ಒಡಿಯೂರು ಶ್ರೀಗಳ ವರ್ಧಂತಿ ಉತ್ಸವ, ಗುರು ವಂದನೆ ,ಆಶೀರ್ವಚನ


Team Udayavani, Aug 9, 2017, 2:09 PM IST

08-Mum08a.jpg

ಮುಂಬಯಿ: ನಮ್ಮ ಬದುಕಿಗೆ ಒಂದು ಸಂವಿಧಾನವಿದೆ. ಆ ಸಂವಿಧಾನವನ್ನೇ ನಾವು ಧರ್ಮ ಎನ್ನುತ್ತೇವೆ. ಸುಸಂಸ್ಕೃತ ಜೀವನ ಪದ್ಧತಿಯೆ ನಮ್ಮ ಧರ್ಮವಾಗಬೇಕು. ಸರ್ವೇ ಜನಃ ಸುಖೀನೋ ಭವಂತು ಎಂಬುವುದು ನಮ್ಮ ಧ್ಯೇಯ ವಾಕ್ಯವಾಗಿರಬೇಕು. ಇದು ಧರ್ಮದ ಉದ್ದೇಶವೂ ಹೌದು. ಧರ್ಮಯುಕ್ತವಾದ ಗಳಿಕೆ, ಉಳಿಕೆ, ಬಳಕೆ ಇದ್ದರೆ ಅದಕ್ಕೆ ಅಪಾಯವಿಲ್ಲ. ಜೀವನದಲ್ಲಿ ಅಡ್ಡದಾರಿಯಲ್ಲಿ ಸಾಗುವುದೇ ಅಧರ್ಮವಾಗಿದೆ. ಉತ್ತಮ ರಾಷ್ಟ್ರ ನಿರ್ಮಾಣಕ್ಕಾಗಿ ಪ್ರಧಾನಮಂತ್ರಿಗಳ ಪ್ರಯತ್ನವನ್ನು ನಾವೆಲ್ಲವೂ ಬೆಂಬಲಿಸೋಣ ಎಂದು ಶ್ರೀ ಕ್ಷೇತ್ರ ಒಡಿಯೂರಿನ ಪರಮಪೂಜ್ಯ ಶ್ರೀ ಗುರು ದೇವಾನಂದ ಸ್ವಾಮೀಜಿ ಅವರು ನುಡಿದರು.

ಆ. 8ರಂದು ಸಯಾನ್‌ನ ಸ್ವಾಮಿ ನಿತ್ಯಾನಂದ ಸಭಾ ಗೃಹದಲ್ಲಿ ಜರಗಿದ ಒಡಿಯೂರು ಶ್ರೀಗಳ ವರ್ಧಂತಿ ಉತ್ಸವ, ಗುರು ವಂದನೆ ಹಾಗೂ ಸಾರ್ವಜನಿಕ ಆಶೀರ್ವಚನ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಅವರು, ಸ್ವಾರ್ಥ ಬದುಕನ್ನು ಬಿಟ್ಟು ನಿಸ್ವಾರ್ಥ ಬದುಕು ನಮ್ಮದಾಗಬೇಕು. ಆಗ ಮಾತ್ರ ಭಗವಂತನ ಕೃಪೆ ಸದಾ ನಮಗಿರುತ್ತದೆ. ಪ್ರೀತಿಯಿಂದ ನಾವು ಸಮಾಜಕ್ಕೆ ನೀಡಿದರೆ ಅದರ ಪ್ರತಿಫಲವು ತಿರುಗಿ ನಮಗೆ ಸಿಗುತ್ತದೆ. ಗುರುವಿನ ಆಶೀರ್ವಾದವಿದ್ದರೆ ಎಲ್ಲ ಕಾರ್ಯವೂ ಯಶಸ್ವಿಯಾಗುತ್ತದೆ. ಗುರುಭಕ್ತಿ ಎಂದರೆ ಮುಂಬಯಿಯ ಗುರುಭಕ್ತರನ್ನು ನೋಡಬೇಕು. ಇಲ್ಲಿಯ ಗುರುಭಕ್ತರು ಸಮಾಜಕ್ಕಾಗಿ ಮಾಡುವ ಸೇವೆಯೇ ಗುರುವಿನ ಸೇವೆಯಾಗಿದೆ ಎಂದು ನುಡಿದರು.

