ಕೇಂದ್ರದ ಅನುದಾನ ಎಲ್ಲಿ ಹೋಯ್ತು ಸಿದ್ದರಾಮಯ್ಯನವರೇ? ಶಾ ಸವಾಲ್
Team Udayavani, Aug 14, 2017, 3:35 PM IST
ಬೆಂಗಳೂರು: ದೇಶದ ಅತ್ಯಂತ ಭ್ರಷ್ಟ ಸರ್ಕಾರ ಕರ್ನಾಟಕ. ಭ್ರಷ್ಟಾಚಾರದಲ್ಲಿ ಸಿದ್ದರಾಮಯ್ಯ ಸರ್ಕಾರಕ್ಕೆ ಮೆಡಲ್ ಕೊಡಬೇಕು. ಕೇಂದ್ರ ಸರ್ಕಾರ ಏನು ಮಾಡಿದೆ ಎಂದು ಕೇಳುವ ಸಿದ್ದರಾಮಯ್ಯನವರೇ, ಬಡವರು, ರೈತರು, ದಲಿತರಿಗೆ ಕೇಂದ್ರ ಸರ್ಕಾರ ಕೊಡುತ್ತಿರುವ ಅನುದಾನ ಎಲ್ಲಿ ಹೋಗುತ್ತಿದೆ? ಇದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಪ್ರಶ್ನೆ.
3 ದಿನಗಳ ರಾಜ್ಯ ಬಿಜೆಪಿ ನಾಯಕರ ಜತೆಗಿನ ಭೇಟಿ ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಹಿಂದಿನ ಯುಪಿಎ ಸರ್ಕಾರ ಕೂಡಾ ಭ್ರಷ್ಟಾಚಾರದಲ್ಲೇ ಮುಳುಗಿತ್ತು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಯಾವುದೇ ಭ್ರಷ್ಟಾಚಾರದ ಆರೋಪ ಇಲ್ಲ ಎಂದು ಹೇಳಿದರು.
ಸಿದ್ದರಾಮಯ್ಯನವರ ಸರ್ಕಾರ ರೈತ ವಿರೋಧಿಯಾಗಿದೆ. ಯಾವುದೇ ಸರ್ಕಾರ ಆರೋಪ ಬಂದಾಗ ತಲೆ ತಗ್ಗಿಸುತ್ತದೆ. ಡಿಕೆಶಿ ಮನೆ ಮೇಲೆ ಐಟಿ ದಾಳಿಯಾದ ಬಳಿಕ ಅವರು ತಮ್ಮ ಸ್ಥಾನಕ್ಕೆ ಯಾಕೆ ರಾಜೀನಾಮೆ ಕೊಡಲಿಲ್ಲ? ಗುಜರಾತ್ ಶಾಸಕರನ್ನು ರೆಸಾರ್ಟ್ ನಲ್ಲಿಟ್ಟ ಬಗ್ಗೆ ಸಿದ್ದರಾಮಯ್ಯ ಸರ್ಕಾರ ಉತ್ತರ ಕೊಡಲಿ ಎಂದರು.
ಕೇಂದ್ರ ಸರ್ಕಾರ ಏನು ಕೊಡಲಿಲ್ಲ ಎಂದು ಹೇಳುವ ಸಿದ್ದರಾಮಯ್ಯನವರು, ನನ್ನ ಪ್ರಶ್ನೆಗಳಿಗೆ ಉತ್ತರಿಸಬೇಕು ಎಂದು ನೇರ ಸವಾಲು ಹಾಕಿದರು. ಕೇಂದ್ರದಿಂದ ಬಿಡುಗಡೆಯಾದ ಹಣ ಎಲ್ಲಿ ಹೋಯ್ತು, ಬಡವರಿಗೆ, ರೈತರಿಗೆ ಅನುದಾನ ಯಾಕೆ ತಲುಪಿಲ್ಲ ಎಂಬುದರ ಬಗ್ಗೆ ಉತ್ತರ ನೀಡಲಿ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