ಇನ್ನೇನಿದ್ದರೂ ದೇವರೇ ಗತಿ! ಉತ್ತರದಲ್ಲಿ ಮಳೆಗಾಗಿ ಪ್ರಾರ್ಥನೆ
Team Udayavani, Aug 16, 2017, 6:00 AM IST
ಹಾವೇರಿ:ರಾಜ್ಯದ ದಕ್ಷಿಣ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದರೆ, ಉತ್ತರದಲ್ಲಂತೂ ಬರ ಪರಿಸ್ಥಿತಿ ಹಾಗೆಯೇ ಮುಂದುವರೆದಿದೆ. “ದೇವರೇ ಮಳೆ ಸುರಿಸಬೇಕು” ಎಂಬ ಹತಾಶೆಯ ಸ್ಥಿತಿಗೆ ಸರ್ಕಾರ ತಲುಪಿದ್ದು, ಎರಡು ವಾರಗಳ ಕಾಲ ವಿಶೇಷ ಪೂಜೆ ಸಲ್ಲಿಸಲು ನಿರ್ಧರಿಸಿದೆ.
“ಮುಂಗಾರು ಮಳೆ ಕೈಕೊಟ್ಟಿದೆ. ಭೀಕರ ಬರದ ಮುನ್ಸೂಚನೆ ಕಂಡುಬಂದಿದೆ. ಕುಡಿಯಲು ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲೂ ನೀರಿಲ್ಲದ ಪರಿಸ್ಥಿತಿ ಉದ್ಭವಿಸುತ್ತಿದೆ. ಹೀಗಾಗಿ ಈಗ ನಮ್ಮ ಕೈಯಲ್ಲಿ ಏನೂ ಇಲ್ಲ. ಇನ್ನೇನಿದ್ದರೂ ದೇವರೇ ಗತಿ ಎಂದು ಮುಜರಾಯಿ ಸಚಿವ ರುದ್ರಪ್ಪ ಲಮಾಣಿ ಹೇಳಿದ್ದಾರೆ.
“ಭೀಕರ ಬರದ ಮುನ್ಸೂಚನೆ ಕಾಣುತ್ತಿದೆ. ಹೀಗಾಗಿ, ತಾವು ಕುಟುಂಬ ಸಮೇತ ಕೊಲ್ಲೂರು, ಮುರುಡೇಶ್ವರ, ಮಲೈ ಮಹಾದೇಶ್ವರ ಹಾಗೂ ಚಾಮುಂಡೇಶ್ವರಿ ದೇವಾಲಯಗಳಿಗೆ ಭೇಟಿ ವಿಶೇಷ ಪೂಜೆ ಸಲ್ಲಿಸಿದ್ದೇನೆ. ದೇವಸ್ಥಾನದ ಸ್ವಾಮೀಜಿಯೊಬ್ಬರು ರಾಜ್ಯದ ದೇವಸ್ಥಾನಗಳಲ್ಲಿ ಬೆಳಗ್ಗೆ 5 ಗಂಟೆಯಿಂದ ಎರಡು ವಾರ ಕಾಲ ಪೂಜೆ ಸಲ್ಲಿಸಿದರೆ ಮಳೆಯಾಗುತ್ತದೆ” ಎಂದು ಸಲಹೆ ನೀಡಿದ್ದಾರೆ. ಅವರ ಮಾತಿನಂತೆ ಈಗಾಗಲೇ ಮುಜರಾಯಿ ಅಧಿ ಕಾರಿಗಳಿಗೆ ಸೂಚನೆ ನೀಡಿದ್ದು, ಇನ್ನೆರಡು ದಿನಗಳಲ್ಲಿ ಈ ಕುರಿತು ಅ ಧಿಕೃತ ಆದೇಶ ಹೊರಡಿಸುತ್ತೇನೆ ಎಂದರು.
ಇನ್ನೊಂದೆಡೆ, ರಾಜ್ಯ ಸರ್ಕಾರ ನಾಡಿದ್ದಿನಿಂದ ಮೋಡಬಿತ್ತನೆಗೆ ಮುಂದಾಗಿದ್ದು, ಅದಕ್ಕಾಗಿ ಎಲ್ಲ ಸಿದ್ಧತೆಗಳನ್ನು ಮುಗಿಸಿಕೊಂಡಿದೆ. ರಾಜ್ಯದ 20 ಜಿಲ್ಲೆಗಳಲ್ಲಿ ಮಳೆಯ ಕೊರತೆ ಕಾಣಿಸಿಕೊಂಡಿದೆ.
ಸೋಮವಾರ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ದುರ್ಬಲವಾಗಿತ್ತು. ದಕ್ಷಿಣ ಒಳನಾಡಿನ ಹಲವೆಡೆ ಕರಾವಳಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆ ಮಳೆಯಾಗಿದೆ. ಇದೇ ಅವಧಿಯಲ್ಲಿ ರಾಜ್ಯದ ವಿವಿಧೆಡೆ ಬಿದ್ದ ಮಳೆಯ ಪ್ರಮಾಣ ಹೀಗಿತ್ತು (ಸೆಂ.ಮೀ.ಗಳಲ್ಲಿ): ಬೆಂಗಳೂರು ನಗರ, ಮಂಡ್ಯ ತಲಾ 13, ಆಗುಂಬೆ, ಶ್ರೀರಂಗಪಟ್ಟಣ ತಲಾ 11, ಆನೇಕಲ್, ಹುಲಿಯೂರುದುರ್ಗ, ರಾಮನಗರ, ಕನಕಪುರ ತಲಾ 7, ಟಿ.ನರಸೀಪುರ, ಯೆಳಂದೂರು, ಮಳವಳ್ಳಿ ತಲಾ 4, ಬೇಗೂರು, ಕೊಳ್ಳೇಗಾಲ, ಕೆ.ಆರ್.ಸಾಗರ ತಲಾ 3, ಕೊಪ್ಪ, ಹಾಸನ, ಮೈಸೂರು ತಲಾ 2, ವಿಜಯಪುರ, ಕಮಲಾಪುರ, ಎಚ್.ಡಿ.ಕೋಟೆ, ಚಾಮರಾಜನಗರ, ಹೊನಕೆರೆ, ಬೆಂಗಳೂರು ಕೆಐಎಎಲ್ ವಿಮಾನ ನಿಲ್ದಾಣ, ಹೊಸ್ಕೋಟೆ, ಮಾಗಡಿ ತಲಾ 1. ಗುರುವಾರ ಮುಂಜಾನೆವರೆಗಿನ ಹವಾಮಾನ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವೆಡೆ ಉತ್ತರ ಒಳನಾಡಿನ ಕೆಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Gundmi Toll Plaza ಸ್ಥಳೀಯರಿಗೆ ಟೋಲ್ ಬರೆ; ಟೋಲ್ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ
Election data ಏರಿಕೆ ಬಗ್ಗೆ ಪ್ರತಿಕ್ರಿಯಿಸಿ: ಇಸಿಗೆ ಸುಪ್ರೀಂ
D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ; ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್’
Malpe ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ ರಕ್ಷಣೆ
Chhattisgarh; ನಿಲ್ಲದ ನಕ್ಸಲ್ ಬೇಟೆ: ಓರ್ವನ ಹತ್ಯೆ