ಸೇವಾ ಮನೋಭಾವ ಬೆಳೆಸಿಕೊಳ್ಳಲು ಶಿಕ್ಷಕರಿಗೆ ಕರೆ
Team Udayavani, Aug 18, 2017, 5:26 PM IST
ಜೇವರ್ಗಿ: ಮಕ್ಕಳಲ್ಲಿ ಹಾಗೂ ಯುವಜನರಲ್ಲಿ ರಾಷ್ಟ್ರಪಿತ ಮಹಾತ್ಮಗಾಂಧೀಜಿ ತತ್ವದ ಆಧಾರದ ಮೇಲೆ ಶಿಸ್ತು ಹಾಗೂ
ರಾಷ್ಟ್ರೀಯತೆ ಬೆಳೆಸುತ್ತಿರುವ ಭಾರತ ಸೇವಾದಳ ಕಾರ್ಯ ಶ್ಲಾಘನೀಯವಾಗಿದೆ ಎಂದು ತಹಶೀಲ್ದಾರ ಯಲ್ಲಪ್ಪ ಸುಬೇದಾರ ಹೇಳಿದರು. ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಕಲಬುರಗಿ ಹಾಗೂ ಭಾರತ ಸೇವಾದಳ ತಾಲೂಕು ಸಮಿತಿ ವತಿಯಿಂದ ಆಯೋಜಿಸಲಾಗಿದ್ದ 2017-18ನೇ ಸಾಲಿನ ತಾಲೂಕು ಮಟ್ಟದ ಶಿಕ್ಷಕರ ಮಿಲಾಪ ಶಿಬಿರದಲ್ಲಿ ಹಡೇìಕರ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು. ಭಾರತ ಸೇವಾದಳಯುವಕರನ್ನು ಆದರ್ಶ ನಾಗರಿಕರನ್ನಾಗಿ ಮಾಡಲು ಸಂಯಮ, ಧೈರ್ಯ, ತ್ಯಾಗ, ಸರಳತೆ, ಸೇವೆ, ತಾಳ್ಮೆ, ಸಹಕಾರ ಮತ್ತು ಪೂರ್ಣ ಸೇವಾ ಮನೋಭಾವ ಮೂಡಿಸುತ್ತದೆ. ಅಲ್ಲದೇ ಶಿಕ್ಷಣದ ಮೂಲಕ ಜನರ ಆರೋಗ್ಯ ಮತ್ತು ಶಾರೀರಿಕ ದೃಢತೆ ಬಳಗೊಳಿಸುತ್ತದೆ. ಜಾತೀಯ ಮತ್ತು ವರ್ಣೀಯ ಭಾವನೆ ತ್ಯಜಿಸಿ ರಚನಾತ್ಮಕ ಕಾರ್ಯಕ್ರಮಗಳ ಮೂಲಕ ಸೇವೆ ಸಲ್ಲಿಸಿ ರಾಷ್ಟ್ರೀಯತೆ ಹೆಚ್ಚಿಸುತ್ತದೆ. ಯಾವುದೇ ಫಲಾಪೇಕ್ಷೆ ಇಲ್ಲದೇ ಭಾರತ
ಸೇವಾದಳದಲ್ಲಿ ಪ್ರತಿಯೊಬ್ಬರೂ ಸೇವೆ ಸಲ್ಲಿಸಬೇಕು ಎಂದು ಹೇಳಿದರು. ಪುರಸಭೆ ಅಧ್ಯಕ್ಷೆ ಮಲ್ಲಮ್ಮ ಮಲ್ಲಣ್ಣ ಅವುಂಟಿ
ಕಾರ್ಯಕ್ರಮ ಉದ್ಘಾಟಿಸಿದರು. ಭಾರತ ಸೇವಾ ದಳದ ಅಧ್ಯಕ್ಷ ರಾಜಶೇಖರ ಸೀರಿ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭದಲ್ಲಿ ನಿಯೋಜಿತ ಅಧ್ಯಕ್ಷ ವಸಂತರಾವ ನರಿಬೋಳ ಅವರ ಪದಗ್ರಹಣ ನೆರವೇರಿಸಿದರು. ಭಾರತ ಸೇವಾದಳದ ರಾಜ್ಯ ಉಪಾಧ್ಯಕ್ಷ ಶಿವಶರಣಪ್ಪ ಜಂಬೇರಾಳ ಪ್ರಾಸ್ತಾವಿಕವಾಗಿ ಮಾತನಾಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಡಾ| ಲಿಂಗರಾಜ ಮೂಲಿಮನಿ, ಡಾ| ಶಿವಲಿಂಗಪ್ಪ ಗೌಳಿ, ಕಾಲೇಜಿನ ಪ್ರಾಚಾರ್ಯ ಬಸವರಾಜ ಕೊಂಬಿನ್, ಅಬ್ದುಲ್ ರಹೇಮಾನ್ ಪಟೇಲ್, ಸುದರ್ಶನ ಆಲಬಾಳ, ಆಹಾರ ನಿರೀಕ್ಷಕ ಡಿ.ಬಿ. ಪಾಟೀಲ, ಹೇಮನೂರು ನಾಯಕ, ಮನೋಹರ ಕಾಮನಕೇರಿ, ಬಸವಂತ್ರಾಯ ಗಜಕೋಶ, ಜಿಲ್ಲಾ ಸಂಘಟಕ ಚಂದ್ರಶೇಖರ ಜಮಾದಾರ, ಡಾ| ಗಿರೀಶ ರಾಠೊಡ, ಡಾ| ವಿಷ್ಣುವರ್ಧನ, ಶಶಿಧರ ಯಡ್ರಾಮಿ, ಡಾ| ವಿನಾಯಕ, ಡಾ| ಕರಿಗೂಳೇಶ್ವರ, ವಿನೋದಕುಮಾರ, ಶಂಕರಲಿಂಗ ಕಲಶೆಟ್ಟಿ, ರವಿ ಕೋಳಕೂರ, ಮಹೇಶ ಬಸರಕೋಡ, ಅಮೃತ ಮಾಲಿಪಾಟೀಲ, ಮಲ್ಲನಗೌಡ ಕಲ್ಲೂರ, ಹಣಮಂತ್ರಾಯ ಕುಳಗೇರಿ, ಎಸ್. ಎಸ್. ಗೊಂಬಿಮಠ ಸೇರಿದಂತೆ ನೂರಾರು ಜನರು ಶಿಕ್ಷಕರು ಭಾಗವಹಿಸಿದ್ದರು. ತಾಲೂಕು ನಾಯಕ ಲಾಲಪ್ಪ ನಾಯಕ ಸ್ವಾಗತಿಸಿದರು. ಶಿಕ್ಷಕ ಎಸ್.ಎಸ್. ಮಾಲಿಬಿರಾದಾರ ನಿರೂಪಿಸಿದರು. ಚಂದ್ರಶೇಖರ ಜಮಾದಾರ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
MUST WATCH
ಹೊಸ ಸೇರ್ಪಡೆ
ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ
ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