ಚಿರು ಹೊಸ ಚಿತ್ರ “ರಾಜ ಮಾರ್ತಾಂಡ’
Team Udayavani, Aug 18, 2017, 3:24 PM IST
“ಸಂಹಾರ’ ಚಿತ್ರದ ಕೆಲಸಗಳು ಬಹುತೇಕ ಮುಗಿದಿವೆ. ಚೈತನ್ಯ ನಿರ್ದೇಶನದ ಹೊಸ ಚಿತ್ರದ ಚಿತ್ರೀಕರಣ ಶುರುವಾಗಿದೆ. ಈ ಮಧ್ಯೆ ಚಿರಂಜೀವಿ ಸರ್ಜಾ ಅಲಿಯಾಸ್ ಚಿರು ಸದ್ದಿಲ್ಲದೆ ಹೊಸ ಚಿತ್ರವೊಂದನ್ನು ಒಪ್ಪಿಕೊಂಡಿದ್ದಾರೆ. ಈ ಚಿತ್ರದ ಹೆಸರೇನು ಗೊತ್ತಾ? “ರಾಜ ಮಾರ್ತಾಂಡ’ ಅಂತ.
“ರಾಜ ಮಾರ್ತಾಂಡ’ ಚಿತ್ರವನ್ನು ಬರೆದು, ನಿರ್ದೇಶಿಸಿರುವುದು ರಾಮ್ನಾರಾಯಣ್. ವಿನೋದ್ ಪ್ರಭಾಕರ್ ಅಭಿನಯದ “ಕ್ರ್ಯಾಕ್’ ಎಂಬ ಚಿತ್ರವನ್ನು ಮುಗಿಸಿ, ಬಿಡುಗಡೆಗೆ ಕಾದಿರುವ ರಾಮ್ನಾರಾಯಣ್, ಶ್ರೀನಗರ ಕಿಟ್ಟಿ ಅಭಿನಯದ ಚಿತ್ರವೊಂದನ್ನು ನಿರ್ದೇಶಿಸುತ್ತಾರೆ ಎಂಬ ಸುದ್ದಿ ಇತ್ತು. ಆದರೆ, ಇದೀಗ ಚಿರುಗೆ ಚಿತ್ರ ಮಾಡುವುದಕ್ಕೆ ಹೊರಟಿದ್ದಾರೆ ರಾಮ್ನಾರಾಯಣ್.
ಇದೊಂದು ಪಕ್ಕಾ ಕಮರ್ಷಿಯಲ್ ಚಿತ್ರವಾಗಿದ್ದು, ಕಥೆ-ಚಿತ್ರಕಥೆ-ಸಂಭಾಷಣೆಯನ್ನು ರಾಮ್ನಾರಾಯಣ್ ಅವರೇ ಬರೆದಿದ್ದಾರೆ. ಇದು ಅವರ ಐದನೆಯ ಚಿತ್ರವಾಗಲಿದೆ. ಈ ಚಿತ್ರವನ್ನು ಮಾದೇಶ್ವರ ಪ್ರೊಡಕ್ಷನ್ಸ್ ಲಾಂಛನದಲ್ಲಿ ದಿವ್ಯ, ಸಾಯಿಸೂರ್ಯ, ಪ್ರಣವ್, ಪುನೀತ್ ಗೌಡ ಮುಂತಾದವರು ನಿರ್ಮಿಸುತ್ತಿದ್ದಾರೆ.
“ಕ್ರ್ಯಾಕ್’ ಚಿತ್ರಕ್ಕೆ ಕೆಲಸ ಮಾಡಿದ ಬಹುತೇಕ ತಂತ್ರಜ್ಞರು ಈ ಚಿತ್ರದಲ್ಲೂ ಕೆಲಸ ಮಾಡುವ ಸಾಧ್ಯತೆ ಇದೆ. “ರಾಜ ಮಾರ್ತಾಂಡ’ ಎಂಬ ಟೈಟಲ್ ಕಥೆಗಾರ ಅಜಯ್ ಕುಮಾರ್ ಅವರ ಬಳಿ ಇತ್ತಂತೆ. ಅವರು ಈಗ ಚಿತ್ರದ ಹೆಸರನ್ನು ರಾಮ್ನಾರಾಯಣ್ ಮತ್ತು ಚಿರುಗೆ ಬಿಟ್ಟುಕೊಡುವುದಕ್ಕೆ ಸಜ್ಜಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Sandalwood; ಟ್ರೆಂಡ್ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