ತ್ರಿಕೋನ ಸರಣಿ: ಭಾರತ “ಎ’ ಚಾಂಪಿಯನ್‌


Team Udayavani, Aug 9, 2017, 3:29 PM IST

09-SPORTS-4.jpg

ಪ್ರಿಟೋರಿಯಾ: ಶ್ರೇಯಸ್‌ ಅಯ್ಯರ್‌ ಅವರ ಅಮೋಘ ಶತಕ ಹಾಗೂ ವಿಜಯ್‌ ಶಂಕರ್‌ ಅವರ ಆಕರ್ಷಕ ಬ್ಯಾಟಿಂಗ್‌ ಸಾಹಸದಿಂದ ಭಾರತ ತಂಡ “ಎ’ ತಂಡಗಳ ತ್ರಿಕೋನ ಸರಣಿಯಲ್ಲಿ ಚಾಂಪಿಯನ್‌ ಆಗಿ ಮೂಡಿಬಂದಿದೆ. ಮಂಗಳವಾರದ ಫೈನಲ್‌ನಲ್ಲಿ ಭಾರತ “ಎ’ ಆತಿಥೇಯ ದಕ್ಷಿಣ ಆಫ್ರಿಕಾವನ್ನು 7 ವಿಕೆಟ್‌ಗಳಿಂದ ಮಣಿಸಿತು.

ಬ್ಯಾಟಿಂಗಿಗೆ ಇಳಿಸಲ್ಪಟ್ಟ ದಕ್ಷಿಣ ಆಫ್ರಿಕಾ “ಎ’ 7 ವಿಕೆಟಿಗೆ 267 ರನ್‌ ಪೇರಿಸಿ ಸವಾ ಲೊಡ್ಡಿದರೆ, ಭಾರತ “ಎ’ 46.5 ಓವರ್‌ಗಳಲ್ಲಿ ಕೇವಲ 3 ವಿಕೆಟ್‌ ನಷ್ಟಕ್ಕೆ 270 ರನ್‌ ಬಾರಿಸಿ ವಿಜಯಿಯಾಯಿತು. ಅಯ್ಯರ್‌ ಅಜೇಯ 140 ರನ್‌ ಬಾರಿಸಿದರೆ (131 ಎಸೆತ, 11 ಬೌಂಡರಿ, 4 ಸಿಕ್ಸರ್‌), ವಿಜಯ್‌ ಶಂಕರ್‌ 86 ಎಸೆತಗಳಿಂದ 72 ರನ್‌ ಬಾರಿಸಿದರು (9 ಬೌಂಡರಿ). ಇವರಿಬ್ಬರ 3ನೇ ವಿಕೆಟ್‌ ಜತೆಯಾಟದಲ್ಲಿ 141 ರನ್‌ ಒಟ್ಟುಗೂಡಿತು. ಸಂಜು ಸ್ಯಾಮ್ಸನ್‌ (12) ಮತ್ತು ಕರುಣ್‌ ನಾಯರ್‌ (4) ಭಾರತ 20 ರನ್‌ ಆಗುವಷ್ಟರಲ್ಲಿ ಕಳೆದುಕೊಂಡಿತ್ತು. ನಾಯಕ ಮನೀಷ್‌ ಪಾಂಡೆ 32 ರನ್‌ ಹೊಡೆದು ಅಜೇಯರಾಗಿ ಉಳಿದರು.

ಬೆಹದೀನ್‌ ಶತಕ
32ಕ್ಕೆ 3 ವಿಕೆಟ್‌ ಕಳೆದುಕೊಂಡು ಆರಂಭಿಕ ಕುಸಿತಕ್ಕೊಳಗಾಗಿದ್ದ ದಕ್ಷಿಣ ಆಫ್ರಿಕಾವನ್ನು ದೊಡ್ಡ ಮೊತ್ತದೆಡೆಗೆ ಮುನ್ನಡೆಸಿದವರು ಸೀನಿಯರ್‌ ತಂಡದ ಬ್ಯಾಟಿಂಗ್‌ ಆಲ್‌ರೌಂಡರ್‌ ಫ‌ರ್ಹಾನ್‌ ಬೆಹದೀìನ್‌ ಮತ್ತು ಡಿವಾಲ್ಡ್‌ ಪ್ರಿಟೋರಿಯಸ್‌. ಬೆಹದೀìನ್‌ ಅಮೋಘ 101 ರನ್‌ ಬಾರಿಸಿದರೆ, 4 ಟೆಸ್ಟ್‌ ಪಂದ್ಯಗಳ ಅನುಭವಿ ಪ್ರಿಟೋರಿಯಸ್‌ 58 ರನ್‌ ಹೊಡೆದರು. 28ನೇ ಓವರಿನಲ್ಲಿ 115ಕ್ಕೆ 5 ವಿಕೆಟ್‌ ಉರುಳಿದಾಗ ಒಟ್ಟುಗೂಡಿದ ಇವರು 101 ರನ್‌ ಜತೆಯಾಟ ನಿಭಾಯಿ ಸಿದರು. ಆತಿಥೇಯರನ್ನು ಅಲ್ಪ ಮೊತ್ತಕ್ಕೆ ಹಿಡಿದಿಡುವ ಭಾರತದ ಯೋಜನೆಯನ್ನು ವಿಫ‌ಲಗೊಳಿಸಿದರು.

ಬೆಹದೀನ್‌ ಅವರದು ಅಜೇಯ 101 ರನ್‌ ಕೊಡುಗೆ. 114 ಎಸೆತಗಳ ಈ ಬ್ಯಾಟಿಂಗ್‌ ವೇಳೆ 4 ಬೌಂಡರಿ, 3 ಸಿಕ್ಸರ್‌ ಸಿಡಿಯಲ್ಪಟ್ಟಿತು. ಪ್ರಿಟೋರಿಯಸ್‌ ಕೂಡ ಆಕ್ರಮಣಕಾರಿ ಆಟವಾಡಿ 61 ಎಸೆತಗಳಿಂದ 58 ರನ್‌ ಹೊಡೆದರು (5 ಬೌಂಡರಿ, 2 ಸಿಕ್ಸರ್‌). ಇವರಿಬ್ಬರನ್ನು ಹೊರತುಪಡಿಸಿದರೆ 39 ರನ್‌ ಮಾಡಿದ ನಾಯಕ ಖಾಯ ಝೊಂಡೊ ಅವರದೇ ಹೆಚ್ಚಿನ ಗಳಿಕೆ.

ಭಾರತದ ಪರ ಶಾದೂìಲ್‌ ಠಾಕೂರ್‌ 52ಕ್ಕೆ 3, ಸಿದ್ಧಾರ್ಥ ಕೌಲ್‌ 55ಕ್ಕೆ 2 ವಿಕೆಟ್‌ ಉರುಳಿಸಿದರು.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.