ಅಂತರ್ಜಾತಿ ವಿವಾಹ ಹೆಚ್ಚಾಗಬೇಕು: ಶ್ರೀನಿವಾಸಪ್ರಸಾದ್‌


Team Udayavani, Aug 11, 2017, 12:07 PM IST

mys4.jpg

ನಂಜನಗೂಡು: ಸಮಾಜದಲ್ಲಿನ ತಾರತಮ್ಯತೆ ಹಾಗೂ ಅಸಮಾನತೆ ಕೊನೆಗಾಣಿಸಲು ಅಂತರ್ಜಾತಿ ವಿವಾಹಗಳು ಹೆಚ್ಚಾಗಬೇಕು ಎಂದು  ಮಾಜಿ ಸಚಿವ  ವಿ.ಶ್ರೀನಿವಾಸಪ್ರಸಾದ್‌ ಹೇಳಿದರು.

ತುಮಕೂರಿನ ಸಿದ್ದಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿಗಳ 110ನೇ ವರ್ಷದ ಜನ್ಮದಿನಾಚರಣೆ ಅಂಗವಾಗಿ ನಂಜನಗೂಡಿನ ಶ್ರೀಕ್ರಾಂತಿಕಾರಿ ವೀರಶೈವ ಬಳಗ ಪಟ್ಟಣದ ಶ್ರೀಕಂಠೇಶ್ವರಸ್ವಾಮಿ ಕಲಾಮಂದಿರದಲ್ಲಿ ಗುರುವಾರ ಏರ್ಪಡಿಸಿದ್ದ ಉಚಿತ ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ಮಾತನಾಡಿದರು.

ಜಾತಿ-ಜಾತಿಗಳಿಂದ ತುಂಬಿ ಕೊಂಡಿರುವ  ಸಮಾಜದ ಪುನರ್‌ ನಿರ್ಮಾಣದ ಕನಸು ಹೊತ್ತ ಬಸವಣ್ಣ  12ನೇ ಶತಮಾನದಲ್ಲಿ ಅಂತರ್ಜಾತಿ ವಿವಾಹವನ್ನು ಪ್ರೋತ್ಸಾಹಿಸಿದರು. ಇಂತಹ ವಿವಾಹಗಳು ಹೆಚ್ಚಾದಂತೆ ಸಮಾಜದಲ್ಲಿ ವೈಚಾರಿಕತೆ ಬೆಳೆಯುತ್ತದೆ ಎಂದರು.

ಸಮಾಜದಲ್ಲಿರುವ ಅಸಮಾನತೆ, ಅಸ್ಪಶ್ಯತೆ ಹೋಗಲಾಡಿಸಿ ಮಾನವೀಯ ಮೌಲ್ಯವನ್ನು ಭಿತ್ತಿ ಹೊಸ ಸಮಾಜ ನಿರ್ಮಿಸಲು ಬಸವಣ್ಣ ಶ್ರಮಿಸಿದ್ದರು. ಇಂತಹ ಸಾಮಾಜಿಕ ಮೌಲ್ಯಗಳ ಕಾರ್ಯವನ್ನು ಮುಂದುವರೆಸುವ ನಿಟ್ಟಿನಲ್ಲಿ ಇಲ್ಲಿನ ಕ್ರಾಂತಿಕಾರಿ ವೀರಶೈವ ಬಳಗ ಮುಂದಾಗಿರುವುದು ಅತ್ಯಂತ ಶ್ಲಾಘನೀಯವಾಗಿದ್ದು ಇಂತಹ ಸಾಮೂಹಿಕ ಹಾಗೂ ಅಂತರ್ಜಾತಿ ಮದುವೆಗಳು ಹೆಚ್ಚಾದಷ್ಟು ನಮ್ಮಲ್ಲಿನ  ಅಸ್ಪೃಶ್ಯತೆ, ಜಾತೀಯತೆ ನಿರ್ಮೂಲನೆ  ಸಾಧ್ಯ ಎಂದು ತಿಳಿಸಿದರು.

ಸುತ್ತೂರು ವೀರಸಿಂಹಾಸನ ಮಠದ ಜಗದ್ಗುರು ಶ್ರೀ ಶಿವರಾತ್ರಿದೇಶಿಕೇಂದ್ರ ಶ್ರೀಗಳು ಮಾತನಾಡಿ, ದಾಂಪತ್ಯ ಜೀವನಕ್ಕೆ ತನ್ನದೇ ಆದ ಪಾವಿತ್ರವಿದೆ  ಸಾಮೂಹಿಕ ವಿವಾಹದಲ್ಲಿ ದಾಂಪತ್ಯಕ್ಕೆ ಕಾಲಿರಿಸಿದ ಎಲ್ಲರೂ ತಮ್ಮ ದಾಂಪತ್ಯ ಜೀವನದಲ್ಲಿ ನಿಷ್ಠರಾಗಿ, ಅನ್ನೋನ್ಯರಾಗಿ  ಜೀವನ ಪರ್ಯಂತ ಇರಬೇಕು ಎಂದರು.

