ಲಿಂಗಾಯತ ರ್ಯಾಲಿ ಯಶಸ್ಸಿಗೆ ಮನವಿ


Team Udayavani, Aug 18, 2017, 12:30 PM IST

hub2.jpg

ಧಾರವಾಡ: ಬೆಳಗಾವಿಯಲ್ಲಿ ಆ.22ರಂದು ನಡೆಯಲಿರುವ ಲಿಂಗಾಯತ ಮಹಾ ರ್ಯಾಲಿ ಕುರಿತಂತೆ ನಗರದ ಮುರುಘಾಮಠದಲ್ಲಿ ಗುರುವಾರ ಪೂರ್ವಭಾವಿ ಸಭೆ ನಡೆಯಿತು. ಸಾನ್ನಿಧ್ಯ ವಹಿಸಿದ್ದ ಶ್ರೀಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಮಾತನಾಡಿ, ಲಿಂಗಾಯತಕ್ಕೆ ಪ್ರತ್ಯೇಕ ಧರ್ಮದ ಸಂವಿಧಾನಾತ್ಮಕ ಮಾನ್ಯತೆ ಸಿಗುವ ಲಕ್ಷಣಗಳಿವೆ.

ಹೀಗಾಗಿ ಲಿಂಗಾಯತರೆನ್ನುವ ಎಲ್ಲರೂ ಈ ರ್ಯಾಲಿಯಲ್ಲಿ ಭಾಗವಹಿಸಿ ಶಕ್ತಿ ತುಂಬುವ ಕೆಲಸ ಮಾಡಬೇಕು. ಈಗ ಹೋರಾಟ ಮಾಡಿದರೆ ಮುಂದೆ ಒಳ್ಳೆಯ ಫಲವಾಗಿ ಪ್ರತ್ಯೇಕ ಧರ್ಮದ ಸ್ಥಾನಮಾನ ಲಭಿಸಲಿದ್ದು, ಇದರಿಂದ ಸಾಹಿತ್ಯ, ಶೈಕ್ಷಣಿಕ ಸೇರಿದಂತೆ ವಿವಿಧ ಸ್ಥರಗಳಿಂದ ಲಿಂಗಾಯತ ಧರ್ಮದ ಜನರ ಒಳಿತಿಗೆ ಕಾರಣವಾಗಲಿದೆ.

ಇದಕ್ಕಾಗಿ ಸರ್ವ ರೀತಿಯಿಂದಲೂ ಪ್ರಯತ್ನಕ್ಕಾಗಿ ಶ್ರಮಿಸೋಣ ಎಂದರು. ಲಿಂಗಾಯತ-ವೀರಶೈವ ಬೇರೆ ಬೇರೆ ಆಗಿದ್ದು, ಈಗಾಗಲೇ ವೀರಶೈವ ಪ್ರತ್ಯೇಕ ಧರ್ಮಕ್ಕಾಗಿ ಸಲ್ಲಿಸಿರುವ ಪ್ರಸ್ತಾವನೆ ತಿರಸ್ಕೃತಗೊಂಡಿದೆ. ಈಗ ಅದೇ ತಪ್ಪು ಮಾಡುವ ಗೋಜಿಗೆ ಹೋಗಬಾರದು. ನಮ್ಮ ಮಾತೃಭಾಷೆ ಸಂಸ್ಕೃತವಲ್ಲ, ಕನ್ನಡ. ಹೀಗಾಗಿ ಕನ್ನಡದಲ್ಲಿ ಇರುವ ವಚನಗಳೇ ಲಿಂಗಾಯತ ಧರ್ಮದ ಧರ್ಮ ಗ್ರಂಥಗಳಾಗಿವೆ ಎಂದರು. 

