ಕೆರೆಗಳ ಡಿನೋಟಿಫೈಗೆ ಕೇಂದ್ರ ಸರಕಾರ ವಿರೋಧ
Team Udayavani, Aug 11, 2017, 6:00 AM IST
ಹೊಸದಿಲ್ಲಿ: ದೇಶದ ಯಾವುದೇ ಕೆರೆಗಳ ಡಿನೋಟಿಫೈಗೆ ಒಪ್ಪಿಗೆ ನೀಡುವುದಿಲ್ಲ ಎಂದು ಕೇಂದ್ರ ಸರಕಾರ ಹೇಳಿದೆ. ಇದು ಒಪ್ಪತಕ್ಕ ಕ್ರಮವೂ ಅಲ್ಲ ಎಂದು ಕೇಂದ್ರ ಜಲಸಂಪನ್ಮೂಲ ಸಚಿವೆ ಉಮಾಭಾರತಿ ಹೇಳಿದ್ದಾರೆ.
ಲೋಕಸಭೆಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಕರ್ನಾಟಕ 1,600 ಕೆರೆಗಳ ಡಿನೋಟಿಫೈ ಬಗ್ಗೆ ಚಿಂತನೆ ನಡೆಸಿದೆ ಎಂಬ ಬಗ್ಗೆ ಕೇಂದ್ರ ಸರಕಾರಕ್ಕೆ ಯಾವುದೇ ರೀತಿಯ ಮಾಹಿತಿ ಬಂದಿಲ್ಲ ಎಂದರು.
ಕರ್ನಾಟಕ ಈ ಬಗ್ಗೆ ಪ್ರಸ್ತಾವನೆಯನ್ನೂ ಸಲ್ಲಿಸಿಲ್ಲ ಎಂದ ಅವರು, ಒಂದು ವೇಳೆ ಇಂಥ ಪ್ರಸ್ತಾವನೆ ಬಂದರೆ ರಾಜ್ಯ ಸರಕಾರದಿಂದ ವರದಿ ಕೇಳುವುದಾಗಿ ಹೇಳಿದರು. ಅಲ್ಲದೆ ಕೆರೆಗಳ ಡಿನೋಟಿಫೈಗೆ ಕೇಂದ್ರ ಸರಕಾರದ ವಿರೋಧವಿದೆ. ಇದು ಉತ್ತಮ ಕೆಲಸವಲ್ಲ ಎಂದು ಅವರು ತಿಳಿಸಿದರು.
ಈ ಮಧ್ಯೆ, ದೇಶದಲ್ಲಿ ಮಳೆ ಪರಿಸ್ಥಿತಿ ಅತಂತ್ರವಾ ಗಿದ್ದು, ಕೆಲವು ಕಡೆಗಳಲ್ಲಿ ಬಂದರೆ, ಇನ್ನು ಕೆಲವು ಕಡೆ ಗಳಲ್ಲಿ ಬರುವುದೇ ಇಲ್ಲ. ಹೀಗಾಗಿ ನೀರಿನ ಸಂಗ್ರಹಕ್ಕೆ ಹೆಚ್ಚೆಚ್ಚು ಯೋಜನೆಗಳನ್ನು ಕೈಗೊಳ್ಳಲು ಚಿಂತನೆ ನಡೆಸಿರುವುದಾಗಿ ಅವರು ಲೋಕಸಭೆಗೆ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!