ಪ್ರಾರಂಭದಲ್ಲಿ ಕಾರ್ಯಕ್ರಮದ ವ್ಯವಸ್ಥಾಪಕ ಉದ್ಯಮಿ, ನಿತ್ಯಾನಂದ ಕ್ಯಾಟರರ್ನ ಮಾಲಕ ವಿಶ್ವನಾಥ್‌ ವಿ. ಶೆಟ್ಟಿ ದಂಪತಿ ಶ್ರೀಗಳ ಪಾದಪೂಜೆಗೈದು ಸ್ವಾಗತಿಸಿದರು. ಆನಂತರ ಕಾರ್ಯಕ್ರಮದ ವ್ಯವಸ್ಥಾಪಕರುಗಳಾದ ಸ್ವಾಮಿ ನಿತ್ಯಾನಂದ ಹಾಲ್‌ನ ಮಾಲಕ ಬಾಬು ಎನ್‌. ಶೆಟ್ಟಿ, ಸರೋಜಿನಿ ಹಿರಿಯಣ್ಣ ಶೆಟ್ಟಿ, ನಿತ್ಯಾನಂದ ಕ್ಯಾಟರರ್ನ ವಿಶ್ವನಾಥ್‌ ವಿ. ಶೆಟ್ಟಿ ಅವರು ಗುರುಗಳಿಗೆ ಹಾರಾರ್ಪಣೆಗೈದು ಫಲಪುಷ್ಪವನ್ನಿತ್ತು ವಂದಿಸಿದರು.

ಅನಂತರ ನಡೆದ ಸಾರ್ವಜನಿಕ ಆಶೀರ್ವಚನ ಕಾರ್ಯಕ್ರಮವನ್ನು ಶ್ರೀ ಗುರುದೇವಾನಂದ ಸ್ವಾಮೀಗಳು ದೀಪಪ್ರಜ್ವಲಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಾಧ್ವಿ ಮಾತಾನಂದಮಯಿ, ಬಾಬು ಎನ್‌. ಶೆಟ್ಟಿ. ಸರೋಜಿನಿ ಹಿರಿಯಣ್ಣ ಶೆಟ್ಟಿ, ವಿಶ್ವನಾಥ ವಿ. ಶೆಟ್ಟಿ, ಗುರುದೇವ ಸೇವಾ ಬಳಗದ ಅಧ್ಯಕ್ಷ ನ್ಯಾಯವಾದಿ ಕೃಷ್ಣ ಶೆಟ್ಟಿ, ಮಾಜಿ ಅಧ್ಯಕ್ಷ ನ್ಯಾಯವಾದಿ ಪ್ರಕಾಶ್‌ ಎಲ್‌. ಶೆಟ್ಟಿ, ಕಾರ್ಯದರ್ಶಿ ಪೇಟೆಮನೆ ಪ್ರಕಾಶ್‌ ಶೆಟ್ಟಿ, ಉಪಾಧ್ಯಕ್ಷ ಬೊಳ್ನಾಡುಗುತ್ತು ಚಂದ್ರಹಾಸ ರೈ, ಗುರುದೇವಾ ಸೇವಾ ಬಳಗದ ಪದಾಧಿಕಾರಿಗಳು, ವಜ್ರಮಾತಾ ಮಹಿಳಾ ವಿಕಾಸ ಕೇಂದ್ರದ ಅಧ್ಯಕ್ಷೆ ರೇವತಿ ವಾಮಯ್ಯ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಸಾಧ್ವಿ ಮಾತಾನಂದಮಯಿ ಅವರು ಪ್ರಾರ್ಥನೆ ಗೈದರು. ಪೇಟೆಮನೆ ಪ್ರಕಾಶ್‌ ಶೆಟ್ಟಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಕ್ಷೇತ್ರದ ಸಮಾಜಪರ ಕಾರ್ಯಚಟುವಟಿಕೆಗಳ ಬಗ್ಗೆ ವಿವರಿಸಿದರು. ಇದೇ ಸಂದರ್ಭದಲ್ಲಿ ಗುರುದೇವ ಸೇವಾ ಬಳಗ ಮತ್ತು ವಜ್ರಮಾತಾ ಮಹಿಳಾ ವಿಕಾಸ ಕೇಂದ್ರದ ವತಿಯಿಂದ ಗುರುಗಳಿಗೆ ಹಾಗೂ ಸಾಧ್ವಿ ಮಾತಾನಂದಮಯಿ ಅವರಿಗೆ ಫಲಪುಷ್ಪವನ್ನು ಅರ್ಪಿಸಲಾಯಿತು. ಊರಿನಲ್ಲಿ ನಿರ್ಮಾಣಗೊಳ್ಳಲಿರುವ ಜ್ಞಾನಮಂದಿರಕ್ಕೆ ವಜ್ರಮಾತಾ ಮಹಿಳಾ ವಿಕಾಸ ಕೇಂದ್ರದ ವತಿಯಿಂದ ಕಾಣಿಕೆ ರೂಪದಲ್ಲಿ ದೇಣಿಗೆಯನ್ನು ಅರ್ಪಿಸಲಾಯಿತು. 

ಶಿಬರೂರು ಸುರೇಶ್‌ ಶೆಟ್ಟಿ ಬಳಗದವರಿಂದ ಭಕ್ತಿಗಾನ ವೈಭವ ಜರಗಿತು. ಕೊನೆಯಲ್ಲಿ ಪ್ರಸಾದ ರೂಪದಲ್ಲಿ ಅನ್ನಸಂತರ್ಪಣೆ ನಡೆಯಿತು.

ಟಾಪ್ ನ್ಯೂಸ್

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.