ಪಾಟರಿ ಟೌನ್‌ ಗಣಪನಿಗೆ ಈ ವರ್ಷ ಡಿಮಾಂಡ್‌


Team Udayavani, Aug 16, 2017, 11:30 AM IST

ganesha-package.jpg

ಬೆಂಗಳೂರು: ಈ ಬಾರಿಯ ಗೌರಿ-ಗಣೇಶ ಹಬ್ಬ ಪ್ರಯುಕ್ತ ನಗರದೆಲ್ಲಡೆ ಗೌರಿ-ಗಣಪ ಮೂರ್ತಿಗಳು ಈಗಾಗಲೇ ಸಿದ್ಧಗೊಳ್ಳುತ್ತಿವೆ. ಈ ಬಾರಿ ಪಿಒಪಿ (ಪ್ಲಾಸ್ಟರ್‌ ಆಫ್ ಪ್ಯಾರೀಸ್‌) ಮೂರ್ತಿಗಳ ನಿಷೇಧ ಹಿನ್ನೆಲೆಯಲ್ಲಿ ನಗರದ  ಪರಿಯಾರ್‌ ನಗರ ಸರ್ಕಲ್‌ ಬಳಿ ಇರುವ ಪಾಟರಿ ಟೌನ್‌ನಲ್ಲಿ ಕುಂಬಾರರ ಕೈಯಲ್ಲಿ ತಯಾರಾಗುತ್ತಿರುವ ಮಣ್ಣಿನ ಮೂರ್ತಿಗಳಿಗೆ ಬೇಡಿಕೆ ಹೆಚ್ಚಿದೆ. 

ಪಾಟರಿಟೌನ್‌ ಮೊದಲಿನಿಂದಲೂ ಮಣ್ಣಿನ ಮಡಕೆ ಸೇರಿದಂತೆ ಗಣಪ ಸೇರಿ ವಿವಿಧ ದೇವರ ಮೂರ್ತಿಗಳ ತಯಾರಿಕೆಗೆ ಖ್ಯಾತಿ ಪಡೆದಿದೆ. ಆದರೆ,  ಈ ಬಾರಿ ಪಿಒಪಿ ಗಣಪ-ಗೌರಿ ಮೂರ್ತಿಗಳಿಗೆ ನಿಷೇಧ ಇರುವುದರಿಂದ ಇಲ್ಲಿನ ಮಣ್ಣಿನ ಮೂರ್ತಿಗಳಿಗೆ ಬೇಡಿಕೆ ಬಂದಿದೆ. 

ಗಣೇಶ  ಹಬ್ಬಕ್ಕೆ ಮೂರು ತಿಂಗಳ ಮುಂಚೆಯೇ ಇಲ್ಲಿ ಗೌರಿ-ಗಣಪ ಮೂರ್ತಿಗಳ ತಯಾರಿಕೆ ಕಾರ್ಯ ಆರಂಭವಾಗುತ್ತದೆ. ಕುಂಬಾರರ ಕುಟುಂಬ ಸದಸ್ಯರೆಲ್ಲಾ ಸೇರಿ ಮಣ್ಣಿನ ಗೌರಿ-ಗಣಪ ಮೂರ್ತಿ ತಯಾರಿಸಲು ಮುಂದಾಗುತ್ತಾರೆ. ಸಂಪೂರ್ಣವಾಗಿ ಮಣ್ಣಿನಿಂದ ಮಾಡುವ ಮೂರ್ತಿ ಒಣಗಲು ಸಮಯ ಬೇಕಾಗುತ್ತದೆ. ಮೂರ್ತಿಗಳಿಗೆ ಬಣ್ಣ ಹಚ್ಚುವುದು ಮಾತ್ರ ಹಬ್ಬಕ್ಕೆ ಎರಡು ಮೂರು ದಿನಗಳ ಮುಂಚೆ. ಗೌರಿ-ಗಣಪ ಮೂರ್ತಿಗಳಿಗೆ ಬೇಡಿಕೆ ಆಧಾರದ ಮೇಲೆ ಬಣ್ಣ ಹಚ್ಚಿ ಮಾರುಕಟ್ಟೆಗೆ ಪೂರೈಕೆ ಮಾಡುತ್ತಾರೆ.

