ಮೀಸಲಾತಿಗಾಗಿ ಮರಾಠ ಸಮುದಾಯದ ಬೃಹತ್‌ ಪ್ರತಿಭಟನೆ;ಮುಂಬಯಿ ಸ್ತಬ್ಧ 


Team Udayavani, Aug 9, 2017, 1:42 PM IST

66.jpg

ಮುಂಬಯಿ: ಮರಾಠಾ ಸಮುದಾಯಕ್ಕೆ ಸರಕಾರ ಮೀಸಲಾತಿ ಒದಗಿ ಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಬುಧವಾರ  ಮರಾಠ ಸಮುದಾಯದ ಲಕ್ಷಾಂತರ ಜನರು ನಗರದ ಆಜಾದ್‌ ಮೈದಾನದಲ್ಲಿ ಬೃಹತ್‌ ಮರಾಠ ಕ್ರಾಂತಿ ಮೋರ್ಚಾ ನಡೆಸುತ್ತಿದ್ದು ಮುಂಬಯಿ ನಗರ ಸಂಪೂರ್ಣ ಸ್ತಬ್ಧಗೊಂಡಿದೆ. 

 ಮೌನ ಸ್ವರೂಪದ ಮಹಾ ಮೋರ್ಚಾ ಬೆಳಗ್ಗೆ 11 ಗಂಟೆಗೆ ಬೈಕುಲಾದ ವೀರಮಾತಾ ಜೀಜಾಬಾಯಿ ಭೋಸ್ಲೆ ಉದ್ಯಾನದಿಂದ  ಆರಂಭವಾಗಿದ್ದು, ರಾಣಿಬಾಗ್‌ನಿಂದ ಸಾಗಿ ಮೋರ್ಚಾ ಕ್ಯಾ| ಅಣ್ಣಾಸಾಹೇಬ್‌ ಪಾಟೀಲ್‌ ಸೇತುವೆ, ಖಡಾ ಪಾರ್ಸಿ, ಇಸ್ಮಾಯಿಲ್‌ ಮರ್ಚೆಂಟ್‌ ವೃತ್ತ, ಜೆ.ಜೆ.ಮೇಲ್ಸೆತುವೆ, ಛತ್ರಪತಿ ಶಿವಾಜಿ ಮಹಾರಾಜ ಟರ್ಮಿನಸ್‌ ಮಾರ್ಗವಾಗಿ ಬಂದು ಆಜಾದ್‌ ಮೈದಾನಕ್ಕೆ ತಲುಪಿ ಅಲ್ಲಿ ಸಂಪನ್ನಗೊಳ್ಳುತ್ತಿದೆ. ಈ ಮಹಾ ಮೋರ್ಚಾವು ಘೋಷಣೆ ಮತ್ತು ಭಾಷಣರಹಿತವಾಗಿ ನಡೆಯುತ್ತಿದೆ. 

ಮುಂಬಯಿಯ ಇದುವರೆಗಿನ ಇತಿಹಾಸದಲ್ಲಿ ಇದು ಅತ್ಯಂತ ಬೃಹತ್‌ ಮೋರ್ಚಾ ಆಗಿರಲಿದೆ. ಇದುವರೆಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 57 ಮೋರ್ಚಾಗಳು ನಡೆದಿದ್ದು 58ನೇ ಬೃಹತ್‌ ಮೋರ್ಚಾ ಮುಂಬಯಿಯಲ್ಲಿ ನಡೆಯುತ್ತಿದೆ. 

ಮೋರ್ಚಾ ನಡೆಸಲು ಮಹಾನಗರ ಪಾಲಿಕೆ, ಪೊಲೀಸ್‌, ಅಗ್ನಿಶಾಮಕ ದಳ, ಟ್ರಾಫಿಕ್‌ ಪೊಲೀಸ್‌ ಮತ್ತು ಇತರ ಆವಶ್ಯಕ ಆಡಳಿತ ವರ್ಗದಿಂದ ಪರವಾನಿಗೆಯನ್ನು ತೆಗದುಕೊಳ್ಳಲಾಗಿದೆ. ವಿವಿಧ ಸಾಮಾಜಿಕ ಸಂಸ್ಥೆಗಳು, ಗಣೇಶೋತ್ಸವ ಹಾಗೂ ದಹಿಹಂಡಿ ಮಂಡಳಿಗಳು, ಮುಂಬಯಿನ ಡಬ್ಟಾವಾಲಾ, ರೇಲ್‌ ಮರಾಠದ ಸ್ವಯಂಸೇವಕರು, ಮರಾಠ ಮೆಡಿಕೋ ಅಸೋಸಿಯೇಶನ್‌, ಛತ್ರಪತಿ ಶಿವಾಜಿ ಮುಸ್ಲಿಂ ಬ್ರಿಗೇಡ್‌ ಸೇರಿದಂತೆ ರಾಜಕೀಯ, ಮುಸ್ಲಿಂ ಮತ್ತು ದಲಿತ ಸಂಘಟನೆಗಳು ಮೋರ್ಚಾಕ್ಕೆ ಬೆಂಬಲ ನೀಡಿವೆ ಎಂದು ಪವಾರ್‌ ಹೇಳಿದರು.

