ಗ್ರಾಮ ವಾಸ್ತವ್ಯ ಚುನಾವಣೆ ಗಿಮಿಕ್ಕಲ್ಲ


Team Udayavani, Aug 18, 2017, 2:04 PM IST

18-BLR-6.jpg

ಕೂಡ್ಲಿಗಿ: ಗ್ರಾಮ ವಾಸ್ತವ್ಯ ನನ್ನ ಕನಸು. ನನ್ನ ಕ್ಷೇತ್ರದ ಜನರ ಸಮಸ್ಯೆ ತಳಮಟ್ಟದಲ್ಲಿ ಬಗೆಹರಿಸುವುದು, ಅವರ ಸಮಸ್ಯೆಗೆ ಧ್ವನಿಯಾಗಲು “ನಮ್ಮ ನಡೆ-ಹಳ್ಳಿ ಕಡೆಗೆ’ಎಂಬ ವಿನೂತನ ಕಾರ್ಯಕ್ರಮ ಮಾಡಿದ್ದೇವೆ ಹೊರತು, ಇದು ಚುನಾವಣೆ ರಣತಂತ್ರವಲ್ಲ ಎಂದು ಶಾಸಕ ಬಿ.ನಾಗೇಂದ್ರ ಸ್ಪಷ್ಟಪಡಿಸಿದರು.

ತಾಲೂಕಿನ ಅಪ್ಪೇನಹಳ್ಳಿ ಗ್ರಾಮದಲ್ಲಿ ಗುರುವಾರ ಆಯೋಜಿಸಿದ್ದ “ನಮ್ಮ ನಡೆ ಹಳ್ಳಿಯ ಕಡೆ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜನಸಾಮಾನ್ಯರಿಗೆ ಯಾವುದೇ ಪಕ್ಷ ಮುಖ್ಯವಲ್ಲ. ಅವರ ಸಮಸ್ಯೆಗಳಿಗೆ ಪರಿಹಾರ ಮುಖ್ಯ. ಯಾವುದೇ ಪಕ್ಷದವರಾಗಿದ್ದರೂ ನನಗೆ ಎಲ್ಲರೂ ಒಂದೇ. ನಿಮ್ಮ ಸೇವೆ ಮಾಡುವುದಷ್ಟೇ ನನ್ನ ಗುರಿ. ಇದು ನನ್ನ ರಾಜಕೀಯ ಸಿದ್ಧಾಂತ ಎಂದರು.

ಗ್ರಾಮ ವಾಸ್ತವ್ಯ ಎಂದು ಊರಲ್ಲಿ ಬಂದು ಊಟ ಮಾಡಿ ಮಲಗುವುದಲ್ಲ. ಇಡೀ ತಾಲೂಕು ಆಡಳಿತವೇ ಹಳ್ಳಿಯ ಕಡೆಗೆ ಬಂದಿದ್ದು, ತಾಲೂಕಿನ ಎಲ್ಲ 32 ಇಲಾಖೆಗಳ ಅಧಿಕಾರಿಗಳು ನಿಮ್ಮ ಸಮಸ್ಯೆಗಳಿಗೆ ತಕ್ಷಣವೇ ಪರಿಹಾರ ನೀಡಲಿದ್ದಾರೆ. ನಿಮಗೆ ಅನ್ಯಾಯವಾಗಿದ್ದರೆ ತಾವು ನ್ಯಾಯ ನೀಡಲು ಸಿದ್ಧ. ಆದರೆ ತಾಳ್ಮೆಯಿಂದ ಬಂದು ಸಮಸ್ಯೆ ಹೇಳಿ, ಕೂಡಲೇ ಆಗದಿದ್ದರೆ ಹಂತ ಹಂತವಾಗಿ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.

ಇಂದಿನಿಂದ ಡಿಸೆಂಬರ್‌ ತಿಂಗಳವರೆಗೆ “ನಮ್ಮ ನಡೆ ಹಳ್ಳಿಯ ಕಡೆ’ ಕಾರ್ಯಕ್ರಮ ತಾಲೂಕಿನ 60 ಕಡೆ ಆಯೋಜಿಸಲಾಗುತ್ತಿದ್ದು, ಆಯಾ ಗ್ರಾಪಂ ವ್ಯಾಪ್ತಿಯ ಜನಸಾಮಾನ್ಯರು ಇದರ ಪ್ರಯೋಜನ ಪಡೆದುಕೊಳ್ಳಬೇಕು. ಪ್ರತಿ ಸೋಮವಾರ, ಮಂಗಳವಾರ ಬದಲು, ವಾರದಲ್ಲಿ 2 ದಿನ ಮಂಗಳವಾರ ಹಾಗೂ ಶುಕ್ರವಾರ ಕ್ಷೇತ್ರದಾದ್ಯಾಂತ ಗ್ರಾಮ ವಾಸ್ತವ್ಯ ಮಾಡುವ ಮೂಲಕ ಇಡೀ ತಾಲೂಕು ಆಡಳಿತವನ್ನು ಹಳ್ಳಿಗಳ ಕಡೆ ಕೊಂಡೊಯ್ದು ಜನರ ಸಮಸ್ಯೆಗಳಿಗೆ ಪರಿಹರಿಸುವ ಕಾರ್ಯ ಮಾಡಲಿದ್ದೇನೆ ಎಂದರು.

