ಗಣೇಶ ಪ್ರತಿಷ್ಠಾಪನೆಗೆ ನಿಬಂಧನೆ ವಿಧಿಸಿಲ್ಲ: ದತ್ತಾ


Team Udayavani, Aug 13, 2017, 7:35 AM IST

12BNP-(11).jpg

ಬೆಂಗಳೂರು: ಗಣೇಶ ಚತುರ್ಥಿ ಅಂಗವಾಗಿ ಗಣೇಶ ವಿಗ್ರಹ ಪ್ರತಿಷ್ಠಾಪನೆಗೆ ಸಂಬಂಧಿಸಿದಂತೆ ಪೊಲೀಸ್‌ ಇಲಾಖೆಯಿಂದ ಬಾಂಡ್‌ ಠೇವಣಿ ಸೇರಿ ಯಾವುದೇ ನಿಬಂಧನೆಗಳನ್ನು ವಿಧಿಸಿಲ್ಲ ಎಂದು ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಆರ್‌. ಕೆ.ದತ್ತಾ ಸ್ಪಷ್ಟಪಡಿಸಿದ್ದಾರೆ.

ಪೊಲೀಸ್‌ ಪ್ರಧಾನ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಸ್ತೆಗಳಲ್ಲಿ ಗಣೇಶ ವಿಗ್ರಹ ಪ್ರತಿಷ್ಠಾಪನೆ ಮಾಡಲು 10 ಲಕ್ಷ ರೂ. ಬಾಂಡ್‌ ಇಡಬೇಕು, ಇಂತಿಷ್ಟೇ ಎತ್ತರ ಇರಬೇಕು. ಇದೇ ಸ್ಥಳದಲ್ಲಿಡಬೇಕು, ಇಂತಿಷ್ಟು ಮಯದೊಳಗೆ ವಿಸರ್ಜಿಸಬೇಕು. ಇಂತಹುದೇ ಬಣ್ಣ ಬಳಸಬೇಕು, ಮೆರವಣಿಗೆಯಲ್ಲಿ ಸಿಡಿ ಮದ್ದು ಸಿಡಿಸಬಾರದು, ಬಣ್ಣ ಎರಚಬಾರದು, ಡಿಜೆ ಬಳಸಬಾರದು ಎಂಬ ನಿಬಂಧನೆಗಳನ್ನು ಪೊಲೀಸ್‌ ಇಲಾಖೆ ವಿಧಿಸಿದೆ ಎಂದು ಹಿಂದೂ ಸಂಘಟನೆಯೊಂದು ಆರೋಪಿಸುತ್ತಿದೆ. ಆದರೆ, ವಾಸ್ತವವಾಗಿ ಅಂತಹ ಯಾವ ನಿಬಂಧನೆಗಳನ್ನೂ ವಿಧಿಸಿಲ್ಲ.

ಇದೊಂದು ವದಂತಿ. ಇದಕ್ಕೆ ಸಾರ್ವಜನಿಕರು ಕಿವಿಗೊಡಬಾರದು ಎಂದು ಅವರು ಹೇಳಿದರು. ಪೊಲೀಸ್‌ ಇಲಾಖೆ ಒಂದು ಪಕ್ಷದ ಪರವಾಗಿ ಕೆಲಸ ಮಾಡುತ್ತಿದೆ. ಹಿಂದು ಧರ್ಮದ ವಿರೋಧಿಯಾಗಿದೆ ಎಂದು ಸಂಘಟನೆ ಗಂಭೀರ ಆರೋಪ ಮಾಡುತ್ತಿದೆ. ಪೊಲೀಸ್‌ ಇಲಾಖೆಗೆ ರಾಜಕೀಯ ಪಕ್ಷಗಳ ಪರ ಕೆಲಸ ಮಾಡುವ ಅಗತ್ಯವಿಲ್ಲ  ಸಾರ್ವಜನಿಕರಿಗೆ ಸೂಕ್ತ ರಕ್ಷಣೆ ಒದಗಿಸುವುದೇ ಇಲಾಖೆಯ ಮುಖ್ಯ ಉದ್ದೇಶ. ಗಣೇಶ್‌ ಹಬ್ಬದ ವೇಳೆ ಬಂದೋಬಸ್ತ್ ಕೈಗೊಳ್ಳುವುದು ಆಯಾ ಎಸ್‌ಪಿ ಹಾಗೂ ನಗರ ಪೊಲೀಸ್‌ ಆಯುಕ್ತರಿಗೆ ಬಿಟ್ಟಿದ್ದು. ಸ್ಥಳೀಯ ಪರಿಸ್ಥಿತಿಗೆ ಅನುಗುಣವಾಗಿ ಅಧಿಕಾರಿಗಳು ಕ್ರಮಕೈಗೊಳ್ಳಲಿದ್ದಾರೆ.

