ವಾರದಲ್ಲಿ ಮಲೇಷಿಯಾ ಮರಳು ರಾಜ್ಯಕ್ಕೆ: ವಿನಯ
Team Udayavani, Aug 16, 2017, 7:10 AM IST
ಧಾರವಾಡ: ಮರಳಿನ ಕೊರತೆ ನೀಗಿಸುವ ಹಿನ್ನೆಲೆಯಲ್ಲಿ ಇನ್ನು ಒಂದೇ ವಾರದಲ್ಲಿ ಮಲೇಷಿಯಾದಿಂದ ರಾಜ್ಯಕ್ಕೆ ಮರಳು ಬರಲಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ವಿನಯ ಕುಲಕರ್ಣಿ ಹೇಳಿದರು.
ಇಲ್ಲಿನ ಆರ್.ಎನ್. ಶೆಟ್ಟಿ ಕ್ರೀಡಾಂಗಣದಲ್ಲಿ ಮಾಧ್ಯಮದವ ರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮರಳಿನ ಕೊರತೆ
ನೀಗಿಸಲು ಹೊರ ದೇಶಗಳಿಂದ ಮರಳು ತರಿಸಲಾಗುತ್ತಿದೆ. ಈ ಪೈಕಿ ಮಲೇಶಿಯಾದಿಂದ ಮರಳು ಅತಿ ಕಡಿಮೆ ದರದಲ್ಲಿ
ಲಭ್ಯವಾಗಿದೆ.
ದೇಶದಲ್ಲಿನ ಮರಳನ್ನು ಹಾಗೆಯೇ ಉಳಿಸಿಕೊಳ್ಳುವುದು ಮತ್ತು ರಾಜ್ಯದಲ್ಲಿ ಮರಳಿಗೆ ಉಂಟಾಗಿರುವ ಕೊರತೆ ನೀಗಿಸಲು ಸರ್ಕಾರ ಮೊದಲ ಬಾರಿಗೆ ವಿದೇಶದಿಂದ ಮರಳು ತರುವ ಪ್ರಯತ್ನ ಮಾಡುತ್ತಿದೆ ಎಂದು ಹೇಳಿದರು.
ಅನೇಕ ಖಾಸಗಿ ಕಂಪನಿಗಳು ಮರಳು ನೀಡಲು ಮುಂದೆ ಬಂದಿವೆ. ಇದರಿಂದ ಮರಳನ್ನು ಗುಡ್ಡೆ ಹಾಕಿಕೊಂಡು ಮಾರುಕಟ್ಟೆ
ನಿಯಂತ್ರಿಸುವವರ ಮೇಲೆ ಹಿಡಿತ ಸಾಧಿಸಲು ಅನುಕೂಲವಾಗುತ್ತದೆ.
ಈಗಾಗಲೇ ಈ ಬಗ್ಗೆ ರಾಜ್ಯಮಟ್ಟದ ಹಿರಿಯ ಅಧಿಕಾರಿಗಳು ಎಲ್ಲ ಪತ್ರ ವ್ಯವಹಾರ ಮುಗಿಸಿದ್ದು, ವಾರದಲ್ಲಿ ಮಲೇಷಿಯಾದಿಂದ ಮರಳು ರಾಜ್ಯಕ್ಕೆ ತಲುಪಲಿದೆ ಎಂದು ಹೇಳಿದರು.
ಎಂ. ಸ್ಯಾಂಡ್ ಲಭ್ಯ: ಉತ್ಪಾದಕ ಮರಳು (ಎಂ. ಸ್ಯಾಂಡ್) ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿದೆ. ರಾಜ್ಯಕ್ಕೆ ಬೇಕಾಗಿರುವ 24 ದಶಲಕ್ಷ ಮೆಟ್ರಿಕ್ ಟನ್ ಪೈಕಿ 13 ದಶಲಕ್ಷ ಮೆಟ್ರಿಕ್ ಟನ್ ಎಂ.ಸ್ಯಾಂಡ್ ರೂಪದಲ್ಲಿ ಲಭ್ಯವಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
Hassan Pen Drive; 40 ಜಿಬಿ ಪೆನ್ಡ್ರೈವ್ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!
MUST WATCH
ಹೊಸ ಸೇರ್ಪಡೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
Extortion: ಆನ್ಲೈನ್ ಗೇಮ್; ಬಾಲಕನ ಬೆದರಿಸಿ ಸುಲಿಗೆ
Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
LPG Cylinders: ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?