ಚಹಾ, ಉಪಾಹಾರ ವ್ಯವಸ್ಥೆ
ಮೋರ್ಚಾದಲ್ಲಿ ಭಾಗವಹಿಸುವ ಆಂದೋಲನ ಕಾರರಿಗೆ ಚಹಾ, ಉಪಾಹಾರ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ವಿವಿಧ ಸ್ಥಳಗಳಲ್ಲಿ ಮೊಬೈಲ್‌ ಶೌಚಾಲಯಗಳ ಮತ್ತು ವೈದ್ಯಕೀಯ ಸೇವೆಯ ವ್ಯವಸ್ಥೆ ಮಾಡಲಾಗಿದೆ. ಮೋರ್ಚಾಕ್ಕೆ ಮಾರ್ಗದರ್ಶನ ನೀಡಲು 6,000 ಸ್ವಯಂಸೇವಕರನ್ನು ನೇಮಿಸಲಾಗಿದೆ. ವಾಹನಗಳ ಪಾರ್ಕಿಂಗ್‌ಗಾಗಿ ಟ್ರಾಫಿಕ್‌ ಪೊಲೀಸರು ವಿಶೇಷ ವ್ಯವಸ್ಥೆ ಮಾಡಿದ್ದಾರೆ.

ಬೃಹತ್‌ ಮರಾಠ ಕ್ರಾಂತಿ ಮೋರ್ಚಾ ನಿಮಿತ್ತ ದಕ್ಷಿಣ ಮುಂಬಯಿಯಲ್ಲಿನ ಶಾಲಾ- ಕಾಲೇಜು ಗಳಿಗೆ ಶಿಕ್ಷಣ ಸಚಿವ ವಿನೋದ್‌ ತಾಬ್ಡೆ ರಜೆ ಸಾರಿದ್ದಾರೆ.  ದಕ್ಷಿಣ ಮುಂಬಯಿಯಲ್ಲಿನ ಸಾಯನ್‌, ಮಾಹೀಮ್‌, ದಾದರ್‌, ವರ್ಲಿ ಮತ್ತು ಬೈಕುಲಾದಿಂದ ಕುಲಾಬಾ ಪರಿಸರದಲ್ಲಿನ ಶಾಲೆಗಳು ಸಹ ಬಂದ್‌ ಮಾಡಲಾಗಿದೆ. 

ಮೋರ್ಚಾದಲ್ಲಿ ಪಾಲ್ಗೊಳ್ಳಲು ರಾಜ್ಯದ ವಿವಿಧ ಮೂಲೆಗಳಿಂದ ಜನರು ಮುಂಬಯಿಗೆ ಆಗಮಿಸಿದ್ದಾರೆ. ಪಶ್ಚಿಮ ಮಹಾರಾಷ್ಟ್ರ, ಮರಾಠವಾಡ ಮತ್ತು ಕೊಂಕಣ ಭಾಗದ ವಿವಿಧ ಜಿಲ್ಲೆಗಳಿಂದ ಜನರನ್ನು ಹೊತ್ತು ಸಾವಿರಾರು ವಾಹನಗಳು ಮುಂಬಯಿಯಲ್ಲಿ ಪ್ರವೇಶಿಸಿದ್ದು, ಟ್ರಾಫಿಕ್‌ ಜ್ಯಾಮ್‌ ಉಂಟಾಗಿದೆ. ನವಿ ಮುಂಬಯಿಯ ವಿವಿಧ ಸ್ಥಳಗಳಲ್ಲಿ ವಾಹನಗಳಿಗಾಗಿ ಜಿಲ್ಲಾವಾರು ಪಾರ್ಕಿಂಗ್‌ ವ್ಯವಸ್ಥೆ ಮಾಡಲಾಗಿದೆ.

 ನೀತಿ ಸಂಹಿತೆ 
ಮುಂಬಯಿ ಮರಾಠ ಕ್ರಾಂತಿ ಮೋರ್ಚಾ ಮೌನವಾಗಿದ್ದು, ಯಾವೊಬ್ಬ ಪ್ರತಿಭಟನ ಕಾರ ಘೋಷಣೆ ಕೂಗುವುದಿಲ್ಲ. ಭಾಷಣ ಮಾಡುವುದಿಲ್ಲ.  

ಮೋರ್ಚಾಕ್ಕೆ ಸಂಬಂಧಿಸಿದ ಅಧಿಕೃತ ಬ್ಯಾನರ್‌ಗಳು ಹೊರತುಪಡಿಸಿ ಯಾವುದೇ ರಾಜಕೀಯ, ವೈಯಕ್ತಿಕ ಸಂಸ್ಥೆ ಮತ್ತು ಸಂಘಟನೆಯ ಬ್ಯಾನರ್‌ ಗಳು ಇರುವುದಿಲ್ಲ.

 ಯಾವುದೇ ಜಾತಿ ಅಥವಾ ಧರ್ಮದ ವಿರುದ್ಧದ ಘೋಷಣೆ ಅಥವಾ ಬೇಡಿಕೆಗಳುಳ್ಳ ಬ್ಯಾನರ್‌ಗಳನ್ನು ಮೋರ್ಚಾದಲ್ಲಿ ಪ್ರದರ್ಶಿಸುವಂತಿಲ್ಲ.

ಮೋರ್ಚಾದಲ್ಲಿ ಸ್ವಯಂ ಶಿಸ್ತು ಪಾಲಿಸುವಾಗ ಪೊಲೀಸರಿಗೆ ಸಹಕರಿಸಲಾಗುವುದು. 

ಮದ್ಯ ಸೇವನೆ ಮಾಡಿದ ಆಂದೋಲನಕಾರರಿಗೆ ಮೋರ್ಚಾದಲ್ಲಿ ಪಾಲ್ಗೊಳ್ಳುವಂತಿಲ್ಲ.
ಮೋರ್ಚಾದಿಂದ ನಗರ ಅಸ್ವತ್ಛವಾಗದಂತೆ ನೋಡಿಕೊಳ್ಳಲಾಗುವುದು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.