ಸುಂಕ ಪಡೆದು ಸೌಲಭ್ಯ ನೀಡದ ಜಿವಿಆರ್‌


Team Udayavani, Aug 11, 2017, 4:13 PM IST

sedam.jpg

ಸೇಡಂ: ಹೆಸರಿಗೆ ಮಾತ್ರ ರಾಜ್ಯ ಹೆದ್ದಾರಿ. ಸರಿಯಾದ ನಿರ್ವಹಣೆ ಇಲ್ಲದೆ ತಗ್ಗು, ದಿನ್ನೆಗಳ ನಿರ್ಮಾಣ. ಆದರೆ ಸುಂಕ ಮಾತ್ರ ಬಿಡಂಗಿಲ್ಲ. ರಸ್ತೆ ಪಕ್ಕ ನಿರ್ಮಿಸಿದ ಗೂಡಂಗಡಿಗಳ ಪೈಕಿ ಒಬ್ಬೊಬ್ಬರಿಗೆ ಒಂದೊಂದು ಷರತ್ತು. ಇದು ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ
ನಿಗಮದಡಿ ವಾಗ್ಧಾರಿಯಿಂದ ರಿಬ್ಬನಪಲ್ಲಿವರೆಗೆ ನಿರ್ಮಿಸಿದ ರಸ್ತೆಯನ್ನು ನಿರ್ವಹಿಸುವ ಜಿವಿಆರ್‌ ಇನ್ಫ್ರಾನವರ ಕಾರ್ಯವೈಖರಿ ಒಂದು ಝಲಕ್‌. ಮಹಾರಾಷ್ಟ್ರದ ವಾಗ್ಧಾರಿಯಿಂದ ತೆಲಂಗಾಣದ ರಿಬ್ಬನಪಲ್ಲಿವರೆಗೆ 120 ಕಿಮೀ ರಸ್ತೆ ನಿರ್ಮಿಸಿರುವ ಜಿವಿಆರ್‌ ಇನ್ಫ್ರಾ ಪ್ರೈವೇಟ್‌ ಲಿಮಿಟೆಡ್‌ ಎಂಬ ಗುತ್ತಿಗೆ ಕಂಪನಿ ಪ್ರತಿನಿತ್ಯ ಲಕ್ಷಾಂತರ ರೂ. ಟೋಲ್‌ ವಸೂಲಿ ಮಾಡುತ್ತಿದೆ. ಆದರೆ ರಸ್ತೆಯನ್ನು
ಸರಿಯಾದ ನಿಟ್ಟಿನಲ್ಲಿ ನಿರ್ವಹಣೆ ಮಾಡುವಲ್ಲಿ ಸಂಪೂರ್ಣ ಎಡವಿದೆ. ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದಡಿ ರಸ್ತೆಯನ್ನು ಸರಿಯಾದ ರೀತಿಯಲ್ಲಿ ನಿರ್ವಹಿಸದೇ ಇದ್ದ ಪಕ್ಷದಲ್ಲಿ ಟೋಲ್‌ ಸಹ ವಸೂಲಿ ಮಾಡುವಂತಿಲ್ಲ. ಆದರೆ ನೀಲಹಳ್ಳಿ, ಹೂಡಾ ಗೇಟ್‌, ಆಡಕಿ ಸೇರಿದಂತೆ ತಾಲೂಕಿನ ಬಹುತೇಕ ಕಡೆಗಳ ರಾಜ್ಯ ಹೆದ್ದಾರಿಯಲ್ಲಿ ತಗ್ಗು, ದಿನ್ನೆಗಳು ನಿರ್ಮಾಣಗೊಂಡಿವೆ. ಅಲ್ಲದೆ ರಸ್ತೆಯಲ್ಲಿ
