ದಶಕ ಬಳಿಕ ಬಂದವರು…


Team Udayavani, Aug 9, 2017, 10:50 AM IST

Punararambha.jpg

ಸಿನಿಮಾ ರಂಗವೇ ಹಾಗೆ. ಇಲ್ಲಿ ಒಮ್ಮೆ ಬಣ್ಣ ಹಚ್ಚಿದವರಿಗೆ ಸದಾ ನಟಿಸುವ ತುಡಿತ ಹೆಚ್ಚುತ್ತಲೇ ಇರುತ್ತೆ. ಕಳೆದ ಹಲವು ವರ್ಷಗಳಿಂದಲೂ ಸಿನಿಮಾ ಹಾಗೂ ಕಿರುತೆರೆಯಲ್ಲಿ ನಟಿಸಿದ್ದ ಡಾ. ವಿಜಯ್‌ಕುಮಾರ್‌ ಈಗ ಪುನಃ ಗಾಂಧಿನಗರಕ್ಕೆ ಕಾಲಿಟ್ಟಿದ್ದಾರೆ. ಒಂದು ದಶಕದ ನಂತರ ಮತ್ತೆ ಚಿತ್ರರಂಗಕ್ಕೆ ಮರಳಿರುವ ಅವರೀಗ ನಾಯಕರಾಗಿ ನಟಿಸುವುದರ ಜತೆಗೆ ನಿರ್ಮಾಣ ಮತ್ತು ನಿರ್ದೇಶನವನ್ನೂ ಮಾಡುತ್ತಿದ್ದಾರೆ.

ಅಂದಹಾಗೆ, ವಿಜಯಕುಮಾರ್‌ ನಟಿಸಿ-ನಿರ್ಮಿಸಿ-ನಿರ್ದೇಶಿಸುತ್ತಿರುವ ಚಿತ್ರಕ್ಕೆ “ಪುನಾರಾರಂಭ’ ಎಂದು ಹೆಸರಿಡಲಾಗಿದೆ. ಇದೊಂದು ಮನರಂಜನೆಯ ಸಿನಿಮಾ. ವ್ಯವಹಾರದಿಂದ ನಷ್ಟ ಅನುಭವಿಸಿ ಅನೇಕ ಸಮಸ್ಯೆಗಳನ್ನು ಎದುರಿಸಿದ ನಾಯಕನ ಜೀವನದಲ್ಲಿ ಪುನಃ ಅದೃಷ್ಟದ ಬಾಗಿಲು ತೆರೆಯುತ್ತದೆ. ಅನಾಮಧೇಯ ಹಣ ಸಿಕ್ಕ ನಂತರ ಅದರಿಂದ ಏನೆಲ್ಲಾ ಆಗುತ್ತೆ ಅನ್ನೋದು ಚಿತ್ರದ ಕಥೆ.

ಆಗಸ್ಟ್‌ 16 ರಂದು ಚಿತ್ರಕ್ಕೆ ಮಹೂರ್ತ ನಡೆಯಲಿದೆ. ವಿಜಯಕುಮಾರ್‌ಗೆ ನಾಯಕಿಯಾಗಿ ಐಶ್ವರ್ಯ ದಿನೇಶ್‌ ಅಭಿನಯಿಸುತ್ತಿದ್ದಾರೆ. ಚಿತ್ರಕ್ಕೆ ಕೆ. ಗಣೇಶ್‌ರಾವ್‌ ಸಹ ನಿರ್ದೇಶಕರಾಗಿದ್ದಾರೆ. ವಿಭಿನ್ನ ಕ್ರಿಯೇಷನ್ಸ್‌ ಬ್ಯಾನರ್‌ನಲ್ಲಿ ಡಾ.ರೂಪ ಕುಮಾರ್‌ ನಿರ್ಮಾಣವಿರುವ ಈ ಚಿತ್ರಕ್ಕೆ ಎಂ. ಮುತ್ತುರಾಜ್‌ ಕ್ಯಾಮೆರಾ ಹಿಡಿಯುತ್ತಿದ್ದಾರೆ. ಡಾ. ವಿ.ನಾಗೇಂದ್ರ ಪ್ರಸಾದ್‌ ಸಂಗೀತವಿದೆ. ಜಯಂತ್‌ ಕಾಯ್ಕಿಣಿ ಹಾಗೂ ನಾಗೇಂದ್ರ ಪ್ರಸಾದ್‌ ಗೀತೆಗಳನ್ನು ರಚಿಸುತ್ತಿದ್ದಾರೆ.

ರಾಮು ನೃತ್ಯ ನಿರ್ದೇಶನ ಮಾಡಿದರೆ, ಸೂರ್ಯ ಪ್ರಕಾಶ್‌ ಸಾಹಸವಿದೆ. “ಪುನಾರಾರಂಭ’ ಚಿತ್ರದಲ್ಲಿ ಶೋಭರಾಜ್‌, ಶಂಕರ್‌ ಅಶ್ವಥ್‌, ಗಣೇಶ್‌ರಾವ್‌, ರಿಚರ್ಡ್‌ ಲೂಯಿಸ್‌, ಲಯೇಂದ್ರ, ವೈಷ್ಣವಿ, ಶ್ವೇತಾಗೌಡ, ಪ್ರೀತು ಪೂಜಾ, ಸುರೇಖಾ, ಮಾಸ್ಟರ್‌ ಸಂಜಿತ್‌, ಮಾಸ್ಟರ್‌ ಕಶ್ಯಪ್‌ ನಂಜಪ್ಪ, ಗುರುರಾಜ್‌, ರಾಜೀವ್‌ ಇತರರು ನಟಿಸುತ್ತಿದ್ದಾರೆ.

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.