ಉತ್ತಮ ಪುಸ್ತಕ ಓದಿನಿಂದ ದೃಢ ವ್ಯಕ್ತಿತ್ವ
Team Udayavani, Aug 11, 2017, 10:04 AM IST
ಕಲಬುರಗಿ: ಸಾಹಿತ್ಯ ವಲಯ ವಿಶಾಲವಾಗಿದ್ದು, ಅಸಂಖ್ಯಾತ ಉತ್ತಮ ಪುಸ್ತಕಗಳಿವೆ. ಅವುಗಳಲ್ಲಿ ಕೆಲವನ್ನಾದರೂ
ಓದುವುದರ ಮುಖಾಂತರ ನಮ್ಮ ವ್ಯಕ್ತಿತ್ವ ಹಾಗೂ ನೆನಪಿನ ಶಕ್ತಿ ಹೆಚ್ಚಿಸಿಕೊಳ್ಳುವುದು ಅಗತ್ಯವಾಗಿದೆ ಎಂದು ಶರಣಬಸವ
ವಿಶ್ವವಿದ್ಯಾಲಯದ ಸಹ ಕುಲಪತಿ ಹಾಗೂ ಶರಣಬಸವೇಶ್ವರ ವಸತಿ (ಎಸ್ಬಿಆರ್) ಕಾಲೇಜಿನ ಪ್ರಾಚಾರ್ಯ ಡಾ| ಎನ್.
ಎಸ್. ದೇವರಕಲ್ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಗುರುವಾರ ನಗರದ ಎಸ್ಬಿಆರ್ ಶಾಲೆಯಲ್ಲಿ ಷಡಕ್ಷರಿಸ್ವಾಮಿ ಡಿಗ್ಗಾಂವಕರ
ಪ್ರತಿಷ್ಠಾನದ ಶಿವಾಂಶ ಪ್ರಕಾಶನ ವತಿಯಿಂದ ಮನೋವಿಜ್ಞಾನಿ ಡಾ| ಸಿ.ಆರ್. ಚಂದ್ರಶೇಖರ ಬರೆದ “ಒಳ್ಳೆಯ ಅಧ್ಯಯನ ವಿಧಾನ ಮತ್ತು ಉತ್ತಮ ನೆನಪಿನ ಶಕ್ತಿ ಹಾಗೂ ಗುಡ್ ಸ್ಟಡಿ ಹ್ಯಾಬಿಟ್ ಗುಡ್ ಮೆಮೋರಿ ಎನ್ನುವ ಎರಡು ಪುಸ್ತಕ ಲೋಕಾರ್ಪಣೆಗೊಳಿಸಿ ಅವರು
ಮಾತನಾಡಿದರು. ಇಂದಿನ ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನದ ಅವಶ್ಯಕತೆ ಇದೆ. ಓದಿದ್ದನ್ನು ಪುನಃ ಮನನ ಮಾಡಿಕೊಂಡರೆ ಓದಿಕೊಂಡಿದ್ದು ಬಹಳ ದಿನಗಳವರೆಗೆ ಶಾಶ್ವತವಾಗಿ ನೆನೆಪಿನಲ್ಲಿ ಉಳಿಯುತ್ತದೆ. ಲೋಕಾರ್ಪಣೆಗೊಂಡಿರುವ ಎರಡು ಪುಸ್ತಕಗಳು ಬಹಳ ಮಹತ್ವದಿಂದ ಕೂಡಿವೆ. ಕಡಿಮೆ ಬೆಲೆಯಲ್ಲಿ ಅಪಾರ ವಸ್ತು ವಿಷಯಗಳನ್ನು ಈ ಪುಸ್ತಕಗಳು ಹೊಂದಿವೆ ಎಂದು ಹೇಳಿದರು.
ಜಗತ್ತಿನಲ್ಲಿ ಜ್ಞಾನಕ್ಕಿಂತ ಮಿಗಿಲಾದ ವಸ್ತು ಮತ್ತೂಂದಿಲ್ಲ. ಜ್ಞಾನ ಯಾವ ಮೂಲೆಯಿಂದಲಾದರೂ ಬರಲಿ, ಅದನ್ನು ಒಮ್ಮನಸ್ಸಿನಿಂದ ಸ್ವೀಕರಿಸಬೇಕು. ಖನ್ನತೆ, ಒತ್ತಡ ನಿವಾರಿಸಿಕೊಳ್ಳಲು ಪುಸ್ತಕ ಓದುವ ಹವ್ಯಾಸ ಆರೋಗ್ಯಕ್ಕೆ ಒಳ್ಳೆಯದು ಎಂದರು. ಹಿರಿಯ ಪತ್ರಕರ್ತ ಟಿ. ವಿ ಶಿವಾನಂದನ್, ನಿವೃತ್ತ ಉಪನ್ಯಾಸಕ ನರೇಂದ್ರ ಬಡಶೇಷಿ, ಶಿವಾಂಶ ಪ್ರಕಾಶನದ ಡಾ| ಎಸ್ ಎಸ್ ಹಿರೇಮಠ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್ ಇನ್ನಿಲ್ಲ
BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್ ಖರ್ಗೆ
Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್ ಏಕಾಂಗಿ ಫೈಟ್
DK Sivakumar: ಪ್ರಜ್ವಲ್ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ
Prajwal Revanna: ಪ್ರಜ್ವಲ್ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್
MUST WATCH
ಹೊಸ ಸೇರ್ಪಡೆ
Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ
ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ
LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ
LS Polls: ಮನೆ ಯಜಮಾನನ್ನು ಕಳೆದುಕೊಂಡ ದುಃಖದ ನಡುವೆ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು
Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