ಪ್ರಯಾಣಿಸುವಾಗ ಹಡಗಿನಲ್ಲಿ ಪ್ರಯಾಣಿಸಿದ ಅನುಭವವಾಗುತ್ತಿದೆ ಎಂಬುದು ನಿತ್ಯ ಸಂಚಾರಿಗಳ ದೂರಾಗಿದೆ. ಅಲ್ಲದೆ ರಾಜ್ಯ ಹೆದ್ದಾರಿ ಯಿಂದ 150 ಮೀ. ದೂರದಲ್ಲಿ ಗೂಡಂಗಡಿಯಾಗಲಿ, ಹೋಟೆಲ್‌ ಅಥವಾ ಯಾವುದೇ ವ್ಯಾಪಾರ ನಡೆಸಲು ಅನುಮತಿ ಪಡೆಯಬೇಕು. ಆದರೆ ವಾಗ್ಧಾರಿಯಿಂದ ರಿಬ್ಬನಪಲ್ಲಿವರೆಗೆ ರಾಜ್ಯ ಹೆದ್ದಾರಿಗೆ ಹೊಂದಿಕೊಂಡು ಅನೇಕ ಗೂಡಂಗಡಿಗಳು ತಲೆ ಎತ್ತಿವೆ. ಜಿವಿಆರ್‌ ಅಧಿಕಾರಿಗಳು ಮಾತ್ರ ಬೆರಳೆಣಿಕೆಯಷ್ಟು ಅಂಗಡಿಗಳಿಗೆ ಸೂಚನೆ ನೀಡಿ ಒಂದು ಕಣ್ಣಿಗೆ ಸುಣ್ಣ ಮತ್ತೂಂದು ಕಣ್ಣಿಗೆ ಬೆಣ್ಣೆ ಸವರುವ ಕೆಲಸ ಮಾಡುತ್ತಿದ್ದಾರೆ. ಅಂಬುಲೆನ್ಸ್‌ ಸೇವೆ ಎಂದರೆ ?: ರಾಜ್ಯ ಹೆದ್ದಾರಿ ಸುರಕ್ಷತೆ ದೃಷ್ಟಿಯಿಂದ ರಸ್ತೆಯನ್ನು ನಿರ್ವಹಿಸುವ
ಗುತ್ತಿಗೆ ಕಂಪನಿಗಳು ಅಂಬುಲೆನ್ಸ್‌ ಸೇವೆ ಕಲ್ಪಿಸಬೇಕು. ಆದರೆ ಜಿವಿಆರ್‌ ಮಾತ್ರ ನಾಮಕಾವಾಸ್ತೆ ಎಂಬಂತೆ ಅಂಬುಲೆನ್ಸ್‌ ಸೇವೆ ಒದಗಿಸುತ್ತಿದೆ. ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿದ ಬಹುತೇಕ ಅಪಘಾತಗಳಲ್ಲಿ ಸರ್ಕಾರದ ಅಂಬುಲೆನ್ಸ್‌ಗಳೇ ಹೆಚ್ಚು ಸೇವೆ ನೀಡಿವೆ.
ಶೌಚಾಲಯ ಎಲ್ಲಿ?: ರಾಜ್ಯ ಹೆದ್ದಾರಿಗಳಲ್ಲಿ ಬೃಹತ್‌ ಗಾತ್ರದ ವಾಹನಗಳ ಚಾಲಕರ ಅನುಕೂಲಕ್ಕೆಂದು ಲಾರಿ ಯಾರ್ಡ್‌ ಹೆಸರಿನಲ್ಲಿ
ಹೆಚ್ಚಿನ ರಸ್ತೆ ನಿರ್ಮಿಸಲಾಗುತ್ತದೆ. ಅದರಲ್ಲಿ ಸೂಕ್ತ ರೀತಿಯ ಶೌಚಾಲಯವನ್ನು ಕಲ್ಪಿಸಬೇಕು. ಅದರಂತೆ ಮೊದಲಿಗೆ ಜಿವಿಆರ್‌ ಶೌಚಾಲಯ ನಿರ್ಮಿಸಿದ್ದು, ಮೂರೇ ತಿಂಗಳಲ್ಲಿ ನೆಲಕಚ್ಚಿದೆ. ಒಟ್ಟಾರೆಯಾಗಿ ರಸ್ತೆಯನ್ನು ಸರಿಯಾದ ರೀತಿಯಲ್ಲಿ ನಿರ್ವಹಿಸದೇ ಪ್ರಯಾಣಿಕರಿಂದ ಟೋಲ್‌ ವಸೂಲಿ ಮಾಡುತ್ತಿರುವ ಜಿವಿಆರ್‌ ಇನ್ಫ್ರಾ ಪ್ರೈ.ಲಿ. ವಿರುದ್ಧ ಜನ ಹಿಡಿಶಾಪ ಹಾಕುತ್ತಿದ್ದಾರೆ.

ಶಿವಕುಮಾರ ಬಿ. ನಿಡಗುಂದಾ 

ಟಾಪ್ ನ್ಯೂಸ್

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.