ಮನೆಯೆದುರು ನಾಯಿ ಶೌಚ: ಸ್ವಚ್ಛತೆ ಶಿಕ್ಷೆ


Team Udayavani, Aug 14, 2017, 12:41 PM IST

hub3.jpg

ಹುಬ್ಬಳ್ಳಿ: ತಾವು ಸಾಕುವ ನಾಯಿಯನ್ನು ಬೆಳಗ್ಗೆ, ಸಂಜೆ ವೇಳೆ ವಾಯುವಿಹಾರ ನೆಪದಲ್ಲಿ ಕರೆದೊಯ್ದು ಇನ್ನೊಬ್ಬರ ಮನೆ ಮುಂದೆ ಶೌಚ, ಮೂತ್ರ ಮಾಡಿಸುವ ಜನ ಅನೇಕರಿದ್ದಾರೆ. ಇಂತಹ ಕಾಟದಿಂದ ರೋಸಿ ಹೋದ ನಾಗರಿಕರೊಬ್ಬರು ಮನೆ ಮುಂದೆ ಇಂತಹ ಕಾರ್ಯಕ್ಕೆ “ಎಚ್ಚರಿಕೆ ಫ‌ಲಕ’ ಹಾಕಿದ್ದು, ಮನೆ ಮುಂದೆ ನಾಯಿ ಶೌಚ ಮಾಡಿಸುವವರಿಂದಲೇ ಅದನ್ನು ಎತ್ತಿ ಹಾಕಿಸುವ ಮೂಲಕ ಬುದ್ಧಿ ಕಲಿಸಿದ್ದಾರೆ! 

ಇಲ್ಲಿನ ಅಶೋಕ ನಗರದ ಉದ್ಯಾನವನ ಎದುರಿನ ನಿವಾಸಿ ಗಣೇಶ ಜರತಾರಘರ ಎನ್ನುವವರ ಮನೆ ಇದ್ದು, ಅನೇಕರು ತಮ್ಮ ನಾಯಿಗಳನ್ನು ತೆಗೆದುಕೊಂಡು ಬಂದು ಅವರ ಹೊರಗೋಡೆಗೆ ಹೊಂದಿಕೊಂಡಂತೆ ಶೌಚ ಹಾಗೂ ಮೂತ್ರ ಮಾಡಿಸುತ್ತಿದ್ದರು. ಈ ಬಗ್ಗೆ ಹೇಳಿದರೂ ಕೇಳುವವರಿಲ್ಲವಾಗಿತ್ತು.

ಇದರ ದುರ್ನಾತದಿಂದ ಮನೆಯವರು ಹೊರಗೆ ಕುಳಿತುಕೊಳ್ಳುವುದಕ್ಕೆ, ಮಧ್ಯಾಹ್ನ ವೇಳೆ ವಾಹನ ನಿಲ್ಲಿಸುವುದಕ್ಕೂ ಸಾಧ್ಯವಾಗದ ಸ್ಥಿತಿ ಇತ್ತು. ಇದರಿಂದ ರೋಸಿ ಹೋದ ಜರತಾರಘರ ಅವರು ಮನೆಯ ಮುಂದೆ ಎಚ್ಚರಿಕೆ ನೋಟಿಸ್‌ ಅಂಟಿಸಿದ್ದಾರಲ್ಲದೆ, ನೋಟಿಸ್‌ ಅಂಟಿಸಿದ ಮೇಲೂ ಕೆಲವರು ತಮ್ಮದೇ ಕಾರ್ಯಕ್ಕೆ ಮುಂದಾದಾಗ ಒಬ್ಬರನ್ನು ಹಿಡಿದು ಅವರ ನಾಯಿ ಮಾಡಿದ ಶೌಚವನ್ನು ಅವರ ಕೈಯಿಂದಲೇ ಎತ್ತಿ ಹಾಕಿಸಿದ್ದಾರೆ. 

ಕೆಲವೊಂದು ಬಾರಿ ಬಡಿಗೆ ಹಿಡಿದು ಕಾವಲು ನಿಲ್ಲುವ ಸ್ಥಿತಿ ಅನುಭವಿಸಿದ್ದೇವೆ. ಬೆಳಗ್ಗೆ ನಾವು ಮನೆ ಒಳಗೆ ಇದ್ದಾಗ ಕೆಲವರು ನಾಯಿ ಮಲ-ಮೂತ್ರ ಮಾಡಿಸಿ ಜಾಗ ಖಾಲಿ ಮಾಡಿಸುತ್ತಿದ್ದರು. ಇದರ ತಡೆಗೆ ಎಚ್ಚರಿಕೆ  ನೋಟಿಸ್‌ ಅಂಟಿಸಬೇಕಾಯಿತು. ಒಬ್ಬರಿಂದ ಅವರ ಕೈಯಿಂದಲೇ ನಾಯಿ ಮಲ ಎತ್ತಿಸಿದಾಗಿನಿಂದ ಮನೆ ಮುಂದೆ ಹೊಲಸು ಮಾಡುವುದು ನಿಂತಿದೆ ಎಂಬುದು ಗಣೇಶ ಜರತಾರಘರ ಅವರ ಅನಿಸಿಕೆ. 