ಹಬ್ಬಕ್ಕೂ ಮೊದಲು ಶಾಂತಿ ಸಭೆ ನಡೆಸಬೇಕು ಸೇರಿ ಕೆಲ ಸೂಚನೆಗಳನ್ನು ಪಾಲಿಸುವಂತೆ ಆದೇಶಿಸಲಾಗಿದೆ
ಎಂದು ತಿಳಿಸಿದರು.

ಪೊಲೀಸರ ವರ್ಗಾವಣೆಯಲ್ಲಿ ರಾಜಕೀಯ ಹಸ್ತಕ್ಷೇಪವಾಗಿಲ್ಲ. ಎಲ್ಲ ವರ್ಗಾವಣೆ ಪ್ರಕ್ರಿಯೆಯನ್ನು ಪೊಲೀಸ್‌ ಎಸ್ಟಾಬ್ಲಿಷ್‌ಮೆಂಟ್‌
ಬೋರ್ಡ್‌ ಮೂಲಕವೇ ಮಾಡಲಾಗಿದೆ. ಇದೊಂದು ಸಾಮಾನ್ಯ ಪ್ರಕ್ರಿಯೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಸ್ವಾತಂತ್ಯೊತ್ಸವಕ್ಕೆ ಭಾರೀ ಭದ್ರತೆ: ಆ.15ರ ಸ್ವಾತಂತ್ರೊéàತ್ಸವ ದಿನಾಚರಣೆಗೆ ಎಲ್ಲೆಡೆ ಬಿಗಿ ಬಂದೋಬಸ್ತ್
ಮಾಡಲಾಗಿದೆ. ವಿಶೇಷವಾಗಿ ಯಾವುದೇ ಕಟ್ಟೆಚ್ಚರ ವಹಿಸುವಂತೆ ಸೂಚನೆಗಳು ಬಂದಿಲ್ಲ. ಎಂದಿನಂತೆ ಸೂಕ್ತ ಭದ್ರತೆ ವಹಿಸುವಂತೆ ಆಯಾ ಜಿಲ್ಲಾ ಎಸ್ಪಿ ಮತ್ತು ನಗರ ಪೊಲೀಸ್‌ ಆಯುಕ್ತರಿಗೆ ಸೂಚಿಸಲಾಗಿದೆ ಎಂದರು.

ಗಣೇಶ ವಿಗ್ರಹ ಪ್ರತಿಷ್ಠಾಪನೆ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವದಂತಿಗಳನ್ನು ಹರಿಬಿಟ್ಟಿರುವ ವ್ಯಕ್ತಿಗಳು ಕೂಡಲೇ ತಮ್ಮ ದುಷ್ಕೃತ್ಯವನ್ನು ನಿಲ್ಲಿಸದಿದ್ದರೆ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕಾಗುತ್ತದೆ. ಸಮಾಜದ ಸ್ವಾಸ್ಥ್ಯ ಹಾಳು ಮಾಡುವ ಯಾರನ್ನೂ ಸುಮ್ಮನೆ ಬಿಡುವುದಿಲ್ಲ.
– ಆರ್‌.ಕೆ.ದತ್ತಾ, ಡಿಜಿಪಿ

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.