94 ಜೋಡಿಗಳು ವೈವಾಹಿಕ ಜೀವನಕ್ಕೆ ಪಾದಾರ್ಪಣೆ ಮಾಡಿದರು. ವಧುವಿಗೆ ಸೀರೆ, ಬಾಸಿಂಗ, ಮಾಂಗಲ್ಯ ಹಾಗೂ ವರನಿಗೆ ಶ್ವೇತವಸ್ತ್ರ, ಪೇಟ, ಬಾಸಿಂಗವನ್ನು ಕ್ರಾಂತಿಕಾರಿ ಬಳಗ ಬಳಗದ ವತಿಯಿಂದ ಉಚಿತವಾಗಿ ನೀಡಲಾಯಿತು.

ತುಮಕೂರು ಸಿದ್ಧಗಂಗಾ ಮಠದ ಅಧ್ಯಕ್ಷ ಶ್ರೀ ಸಿದ್ಧಲಿಂಗ ಮಹಾಸ್ವಾಮೀಜಿ, ಕಾಗಿನೆಲೆ ಕನಕಗುರು ಪೀಠದ ಶ್ರೀ ಶಿವಾನಂದಪುರಿ ಸ್ವಾಮೀಜಿ, ಆದಿಚುಂಚನಗಿರಿ ಶಾಖಾ ಮಠದ ಸೋಮೇಶ್ವರನಾಥಸ್ವಾಮೀಜಿ, ದೇವನೂರು ಮಠದ ಮಹಾಂತಸ್ವಾಮೀಜಿ, ಮಲ್ಲನಮೂಲೆ ಮಠದ ಚನ್ನಬಸವಸ್ವಾಮೀಜಿ, ಶಾಸಕ ಕಳಲೆ ಕೇಶವಮೂರ್ತಿ, ಬಳಗದ ಅಧ್ಯಕ್ಷ ಸಿ.ಜಗದೀಶ್‌, ಸಂಚಾಲಕರಾದ ಕೆ.ಕೆ.ಜಯದೇವ್‌, ಎನ್‌.ಸಿ.ಬಸವಣ್ಣ, ಎನ್‌.ವಿ.ವಿನಯಕುಮಾರ್‌, ಜಿ.ಮಹದೇವಪ್ರಸಾದ್‌ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ವಿಶೇಷ ಜೋಡಿಗಳು
ಹುಟ್ಟು ಕುರುಡರಾಗಿರುವ ಗುಂಡ್ಲುಪೇಟೆ ತಾಲೂಕಿನ ಗೋಪಾಲಸ್ವಾಮಿ ಬೆಟ್ಟದವಾಸಿ ಸೋಮಶೇಖರ್‌ ಹಾಗೂ ಗುಂಡ್ಲುಪೇಟೆ ತಾಲೂಕಿನ ಚಿಕ್ಕತಪ್ಪೂರು ಗ್ರಾಮದ ರೇಣುಕಾ ಅಂತರ್ಜಾತಿ ವಿವಾಹವಾದರು. ಎಚ್‌.ಡಿ.ಕೋಟೆ ತಾಲೂಕಿನ ಬಾವಿಕೊರೆಹುಂಡಿಯ ಹಿಂದೂ ಧರ್ಮದ ಸೀನಾನಾಯಕ್‌, ತಮಿಳುನಾಡಿನ ತಾಂಜಾವೂರ್‌ ಮೂಲದ ಮುಸ್ಲಿಂ ಯುವತಿ ಬತಾನಿಸಾಳನ್ನು ವರಿಸಿದರು.

ಎಚ್‌.ಡಿ.ಕೋಟೆಯ ವಡಕನಹಳ್ಳಿ ಕ್ರಿಶ್ಚಿಯನ್‌ ಧರ್ಮ ಸಂಜಾತ ಅಜಿತ್‌, ಎಚ್‌.ಡಿ.ಕೋಟೆಯ ಹಿಂದೂ ಯುವತಿ ಸಾವಿತ್ರಿ ವಿವಾಹವಾಗುವುದರ ಮೂಲಕ ಸಮಾಜಕ್ಕೆ ಮಾದರಿಯಾದರು. ರಾಜಸ್ಥಾನದ ಗೀತಾಂಜಲಿ ಮೆಡಿಸಿಟಿ ವಿಶ್ವವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿರುವ ಮೈಸೂರಿನ ದಟ್ಟಗಳ್ಳಿಯ ಶರತ್‌ ಹಾಗೂ ರಾಜಸ್ಥಾನದ ಚಿತ್ತಡ್ಕದ ದಿವ್ಯಾಸಿಂಗ್‌ ವಿವಾಹವಾದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.