಸಿದರು.

ಪೂಜಾ ಕಾರ್ಯಕ್ರಮದ ಬಳಿಕ ಶ್ರೀ ಪ್ರಸಂಗ ಸಾಗರ ಮುನಿಮಹಾರಾಜರ ಮಂಗಲ ಪ್ರವಚನ ನೀಡಿ, ಭಗವಾನ್‌ ಶ್ರೀ ಪಾರ್ಶ್ವನಾಥ ಸ್ವಾಮಿಯ ಜೀವನಾದರ್ಶಗಳು ಸಮಾಜಕ್ಕೆ ಪ್ರೇರಣೆಯಾಗಲಿ, ನಾವೆಲ್ಲರೂ ಅವರ ಗುಣಗಳನ್ನು ಧಾರಣೆ ಮಾಡಿಕೊಳ್ಳುವುದರೊಂದಿಗೆ ಆತ್ಮಕಲ್ಯಾಣ ಮಾಡಿಕೊಳ್ಳೋಣ ಎಂದರು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ| ಎಂ.ಎನ್‌. ರಾಜೇಂದ್ರ ಕುಮಾರ್‌ ಪ್ರಧಾನ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ, ಯುವಜನತೆ ಇಂತಹ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಹೆಚ್ಚು ಹೆಚ್ಚು ತೊಡಗಿಸಿಕೊಳ್ಳಬೇಕು. ಇದರಿಂದ ಉತ್ತಮ ಚಾರಿತ್ರ್ಯವನ್ನು ರೂಪಿಸಿಕೊಳ್ಳಬಹುದು. ಜೈನಧರ್ಮದ ತತ್ವಗಳು ಸಮಾಜದ ಇತರರಿಗೂ ಪ್ರೇರಣೆಯಾಗಲಿ, ಮುನಿಶ್ರೀಯವರ ಚಾತುರ್ಮಾಸ್ಯ ಕಾರ್ಯಕ್ರಮಗಳು ಧರ್ಮಪ್ರಭಾವನೆಯನ್ನುಂಟು ಮಾಡಲೆಂದು ಹಾರೈಸಿದರು.

ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರೂ, ಬೆಳ್ತಂಗಡಿ ಶಾಸಕ ಕೆ. ವಸಂತ ಬಂಗೇರ ಕಾರ್ಯಕ್ರಮಕ್ಕೆ ಆಗಮಿಸಿ, ಮುನಿಶ್ರೀಯವರಿಗೆ ಶ್ರೀಫಲ ಸಮರ್ಪಿಸಿ ಆಶೀರ್ವಾದ ಪಡೆದರು. ಜೈನ ವಿದ್ವಾಂಸ ಮುನಿರಾಜ ರೆಂಜಾಳ ಧಾರ್ಮಿಕ ಉಪನ್ಯಾಸ ನೀಡಿದರು. ಬೆಳ್ತಂಗಡಿ ನಗರ ಪಂಚಾಯತ್‌ ಅಧ್ಯಕ್ಷ ಮುಗುಳಿ ನಾರಾಯಣರಾವ್‌, ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ| ಬಿ. ಯಶೋವರ್ಮ, ರಾಜ್ಯ ಜೈನ ಸ್ವಯಂಸೇವಕ ತಂಡದ ಸಂಚಾಲಕ ನೇಮಿರಾಜ ಆರಿಗ ಉಪಸ್ಥಿತರಿದ್ದರು. ಹೊರನಾಡಿನ ಜಯಶ್ರೀ ಧರಣೇಂದ್ರ ಜೈನ್‌ ಮತ್ತು ಬಳಗದವರು ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು.

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.