ಟಾಪ್ ನ್ಯೂಸ್

Athani; ಲಕ್ಷ್ಮಣ್ ಸವದಿ ಸಹಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಮಹಿಳೆ ಸಾವು

Athani; ಲಕ್ಷ್ಮಣ್ ಸವದಿ ಸಹಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಮಹಿಳೆ ಸಾವು

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

2nd PUC Exam-2 Result Declared; 35.25% students passed

2nd PUC ಪರೀಕ್ಷೆ-2 ಫಲಿತಾಂಶ ಪ್ರಕಟ; ಶೇ. 35.25 ವಿದ್ಯಾರ್ಥಿಗಳು ಉತ್ತೀರ್ಣ

13

Poonam Pandey: ನನ್ನ ಬೆತ್ತಲೆ ವಿಡಿಯೋ ಲೀಕ್‌ ಮಾಡಿದ್ದೇ ನನ್ನ ಮಾಜಿ ಗೆಳೆಯ – ಪೂನಂ ಪಾಂಡೆ

12-hondisi-bareyiri

YouTube ನಲ್ಲಿ ಹೊಂದಿಸಿ ಬರೆಯಿರಿ; ಉಚಿತವಾಗಿ ನೋಡಿ, ಇಷ್ಟವಾದರೆ ಕಾಸು ಹಾಕಿ…

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

11

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parameshwar

CBI ಗೆ ಕೊಡುವ ಅಗತ್ಯವಿಲ್ಲ; ಅಂಜಲಿ ಪ್ರಕರಣ ಕೂಡ ಸಿಐಡಿಗೆ:ಡಾ.ಜಿ.ಪರಮೇಶ್ವರ್

1-qweeqwe

Hubballi; ನೇಹಾ, ಅಂಜಲಿ ನಿವಾಸಗಳಿಗೆ ಡಾ.ಜಿ.ಪರಮೇಶ್ವರ್ ಭೇಟಿ

Hubli; ಅಂಜಲಿ ಕುಟುಂಬಸ್ಥರಿಗೆ ಸರ್ಕಾರ ಪರಿಹಾರ ಘೋಷಿಸಬೇಕು: ಶಂಕರ ಪಾಟೀಲ್ ಮುನೇನಕೊಪ್ಪ

Hubli; ಅಂಜಲಿ ಕುಟುಂಬಸ್ಥರಿಗೆ ಸರ್ಕಾರ ಪರಿಹಾರ ಘೋಷಿಸಬೇಕು: ಶಂಕರ ಪಾಟೀಲ್ ಮುನೇನಕೊಪ್ಪ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

1-wqqewqeq

Hubli; ಜನರಲ್ಲಿ ಪೊಲೀಸರ ಬಗ್ಗೆ ನಂಬಿಕೆ ಹೋಗಿದೆ: ಎಡಿಜಿಪಿ ಹಿತೇಂದ್ರ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

colon cancer

Colon Cancer; ಸಂಕೇತಗಳು ಮತ್ತು ಲಕ್ಷಣಗಳು, ರೋಗನಿರ್ಣಯ ಮತ್ತು ಚಿಕಿತ್ಸೆ

Athani; ಲಕ್ಷ್ಮಣ್ ಸವದಿ ಸಹಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಮಹಿಳೆ ಸಾವು

Athani; ಲಕ್ಷ್ಮಣ್ ಸವದಿ ಸಹಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಮಹಿಳೆ ಸಾವು

New Kannada serial: ಕಿರುತೆರೆಯತ್ತ ದಿವ್ಯಾ ಉರುಡುಗ

New Kannada serial: ಕಿರುತೆರೆಯತ್ತ ದಿವ್ಯಾ ಉರುಡುಗ

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

14

Bank Of Bhagyalakshmi: ಬ್ಯಾಂಕ್‌ನತ್ತ ದೀಕ್ಷಿತ್‌ ಚಿತ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.