ಜೈ ಬಸವ ಮೂಲ ಮಂತ್ರ: ಸಾಹಿತಿ ಡಾ| ರಂಜಾನ್‌ ದರ್ಗಾ ಮಾತನಾಡಿ, ಲಿಂಗಾಯತರಿಗೆ ಜೈ ಬಸವ ಅನ್ನುವುದೇ ಮಂತ್ರ ಆಗಬೇಕು. ಈ ಮಂತ್ರದಲ್ಲಿ  ಇರುವ ಆನಂದ ಬೇರೆ ಯಾವುದರಲ್ಲೂ ಸಿಗದು.ಮೊನ್ನೆ ನಡೆದ ಸ್ವಾತಂತ್ರ ದಿನಾಚರಣೆ ವೇಳೆ ಸಚಿವ ಎಂ.ಬಿ.ಪಾಟೀಲ ತಮ್ಮ ಭಾಷಣದ ಕೊನೆಯಲ್ಲಿ ಜೈಬಸವ ಹೇಳುವ ಮೂಲಕ ಈ ಆನಂದ ಹೆಚ್ಚಿಸಿದ್ದು, ಜೈ ಬಸವ ಎಂಬುದು ಲಿಂಗಾಯತರ ಮೂಲ ಮಂತ್ರವಾಗಬೇಕು ಎಂದರು. 

ಲಿಂಗಾಯತರನ್ನು ಎದುರಿಸುವ ಶಕ್ತಿ ಯಾರಿಗೂ ಇಲ್ಲ. ಹೀಗಾಗಿ ಧರ್ಮಗುರು ಬಸವಣ್ಣವನ್ನಾಗಿ ಸೀÌಕರಿಸಿ, ಜೈ ಬಸವ ಮಂತ್ರದೊಂದಿಗೆ ವಚನಗಳೇ ನಮ್ಮ ಧರ್ಮ ಭಂಡಾರ ಎಂಬುದನ್ನು ಅರಿತು ಕನ್ನಡ ಮಾತೃಭಾಷೆಯ ಈ ಲಿಂಗಾಯತ ಧರ್ಮಕ್ಕೆ ಪ್ರತ್ಯೇಕ ಧರ್ಮದ ಸ್ಥಾನಮಾನ ದೊರಕಿಸಿಕೊಡುವ ಮೂಲಕ ಬಸವಣ್ಣನವರನ್ನು ಗೆಲ್ಲಿಸಬೇಕಿದೆ ಎಂದರು. 

ಅಖೀಲ ಭಾರತ ವೀರಶೈವ ಮಹಾಸಭಾದ ಮಾಜಿ ಜಿಲ್ಲಾಧ್ಯಕ್ಷ ಶಿವಣ್ಣ ಬೆಲ್ಲದ ಮಾತನಾಡಿ, ಈವರೆಗೂ ಲಿಂಗಾಯತ ಧರ್ಮಕ್ಕೆ ಸರಿಯಾದ ಹೋರಾಟದ ದಿಕ್ಕು ಇರಲಿಲ್ಲ. ಈಗ ಹೋರಾಟದ ದಿಕ್ಕು ಸರಿಯಾಗಿದೆ. ಆ.22 ರಂದು ನಡೆಯಲಿರುವ ರ್ಯಾಲಿಗೆ ಎಲ್ಲರೂ ಕೈ ಜೋಡಿಸುವ ಅಗತ್ಯವಿದ್ದು, 6 ಸ್ವತಂತ್ರ ಧರ್ಮದ ಬಳಿಕ ಲಿಂಗಾಯತವನ್ನು 7ನೇ ಸ್ವತಂತ್ರ ಧರ್ಮವನ್ನಾಗಿ ಮಾಡುವ ಕಾರ್ಯ ಆಗಬೇಕಿದೆ ಎಂದರು. 

ಈಗಾಗಲೇ ಅಖೀಲ ಭಾರತ ವೀರಶೈವ ಮಹಾಸಭಾ ಸ್ಥಾಪನೆ ಇದ್ದು, ಅದರ ಹೆಸರು ಬದಲಿಸಿ ಅಖೀಲ ಭಾರತ ಲಿಂಗಾಯತ ಮಹಾಸಭಾ ಸ್ಥಾಪಿಸುವ ತುರ್ತು ಅಗತ್ಯವಿದೆ ಎಂದರು. ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಲಕರ್ಣಿ ಮಾತನಾಡಿ, ಲಿಂಗಾಯತ ಧರ್ಮಕ್ಕೆ ಮಾನ್ಯತೆ ನೀಡಬೇಕೆಂಬುದು ನಾಡಿನ ಎಲ್ಲಾ ಮಠಾಧಿಶರ ಒತ್ತಾಸೆ.

