ಮುಲ್ಲಾಮಾರಿ ಜಲಾಶಯದಿಂದ ಮುಖ್ಯ ಕಾಲುವೆಗೆ ನೀರು
Team Udayavani, Aug 11, 2017, 9:37 AM IST
ಚಿಂಚೋಳಿ: ತಾಲೂಕಿನಲ್ಲಿ ಮಳೆ ಅಭಾವದಿಂದಾಗಿ ಮುಂಗಾರು ಹಂಗಾಮಿನ ಹೆಸರು, ಉದ್ದು, ತೊಗರಿ ಬೆಳೆಗಳು ಬಾಡುತ್ತಿರುವುದರಿಂದ ಶಾಸಕ ಡಾ| ಉಮೇಶ ಜಾಧವ್ ಹಾಗೂ ರೈತರ ಬೇಡಿಕೆಯಂತೆ ಕೆಳದಂಡೆ ಮುಲ್ಲಾಮಾರಿ ಜಲಾಶಯದಿಂದ ಮುಖ್ಯ ಕಾಲುವೆಗೆ ನೀರು ಹರಿದು ಬಿಡಲಾಗಿದೆ ಎಂದು ಯೋಜನೆ ಎಇಇ ಕೃಷ್ಣ ಅಗ್ನಿಹೋತ್ರಿ ತಿಳಿಸಿದ್ದಾರೆ. ತಾಲೂಕಿನ ಮುಲ್ಲಾಮಾರಿ ಜಲಾಶಯದ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಚಿಮ್ಮನಚೋಡ, ತಾಜಲಾಪುರ, ಗಾರಂಪಳ್ಳಿ, ಕನಕಪುರ, ನಿಮಾಹೊಸಳ್ಳಿ, ಚಿಂಚೋಳಿ, ಗೌಡನಹಳ್ಳಿ, ಅಣವಾರ, ಖೋದಂಪುರ, ಹೂಡದಳ್ಳಿ, ಚಿಮ್ಮಾಇದಲಾಯಿ, ಪರದಾರ ಮೋತಕಪಳ್ಳಿ, ದೋಟಿಕೊಳ, ಸುಲೇಪೇಟ, ಬೆಡಕಪಳ್ಳಿ, ರಾಮತೀರ್ಥ, ಯಾಕಾಪುರ ಗ್ರಾಮಗಳ ರೈತರ ಹೊಲಗಳಲ್ಲಿ ಇರುವ ಬೆಳೆಗಳಿಗೆ ನೀರು ಹರಿಸಬೇಕಾಗಿದೆ.
ಕೆಳದಂಡೆ ಮುಲ್ಲಾಮಾರಿ ಜಲಾಶಯದಲ್ಲಿ ರೈತರ ಜಮೀನುಗಳಿಗೆ ನೀರು ಹರಿದು ಬಿಡಲು ಸಾಕಷ್ಟು ನೀರಿನ ಸಂಗ್ರಹಣೆ ಇದೆ. ಒಟ್ಟು 80 ಕಿಮೀ ಉದ್ದ ಎಡದಂಡೆ ಮುಖ್ಯಕಾಲುವೆಗೆ ಈಗಾಗಲೇ 40 ಕಿಮೀ ವರೆಗೆ ನೀರು ಹರಿದು ಹೋಗಿದೆ. ರೈತರ ಮುಂಗಾರಿನ
ಬೆಳೆಗಳಿಗೆ ನೀರು ಅವಶ್ಯಕತೆ ಮತ್ತು ರೈತರ ಬೇಡಿಕೆಯಂತೆ ಆ.6 ರಂದು ಮುಖ್ಯಕಾಲುವೆಗೆ ನೀರು ಹರಿದು ಬಿಡಲಾಗಿದೆ ಎಂದು ಎಇಇ ತಿಳಿಸಿದ್ದಾರೆ. ಕೆಳದಂಡೆ ಮುಲ್ಲಾಮಾರಿ ಜಲಾಶಯ ಗೇಟಿನ ಬಳಿ ಎರಡೂ ದಂಡೆಗೆ ಸಿಮೆಂಟ್ ತಡೆಗೋಡೆ ನಿರ್ಮಿಸಲಾಗುತ್ತಿದೆ. ಸರಕಾರದಿಂದ 37ಕೋಟಿ ರೂ.ಮಂಜೂರಿ ಆಗಿದೆ. ಕಾಮಗಾರಿ ಪ್ರಗತಿಯಲ್ಲಿದ್ದು, ಇನ್ನೊಂದು ತಿಂಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