800 ಕೋಟಿ ವೆಚ್ಚದ ಕಾಮಗಾರಿಗೆ ಚಾಲನೆ
Team Udayavani, Aug 14, 2017, 12:01 PM IST
ಬೀದರ: ಬೀದರ ನಗರದಲ್ಲಿ ದೊಡ್ಡ ಸಭೆ ನಡೆಯುತ್ತಿರುವುದು ಇದೇ ಮೊದಲು. ಇದೊಂದು ಅವಿಸ್ಮರಣೀಯ ದಿನವಾಗಿದ್ದು, ಒಂದೇ ವೇದಿಕೆಯಲ್ಲಿ 800 ಕೋಟಿ ರೂ. ವೆಚ್ಚದ ಯೋಜನೆಗಳಿಗೆ ಚಾಲನೆ ಕೊಡುತ್ತಿರುವುದು ಬೀದರ ಇತಿಹಾಸದಲ್ಲೇ ಮೊದಲು ಎಂದು
ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು. ನಗರದ ನೆಹರು ಕ್ರೀಡಾಂಗಣದ ಬೃಹತ್ ವೇದಿಕೆಯಲ್ಲಿ ರವಿವಾರ ನಡೆದ ಸಮಾರಂಭದಲ್ಲಿ
ಸುಮಾರು 800 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಮತ್ತು ಕೆಲವು ಯೋಜನೆಗಳಿಗೆ ಶಂಕು ಸ್ಥಾಪನೆ ನೆರವೇರಿಸಿದ ಬಳಿಕ ನೂತನ ಜಿಲ್ಲಾ ಆಸ್ಪತ್ರೆ ಉದ್ಘಾಟಿಸಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಏನೂ ಮಾಡಿಲ್ಲ ಎಂದು ಟೀಕೆ ಮಾಡುವವರಿಗೆ ಈ ಕಾರ್ಯಕ್ರಮವೇ ಉತ್ತರವಾಗಿದೆ ಎಂದರು. ದಿ| ಧರ್ಮಸಿಂಗ್ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಬೀದರನಲ್ಲಿ ವೈದ್ಯ ಕಾಲೇಜು ಮಂಜೂರು ಮಾಡಿಸಿ ಉದ್ಘಾಟನೆಯೂ ಮಾಡಲಾಗಿತ್ತು. ಆದರೆ, ನಂತರ ಮೂರ್ನಾಲ್ಕು ಜನ ಸಿಎಂಗಳು ಅಧಿಕಾರ ನಡೆಸಿದರೂ ಒಂದು ಆಸ್ಪತ್ರೆ ಮಂಜೂರು ಮಾಡಿಸಲು ಸಾಧ್ಯವಾಗಲಿಲ್ಲ. ಪುನಃ ಕಾಂಗ್ರೆಸ್ ಸರ್ಕಾರವೇ ಸುಸಜ್ಜಿತ ಆಸ್ಪತ್ರೆ ಮಂಜೂರು ಮಾಡಿ ಲೋಕಾರ್ಪಣೆಯನ್ನೂ ಮಾಡಿದೆ. ರಾಜ್ಯದಲ್ಲಿ ಹಿಂದೆ ಕೇವಲ 4 ಸರ್ಕಾರಿ ವೈದ್ಯ ಕಾಲೇಜಿಗಳಿದ್ದರೆ ನಮ್ಮ ಸರ್ಕಾರದ ಅವಧಿಯಲ್ಲಿ ಹೊಸದಾಗಿ 16 ಕಾಲೇಜು ಮಂಜೂರು ಮಾಡಿಸಲಾಗಿದೆ. ಬಡ ಮಕ್ಕಳು ಸಹ ವೈದ್ಯರಾಗಬೇಕೆಂಬುದು ಸರ್ಕಾರದ ಉದ್ದೇಶ. ಬೇರೆಯವರು ಈ ಯೋಚನೆಯನ್ನೂ ಮಾಡಲಿಲ್ಲ ಎಂದರು. ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಸಚಿವ ಶರಣಪ್ರಕಾಶ ಪಾಟೀಲ, ಶಾಸಕರಾದ ರಹೀಮ್ ಖಾನ್, ರಾಜಶೇಖರ ಪಾಟೀಲ, ಮಲ್ಲಿಕಾರ್ಜುನ ಖೂಬಾ, ವಿಜಯಸಿಂಗ್, ಶರಣಪ್ಪ ಮಟ್ಟೂರ, ಉಮೇಶ ಜಾಧವ, ಪುಟ್ಟರಂಗಶೆಟ್ಟಿ, ಜಿಪಂ ಅಧ್ಯಕ್ಷೆ ಭಾರತಬಾಯಿ, ಉಪಾಧ್ಯಕ್ಷ ಪ್ರಕಾಶ ಪಾಟೀಲ, ಬುಡಾ ಅಧ್ಯಕ್ಷ ಸಂಜಯ ಜಾಗೀರದಾರ, ನಗರಸಭೆ ಉಪಾಧ್ಯಕ್ಷೆ ಶಾಲಿನಿ, ಪ್ರಮುಖರಾದ ಬಸವರಾಜ ಬುಳ್ಳಾ, ಕೃಷ್ಣಮೂರ್ತಿ, ಡಿಸಿ ಡಾ|ಮಹಾದೇವ, ಎಸ್ಪಿ ದೇವರಾಜ, ಸಿಇಒ ಡಾ|ಸೆಲ್ವಮಣಿ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಹಣ ಹಂಚುವ ದೂರು: ನಾಗಮಾರಪಳ್ಳಿ ಮನೆಯಲ್ಲಿ ಪರಿಶೀಲನೆ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
MUST WATCH
ಹೊಸ ಸೇರ್ಪಡೆ
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Kunigal; ಬೈಕ್ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ
ನಮ್ಮ ವಿರುದ್ಧ ಷಡ್ಯಂತ್ರ: ಎಚ್.ಡಿ. ರೇವಣ್ಣ