ಬದಲಾಗುವ ಧರ್ಮಕ್ಕಾಗಿ ಹಕ್ಕು ಕೇಳುತ್ತಿದ್ದಾರೆ ಅಷ್ಟೆ. ಲಿಂಗಾಯತ ಮಹಾರ್ಯಾಲಿಯಲ್ಲಿ ಪಾಲ್ಗೊಳ್ಳಲು ಧಾರವಾಡ ಜಿಲ್ಲೆಯಿಂದ 800 ಕ್ಕೂ ಅ ಧಿಕ ವಾಹನಗಳ ವ್ಯವಸ್ಥೆ ಮಾಡಿದ್ದಾರೆ. ಜನರ ಬೇಕು ಬೇಡಿಕೆಗಳನ್ನು ನಮ್ಮ ಸರ್ಕಾರ ಈಡೇರಿಲಿದೆ. ಇದರಲ್ಲಿ  ಯಾವ ಪಕ್ಷ ಅಥವಾ ಮುಖಂಡರ ಪ್ರತಿಷ್ಠೆ ಬೇಡ. 

ಸಮಾಜದ ಹಿತಕ್ಕಾಗಿ ಎಲ್ಲರೂ ಒಟ್ಟಾಗಿ ಶ್ರಮಿಸಬೇಕು ಎಂದರು. ಜಿಪಂ ಸದಸ್ಯ ಕೆ.ಸಿ.ಪುಡಕಲಕಟ್ಟಿ, ತಾಪಂ ಅಧ್ಯಕ್ಷ ಮಲ್ಲಪ್ಪ ಭಾವಿಕಟ್ಟಿ, ಡಾ|ಶಂಭುಲಿಂಗ ಹೆಗಡಾಳ, ಬಸವರಾಜ ಬಿಕ್ಕಣ್ಣವರ, ಎಚ್‌.ಸಿ.ಮೊರಬ, ಮಲ್ಲನಗೌಡ ಪಾಟೀಲ, ಮಹದೇವ ಹಂಪಣ್ಣವರ, ರಮೇಶ ಪಾಟೀಲ, ರಾಜು ಬೆಳ್ಳಕ್ಕಿ, ಬಸಯ್ಯ ಗಣಾಚಾರಿ, ಸಿದ್ದರಾಮಣ್ಣ ನಡಕಟ್ಟಿ ಇದ್ದರು. 

ಟಾಪ್ ನ್ಯೂಸ್

T20 World Cup; Cricket mega event threatened by Pakistani militants

T20 World Cup; ಕ್ರಿಕೆಟ್ ಮೆಗಾ ಕೂಟಕ್ಕೆ ಪಾಕ್ ಉಗ್ರರಿಂದ ಬೆದರಿಕೆ

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ ಪುರುಷರ ರಿಲೇ ತಂಡ

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ, ಪುರುಷರ ರಿಲೇ ತಂಡ

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

3

ಕ್ರಿಕೆಟ್‌ ಆಡುವಾಗ ಖಾಸಗಿ ಅಂಗಕ್ಕೆ ತಾಗಿದ ಚೆಂಡು: ಕುಸಿದು ಬಿದ್ದು 11 ವರ್ಷದ ಬಾಲಕ ಮೃತ್ಯು

ED raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

ED Raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

1-wqeqewqe

BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್‌

LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್‌

T20 World Cup; Cricket mega event threatened by Pakistani militants

T20 World Cup; ಕ್ರಿಕೆಟ್ ಮೆಗಾ ಕೂಟಕ್ಕೆ ಪಾಕ್ ಉಗ್ರರಿಂದ ಬೆದರಿಕೆ

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

ಡ್ರಗ್ಸ್‌ ಕೊಟ್ಟು, ಸಂಸದೆಗೇ ಲೈಂಗಿಕ ಕಿರುಕುಳ ಆರೋಪ; ಆಸ್ಟ್ರೇಲಿಯಾ ಎಂಪಿ ಅಳಲು

ಡ್ರಗ್ಸ್‌ ಕೊಟ್ಟು, ಸಂಸದೆಗೇ ಲೈಂಗಿಕ ಕಿರುಕುಳ ಆರೋಪ; ಆಸ್ಟ್ರೇಲಿಯಾ ಎಂಪಿ

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ ಪುರುಷರ ರಿಲೇ ತಂಡ

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ, ಪುರುಷರ ರಿಲೇ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.