ಕಲ್ಲಿನ ಕೋರೆಯಲ್ಲಿ ಜಲ ಸಂರಕ್ಷಣೆ: ಅಳಿಕೆಯ ಕೃಷಿಕನ ಮಾದರಿ ಪ್ರಯೋಗ


Team Udayavani, Aug 13, 2017, 12:57 PM IST

ಜನವರಿಯಿಂದ ಕೃಷಿಭೂಮಿಗೆ ಕೋರೆ ನೀರು ಬಳಸುವ ಯೋಜನೆ

ವಿಟ್ಲ: ಮಳೆಗಾಲದಲ್ಲಿ ನೀರು ತುಂಬಿ ಬೃಹತ್‌ ಕೆರೆಗಳಾಗಿ ಪರಿವರ್ತನೆಗೊಳ್ಳುವ ಕಲ್ಲಿನ ಕೋರೆಗಳನ್ನು ಸರಕಾರ ಮುಚ್ಚಿಸುತ್ತದೆ. ಇಂತಹ ಕೋರೆಗಳಿಂದ ಅನೇಕ ಜೀವಹಾನಿ ಸಂಭವಿಸಿರುವುದರಿಂದ ಮುಚ್ಚುವುದು ಅನಿವಾರ್ಯ ಎಂಬಂತಾಗಿದೆ. ಆದರೆ ಇಂತಹ ಕೋರೆಯಲ್ಲಿ ಜಲಸಂರಕ್ಷಣೆ ಮಾಡುತ್ತಿರುವ  ಕೃಷಿಕರೋರ್ವರು ಮಾದರಿಯಾಗಿದ್ದಾರೆ. ಅಳಿಕೆ ಗ್ರಾಮದ ಕಲ್ಲೆಂಚಿಪಾದೆ ಬಾಂಡೀಲು ನಿವಾಸಿ, ಅಳಿಕೆ ವ್ಯವಸಾಯ ಸೇವಾ ಸಹಕಾರಿ ಸಂಘದ ಉದ್ಯೋಗಿ ಚಂದ್ರಹಾಸ ಅವರು ಈ ಕಾರ್ಯ ಮಾಡುತ್ತಿದ್ದಾರೆ. ತಮ್ಮ ವರ್ಗ ಭೂಮಿ ಮತ್ತು ಕುಮ್ಕಿಯಲ್ಲಿರುವ ನಿರುಪಯುಕ್ತ ಕಲ್ಲಿನ ಕೋರೆಗಳಲ್ಲಿ ಮಳೆ ನೀರು ಸಂಗ್ರಹಿಸಿ ನೀರು ಇಂಗಿಸುವಂತೆ ಮಾಡಿದ್ದಾರೆ.

ಜಿ.ಪಂ. ಯೋಜನೆ ಇತ್ತು 
ಕಲ್ಲೆಂಚಿಪಾದೆ ಭಾಗದ ಜನರ ನೀರಿನ ಸಮಸ್ಯೆಯನ್ನು ಬಗೆಹರಿಸುವುದಕ್ಕಾಗಿ ಜಿ. ಪಂ. ಮತ್ತು ಸ್ಥಳೀಯರ ಸಹಕಾರದೊಂದಿಗೆ ಈ ಭಾಗದಲ್ಲಿನ ನಿರುಪಯುಕ್ತ ಕಲ್ಲಿನ ಕೋರೆಯನ್ನು ಸ್ವಚ್ಛಗೊಳಿಸಿ ಕೆರೆಯಾಗಿ ಅಭಿವೃದ್ಧಿಪಡಿಸಲು ಎರಡು ವರ್ಷಗಳ ಹಿಂದೆ ಯೋಜನೆ ರೂಪಿಸಲಾಗಿತ್ತು. ಸುಮಾರು 1ಲ.ರೂ. ವೆಚ್ಚದಲ್ಲಿ ಕೋರೆಯಲ್ಲಿದ್ದ ಮಣ್ಣನ್ನು ಸಾಗಿಸಲು ಪ್ರಯತ್ನಿಸಲಾಗಿತ್ತು. ಕೋರೆಯಲ್ಲಿರುವ ನೀರಿನ ಸಣ್ಣ ಹರಿವಿನ ಜತೆಗೆ, ಮಳೆ ನೀರಿನ ಕೊಯ್ಲು ಮಾಡುವ ಯೋಜನೆ ಅದಾಗಿತ್ತು. ಆದರೆ ಇದಕ್ಕೆ ಸರಕಾರದಿಂದ ಹೆಚ್ಚಿನ ಅನುದಾನ ಸಿಗದೆ ಕಾಮಗಾರಿ ಅರ್ಧಕ್ಕೆ ಸ್ಥಗಿತಗೊಂಡಿತ್ತು.