ಮಣ್ಣಿನಿಂದ ಮಾಡುವ ಮೂರ್ತಿಗಳ ತೂಕ ಸಾಮಾನ್ಯವಾಗಿ ಹೆಚ್ಚು. ಹಾಗಾಗಿಯೇ ಇವರು 2ರಿಂದ 3 ಅಡಿಯ ಗಣಪತಿ ಮೂರ್ತಿಗಳನ್ನು ಮಾತ್ರ ತಯಾರಿಸಿದ್ದಾರೆ. ಅದಕ್ಕೂ ಹೆಚ್ಚಿನ ಎತ್ತರದ ಮೂರ್ತಿಗಳು ಬೇಕಾಕೆನ್ನುವವರು ಪಾಂಡೀಚೆರಿ ಮೂಲದ ಪೇಪರ್‌ ಗಣಪತಿ ಮೂರ್ತಿಗಳನ್ನೇ ಜನರು ಕೊಂಡುಕೊಳ್ಳಬೇಕು ಎನ್ನುತ್ತಾರೆ ವ್ಯಾಪಾರಿ ಮೂರಳಿ ಬೋಜಿ. 

ಬ್ರಿಟಿಷರ ಕಾಲದಿಂದಲೂ ತಯಾರಿಕೆ
ಸ್ವಾತಂತ್ರ್ಯಕ್ಕೂ ಮುನ್ನ ತಮಿಳು ನಾಡು, ಆಂಧ್ರ ದಿಂದ ಇಲ್ಲಿಗೆ ವಲಸೆ ಬಂದಿರುವ ಈ ಕುಂಬಾರರಿಗೆ ಬ್ರಿಟಿಷ್‌ ಅಧಿಕಾರಿಗಳು ಅಂದು ಕುದುರೆ ಕಟ್ಟುತ್ತಿದ್ದ ಜಾಗವನ್ನು ಬಿಟ್ಟು ಕೊಟ್ಟಿದ್ದರು. 150 ವರ್ಷಗಳಿಂದಲೂ ವಂಶ ಪಾರಂಪರ್ಯವಾಗಿ ಇಲ್ಲಿ ಮಣ್ಣಿನ ಮಡಿಕೆ, ದೇವರ ಮೂರ್ತಿಗಳನ್ನು ತಯಾರಿ ಸಲಾಗುತ್ತಿದೆ. ಜೇಡಿ ಮಣ್ಣನ್ನು ಬೆಂಗಳೂರಿನ ಸುತ್ತ ಮುತ್ತಲಿನ ಹಳ್ಳಿಗಳಿಂದ ಲಾರಿ ಲೋಡಿಗೆ 3ರಿಂದ 4 ಸಾವಿರ ಕೊಟ್ಟು ತರಲಾಗುತ್ತದೆ.

ಮಳೆಗಾಲದಲ್ಲಿ ಜೇಡಿ ಮಣ್ಣು ಸಿಗುವುದು ಕಷ್ಟ. ಈ ಬಾರಿ ಸರ್ಕಾರ ಪಿಒಪಿ ಗಣೇಶ ಮೂರ್ತಿಗಳನ್ನು ನಿಷೇಧಿಸಿರುವುದರಿಂದ ನಮ್ಮ ಮಣ್ಣಿನ ಗಣೇಶ ಮೂರ್ತಿಗಳಿಗೆ ಬೇಡಿಕೆ ಬಂದಿದೆ. ಈ ಬಾರಿ ಯಾದರು ಉತ್ತಮ ವ್ಯಾಪಾರವಾಗುತ್ತದೆ ಎಂಬ ನಿರೀಕ್ಷೆಯಲ್ಲಿದ್ದೇವೆ ಎನ್ನುತ್ತಾರೆ ಮೂರ್ತಿ ತಯಾರಕ ಜಿ. ಪ್ರಕಾಶ್‌.  

ಬಣ್ಣವಿಲ್ಲದ ಸಾದಾ ಮೂರ್ತಿಗಳಿಗೆ ಬೇಡಿಕೆ ಇದೆ. ಜನ ಕೇಳಿದರೆ ಮಾತ್ರ ಬಣ್ಣ ಹಚ್ಚಿಕೊಡುತ್ತೇವೆ. 
-ಮೂರಳಿ ಬೋಜಿ, ವ್ಯಾಪಾರಿ. 

* ಜಯಪ್ರಕಾಶ್‌ ಬಿರಾದಾರ್‌

ಟಾಪ್ ನ್ಯೂಸ್

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.