ಮಳೆಗಾಗಿ ಪ್ರಾರ್ಥಿಸಿ ಪರ್ಜನ್ಯ ಹೋಮ
Team Udayavani, Aug 17, 2017, 3:20 PM IST
ಶಿಕಾರಿಪುರ: ರಾಜ್ಯದೆಲ್ಲೆಡೆ ಬರ ತಾಂಡವವಾಡುತ್ತಿರುವುದರಿಂದ ಮಳೆಗಾಗಿ ಪ್ರಾರ್ಥಿಸಿ ಪರ್ಜನ್ಯ ಹೋಮ ನಡೆಸುವ ಮೂಲಕ ಶಾಸಕ ಬಿ.ವೈ. ರಾಘವೇಂದ್ರ ತಮ್ಮ 44 ನೇ ಜನ್ಮದಿನವನ್ನು ಅತ್ಯಂತ ಸರಳವಾಗಿ ಆಚರಿಸಿಕೊಂಡರು.
ಬುಧವಾರ ಬೆಳಗ್ಗೆ ಕ್ಷೇತ್ರಾಧಿಪತಿ ಶ್ರೀ ಹುಚ್ಚರಾಯಸ್ವಾಮಿ ಸನ್ನಿಧಿಗೆ ಕುಟುಂಬ ಸಮೇತರಾಗಿ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿ ನಂತರ ಪರ್ಜನ್ಯ ಹೋಮದ ಸಂಕಲ್ಪದ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ತಾಲೂಕಿನಿಂದ ಹಾಗೂ ಬೇರೆ ಜೆಲ್ಲೆಗಳಿಂದ ಶುಭಾಷಯ ಕೋರಲು ಆಗಮಿಸಿದ ತಮ್ಮ
ಅಭಿಮಾನಿಗಳೊಂದಿಗೆ ಮಾತನಾಡಿದ ಅವರು, ನಮ್ಮ ರಾಜ್ಯದಲ್ಲಿ ಭೀಕರವಾದ ಬರಗಾಲವು ತಾಂಡವವಾಡುತ್ತಿದ್ದು ರೈತರು, ಶ್ರೀಸಾಮಾನ್ಯರು ಸಂಕಷ್ಟದಲ್ಲಿರುವ ಈ ಸಂದರ್ಭದಲ್ಲಿ ಮಳೆಗಾಗಿ ಪ್ರಾರ್ಥನೆ ಮಾಡಿ ಪರ್ಜನ್ಯ ಹೋಮ ನಡೆಸುತ್ತಿದ್ದೇನೆ. ಅಲ್ಲದೆ ತಾಲೂಕಿನ ವಿವಿಧ ದೇವಸ್ಥಾನಗಳಲ್ಲಿ ಪೂಜೆ- ಪುನಸ್ಕಾರಗಳು ನಡೆಯುತ್ತಿವೆ. ದೇವರ ದಯೆಯಿಂದ ನಾಡಿನಲ್ಲಿ ಮಳೆ ಬೆಳೆ ಸಮೃದ್ಧಿಯಾಗಬೇಕು. ಅಲ್ಲದೇ ರೈತರ ಬದುಕು ಹಸನಾಗಬೇಕು ಎಂದರು.
ತಾಲೂಕಿನಲ್ಲಿ ಶಾಶ್ವತ ನೀರಾವರಿ ವ್ಯವಸ್ಥೆಗಾಗಿ ಯೋಜನೆಗಳ ನೀಲನಕ್ಷೆ ಸಿದ್ಧವಾಗಿದ್ದು ಪ್ರಸ್ತಾವನೆ ಸಲ್ಲಿಸಲಾಗಿದೆ. ಸರ್ಕಾರ ಹಾಗೂ ಸಂಬಂಧಿಸಿದ
ಇಲಾಖೆಗಳು ಸಕಾರಾತ್ಮಕವಾಗಿ ಸ್ಪಂದಿಸಬೇಕು ಎಂದರು ಅರ್ಚಕರಾದ ಉಮೇಶ್ ಭಟ್, ಗಣಪತಿ ಭಟ್, ಪ್ರದೀಪ್ ಕುಲಕರ್ಣಿ, ಪ್ರಸನ್ನ ಭಟ್, ಶಿವಮೊಗ್ಗ ಹರೀಶ್ ಜೊಯ್ಸ ಅವರ ನೇತೃತ್ವದಲ್ಲಿ ಪರ್ಜನ್ಯ ಹೋಮ ಹಾಗೂ ಪೂಜಾ ಕಾರ್ಯಕ್ರಮಗಳು ನಡೆದವು. ರಾಘವೇಂದ್ರ ಅವರ ಪತ್ನಿ ತೇಜಸ್ವಿನಿ ರಾಘವೇಂದ್ರ, ಸಹೋದರಿರಾದ ಪದ್ಮಾವತಿ, ಅರುಣಾದೇವಿ, ಉಮಾದೇವಿ, ಸಹೋದರ ಬಿ.ವೈ. ವಿಜೇಂದ್ರ, ಜಿಲ್ಲಾ ಜಾಗೃತಿ ಸಮಿತಿಯ ಕೆ.ಎಸ್. ಗುರುಮೂರ್ತಿ, ಎಂ.ಬಿ. ಚನ್ನವೀರಪ್ಪ, ಪುರಸಭೆ ಅಧ್ಯಕ್ಷೆ ರತ್ನಮ್ಮ, ಮಾಜಿ ಅಧ್ಯಕ್ಷೆ ರೂಪಕಲಾ ಹೆಗಡೆ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Kerala ವಯನಾಡಲ್ಲಿ ರಾಹುಲ್ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