ಪಿಎಫ್ಐ ನಿಷೇಧಕ್ಕೆ ಯುವ ಬಿಜೆಪಿ ಒತ್ತಾಯ


Team Udayavani, Aug 19, 2017, 7:40 AM IST

Z-BJP-PROTEST.jpg

ಮಡಿಕೇರಿ: ಪಾಪ್ಯುಲರ್‌ ಫ್ರಂಟ್‌ ಆಫ್ ಇಂಡಿಯಾ ಮತ್ತು ಕೆಎಫ್ಡಿ ಸಂಘಟನೆಗಳನ್ನು ನಿಷೇಧಿಸ ಬೇಕು ಮತ್ತು ಸಚಿವ ರಮಾನಾಥ ರೈ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಯುವ ಮೋರ್ಚಾದ ಜಿಲ್ಲಾಧ್ಯಕ್ಷ ಕಾಳನ ರವಿ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಕಾರ್ಯಕರ್ತರು ರಾಜ್ಯ ಸರಕಾರ ಹಾಗೂ ಸಚಿವ ರಮಾನಾಥ ರೈ ವಿರುದ್ಧ ಘೋಷಣೆಗಳನ್ನು ಕೂಗಿದರು. ಬಂಟ್ವಾಳ ದಲ್ಲಿ ನಡೆದ ಆರ್‌ಎಸ್‌ಎಸ್‌ ಕಾರ್ಯಕರ್ತ ಶರತ್‌ ಮಡಿವಾಳ ಅವರ ಹತ್ಯೆಯಲ್ಲಿ ಪಾಪ್ಯುಲರ್‌ ಫ್ರಂಟ್‌ ಆಫ್ ಇಂಡಿಯಾದ ಕಾರ್ಯಕರ್ತರು ಭಾಗಿಯಾಗಿರುವುದು ದೃಢಪಟ್ಟಿರುವುದರಿಂದ ಪಿಎಫ್ಐ ಹಾಗೂ ಕೆಎಫ್ಡಿ ಸಂಘಟನೆಗಳನ್ನು ರಾಜ್ಯದಲ್ಲಿ ನಿಷೇಧಿಸಬೇಕು ಎಂದು ಒತ್ತಾಯಿಸಿದರು.

ಈ ಸಂಘಟನೆಗಳ ಬ್ಯಾಂಕ್‌ ಖಾತೆಗಳನ್ನು ಹಾಗೂ ಸ್ಥಿರ ಮತ್ತು ಚರಾಸ್ತಿಗಳನ್ನು ಕೂಡಲೇ ಮುಟ್ಟುಗೋಲು ಹಾಕಿಕೊಳ್ಳಬೇಕು. 2008ರ ರಾಷ್ಟ್ರೀಯ ತನಿಖಾದಳ ಕಾಯ್ದೆಯ ಸೆಕ್ಷನ್‌ 6ರ ಅನ್ವಯ ರಾಜ್ಯದಲ್ಲಿ ಹಿಂದೂಗಳ ಮೇಲೆ ಆಗಿರುವ ಎಲ್ಲ ಹತ್ಯೆ ಮತ್ತು ಹಲ್ಲೆ ಪ್ರಕರಣಗಳನ್ನು ರಾಷ್ಟ್ರೀಯ ತನಿಖಾ ದಳಕ್ಕೆ ಹಸ್ತಾಂತರಿಸಬೇಕು ಎಂದು ಆಗ್ರಹಿಸಿದರು.

ಸಮಾಜಘಾತಕ ಸಂಘಟನೆಗಳಿಗೆ ಮತ್ತು ಕೋಮು ಹಿಂಸೆಗೆ ಸಚಿವ ರಮಾನಾಥ್‌ ರೈ ಅವರು ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಆರೋಪಿಸಿದ ಪ್ರತಿಭಟನಕಾರರು, ಸಚಿವ ಸಂಪುಟದಿಂದ ವಜಾಗೊಳಿಸಬೇಕಲ್ಲದೆ, ಅವರು ತಮ್ಮ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.ಕರ್ನಾಟಕದಲ್ಲಿ ಹಿಂದೂಗಳ ಕೊಲೆ ಮತ್ತು ಹಲ್ಲೆ, ಕೋಮು ದಳ್ಳುರಿಗೆ ಕುಮ್ಮಕ್ಕು ನೀಡುವುದರೊಂದಿಗೆ ಶಾಂತಿ ಸೌಹಾರ್ದಕ್ಕೆ ಭಂಗ ತರುವ ಕೃತ್ಯಗಳಲ್ಲಿ ನೇರವಾಗಿ ಭಾಗಿಯಾಗಿರುವ ಸಂಘಟನೆಗಳ ವಿರುದ್ಧ ಕಠಿನ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಪ್ರತಿಭಟನಕಾರರು ಅಪರ ಜಿಲ್ಲಾಧಿಕಾರಿ ಸತೀಶ್‌ಕುಮಾರ್‌ ಅವರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು. ಬಿಜೆಪಿ ನಗರಾಧ್ಯಕ್ಷ ಮಹೇಶ್‌ಜೈನಿ, ಪ್ರಧಾನ ಕಾರ್ಯದರ್ಶಿ ಉಮೇಶ್‌ ಸುಬ್ರಮಣಿ, ಪ್ರಮುಖರಾದ ಬಿ.ಕೆ. ಜಗದೀಶ್‌, ಬಿ.ಕೆ. ಅರುಣ್‌ಕುಮಾರ್‌, ಕೆ.ಕೆ.ಅಯ್ಯಪ್ಪ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.