ಜಿಪಂ ಸಿಇಒ ಡಾ| ಕೆ.ವಿ.ರಾಜೇಂದ್ರ ಮಾತನಾಡಿ, ಹಳ್ಳಿಗಳ ಅಭಿವೃದ್ಧಿ ಆಗಬೇಕಾದರೆ ಅಲ್ಲಿನ ಯುವಕರು, ಗ್ರಾಮಸ್ಥರು ಸಹಕಾರ ನೀಡಬೇಕು. ತಾವು ಕೂಡ ಗ್ರಾಮ ವಾಸ್ತವ್ಯದ ಮೂಲಕ ಹಳ್ಳಿಗಳ ತಳಮಟ್ಟದ ಸಮಸ್ಯೆಗಳನ್ನು ತಿಳಿಯಲು ಪ್ರಯತ್ನಿಸಿದ್ದು, ಜನರ ಸಹಕಾರ ನೀಡಿದರೆ ಸರ್ಕಾರದ ಯೋಜನೆಗಳು ಸಾಕಾರಗೊಳ್ಳುತ್ತವೆ. ಕಾರಣ ಹೇಳುವುದನ್ನು ಬಿಟ್ಟು ಅಭಿವೃದ್ಧಿಯಲ್ಲಿ ನಮ್ಮದು ಜವಾಬ್ದಾರಿ ಇದೆ ಎನ್ನುವುದನ್ನು ತಿಳಿಯಬೇಕೆಂದರು. ಈ ಸಂದರ್ಭದಲ್ಲಿ ವೃದ್ಧಾಪ್ಯ, ಅಂಗವಿಕಲರ ವೇತನ, ಅಂಗವಿಕಲರಿಗೆ ತ್ತೈಸಿಕಲ್‌ ಮುಂತಾದ ಸಮಸ್ಯೆಗಳಿಗೆ ಶಾಸಕರು ಮತ್ತು ಅಧಿಕಾರಿಗಳು
ಸ್ಥಳದಲ್ಲೇ ಪರಿಹಾರ ಸಿಕ್ಕರೆ, ಶೌಚಾಲಯ, ಮನೆ ಮುಂತಾದ ಸಮಸ್ಯೆಗಳಿಗೆ ಬಗೆಹರಿಸುವ ಭರವಸೆ ನೀಡಿದರು. ಜಿಪಂ ಅಧ್ಯಕ್ಷೆ ದೀನಾ ಮಂಜುನಾಥ್‌, ತಾಪಂ ಅಧ್ಯಕ್ಷ ಕೆ.ವೆಂಕಟೇಶ್‌, ಜಿಪಂ ಸದಸ್ಯ ಎಂ.ಎಂ.ಜೆ.ಹರ್ಷವರ್ದನ್‌, ತಾಪಂ ಇಒ ಮಂಜುನಾಥ್‌, ಹಶೀಲ್ದಾರ್‌.ಎಲ್‌.ಕೃಷ್ಣಮೂರ್ತಿ,  ತಾಪಂ ಸದಸ್ಯೆ ಸುಧಾ ಪ್ರಾಣೇಶ್‌, ಜಿ.ಪಾಪನಾಯಕ, ಕೆ.ಎಚ್‌.ವೀರನಗೌಡ್ರು, ಜಿ.ಉಮೇಶ್‌, ಕೆ.ಎನ್‌ .ಭೀಮಪ್ಪ, ಗುಡೇಕೋಟೆ ರಾಜಣ್ಣ, ಬಯಲು ತುಂಬರಗುದ್ದಿ ದುರುಗೇಶ್‌, ಜಿ.ಮಲ್ಲಿಕಾರ್ಜುನ, ಮಹೇಶ್‌, ಭಂಗಿ ವಿಜಯಕುಮಾರ್‌, ಜಗದೀಶ್‌, ಗೋವರ್ದನರೆಡ್ಡಿ ಇದ್ದರು.

ಹಳ್ಳಿಗಳಲ್ಲಿ ತಂಬಿಗೆ ಹಿಡಿದುಕೊಂಡು ಮಹಿಳೆಯರು ಬಹಿರ್ದೆಸೆಗೆ ರಸ್ತೆಯ ಕಡೆಗೆ ಹೋಗುತ್ತಿದ್ದಾರೆಂದರೆ ಅವರು ಬೇರೆ ಯಾರು ಅಲ್ಲ, ನನ್ನ ಮನೆಯ ತಾಯಿ, ತಂಗಿ ಎಂದು ತಿಳಿದುಕೊಂಡು ಸರ್ಕಾರ ನೀಡುವ ಅನುದಾನ ಬಳಸಿಕೊಂಡು ಶೌಚಾಲಯ ಕಟ್ಟಿಸಿಕೊಳ್ಳುವ ಮೂಲಕ ಮಹಿಳೆಯರ ಗೌರವ ಕಾಪಾಡಿ.
ಡಾ|ಕೆ.ವಿ.ರಾಜೇಂದ್ರ, ಜಿಪಂ ಸಿಇಒ.

ಟಾಪ್ ನ್ಯೂಸ್

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.