ಒಂದು ಎಕರೆ ವಿಸ್ತಾರ
ಕಲ್ಲೆಂಚಿಪಾದೆ ಬಾಂಡೀಲು ಪ್ರದೇಶದ ಕೃಷಿಕ ಚಂದ್ರಹಾಸ ಅವರು ಒಂದು ಎಕ್ರೆ ಭೂಭಾಗದಲ್ಲಿರುವ ಕಲ್ಲಿನ ಕೋರೆಯಲ್ಲಿ ಮಳೆ ನೀರು ಇಂಗಿಸಲು ಧೈರ್ಯವಾಗಿ ನಿರ್ಧರಿಸಿದರು. ಒಂದು ಲಕ್ಷ ರೂ.ವೆಚ್ಚದಲ್ಲಿ ನಿರ್ಮಿಸಿದ ಈ ಕೆರೆಯಲ್ಲಿ ಇದೀಗ ಸುಮಾರು 50 ಅಡಿ ಎತ್ತರಕ್ಕೆ ನೀರು ಸಂಗ್ರಹವಾಗಿದೆ. ಜನವರಿ ಬಳಿಕ ನೀರಿನ ಬಳಕೆ ಆರಂಭಿಸಿದರೂ ಎಪ್ರಿಲ್‌ ಮೇ ತಿಂಗಳ ವರೆಗೆ ಈ ಕೆರೆಯಲ್ಲಿ ನೀರು ಲಭ್ಯವಾಗಬಹುದು ಎಂಬ ಖಚಿತ ಅಭಿಪ್ರಾಯ ಅವರದು. ಕೃಷಿ ಭೂಮಿಗೆ ಹಲವು ವರ್ಷಗಳಿಂದ ನೀರಿನ ಸಮಸ್ಯೆ ಬರುತ್ತಿದ್ದು, ಮೂರು ನಾಲ್ಕು ಕೊಳವೆ ಬಾವಿ ಕೊರೆಸಿದರೂ ನೀರು ಸಿಕ್ಕಿರಲಿಲ್ಲ. ವರ್ಗ, ಕುಮ್ಕಿ ಹಾಗೂ ಸರಕಾರಿ ಜಾಗಗಳನ್ನು ಒಳಗೊಂಡಿರುವ ಸುಮಾರು ಒಂದು ಎಕರೆ ಜಾಗದಲ್ಲಿ ಹಳೆಯ ಕಲ್ಲಿನ ಕೋರೆ ನಿರುಪಯುಕ್ತವಾಗಿತ್ತು. ಇದರಲ್ಲಿ ನೀರು ಇಂಗಿಸುವ ಕ್ರಮ ಕೈಗೊಂಡಲ್ಲಿ ಕೃಷಿಗೆ ಸಹಕಾರಿಯಾಗ ಬಹುದೆಂಬ ನಿಟ್ಟಿನಲ್ಲಿ ಈ ಪ್ರಯತ್ನ ಮಾಡಲಾಗಿದೆ ಎಂದು ಚಂದ್ರಹಾಸ ಅವರು ಹೇಳುತ್ತಾರೆ.

ನೀರು ಸಂಗ್ರಹಕ್ಕೆ ದಾರಿ
ಯಾರಾದರೂ ಈಜಾಡಿ ಅವಘಡ ಉಂಟಾಗಬಹುದು ಅಥವಾ ಇನ್ನಿತರ ರೀತಿಯಲ್ಲಿ ದುರಂತ ಸಂಭವಿಸಬಹುದು ಎಂಬ ಭಯದಿಂದ  ಹೆಚ್ಚಿನವರು ಕಲ್ಲಿನ ಕೋರೆಗಳಲ್ಲಿ ನೀರು ಸಂಗ್ರಹಿಸಲು ಹಿಂದೇಟು ಹಾಕುತ್ತಾರೆ. ಆದರೆ ಇದೀಗ ಚಂದ್ರಹಾಸ ಅವರ ಪ್ರಯತ್ನ ಇತರ ಕೆಲವರಿಗೆ ಪ್ರೇರಣೆಯಾಗಲಿದೆ. ಸೂಕ್ತ ಸುರಕ್ಷಾ ಕ್ರಮಗಳೊಂದಿಗೆ ಒಂದಷ್ಟು ಯೋಜಿತವಾಗಿ ಜಲಸಂರಕ್ಷಣೆ ಮಾಡಿದರೆ ನಿಷ್ಪ್ರಯೋಜಕ, ಅಪಾಯಕಾರಿಯಾಗಿ ಉಳಿದಿರುವ ಇಂತಹ ಕಲ್ಲಿನ ಕೋರೆಗಳಿಗೂ ಜೀವ ಬಂದೀತು. ಅಪಾಯವೂ ದೂರವಾದೀತು. ಜಲ ಸಂರಕ್ಷಣೆ ಆಗಲು ಸಾಧ್ಯ.

ಸುರಕ್ಷತಾ ಕ್ರಮ

ನೀರು ಸಂಗ್ರಹಿಸಿದ ಕಲ್ಲಿನ ಕೋರೆಯ ಸುತ್ತ ಬೇಲಿ ಹಾಕಿ ಅಹಿತಕರ ಘಟನೆ ಸಂಭವಿಸದಂತೆ ಮುನ್ನೆಚ್ಚರಿಕೆ ಫಲಕ ಅಳವಡಿಸಲಾಗಿದೆ.

– ಉದಯಶಂಕರ್‌ ನೀರ್ಪಾಜೆ

ಟಾಪ್ ನ್ಯೂಸ್

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

9-kushtagi

Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.