ಫೇಸ್‌ಬುಕ್‌ನಲ್ಲಿ ಹಿಂದೂ ದೇವತೆಯ ಅವಮಾನ ಪ್ರಕರಣ: ಆರೋಪಿ ಬಂಧನ


Team Udayavani, Aug 19, 2017, 9:50 AM IST

19-MLR-1.jpg

ಮಂಗಳೂರು: ಫೇಸ್‌ಬುಕ್‌ನಲ್ಲಿ ಜಬ್ಟಾರ್‌ ಬಿ.ಸಿ. ರೋಡ್‌ ಎಂಬ ವ್ಯಕ್ತಿಯ ಹೆಸರಿನಲ್ಲಿ ನಕಲಿ ಖಾತೆಯನ್ನು ತೆರೆದು ಹಿಂದೂ ಧರ್ಮದ ದೇವತೆ ಸೀತಾಮಾತೆಗೆ ಅವಹೇಳನಕಾರಿ ಪದ ಪೋಸ್ಟ್‌ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರಿನ ಬಂದರು ಪೊಲೀಸರು ಉಳ್ಳಾಲ ಮದನಿ ಕ್ವಾಟರ್ಸ್‌ನ ದರ್ವೇಝ್ ಮೊದಿನ್‌ (27) ನನ್ನು ಬಂಧಿಸಿದ್ದಾರೆ. 

ವಿದೇಶದಲ್ಲಿ  ಅಡಗಿ ಕೊಂಡಿದ್ದ ಆರೋಪಿ ದರ್ವೇಝ್ ಮೊದಿನ್‌ ಗುರುವಾರ ಮುಂಬಯಿನ ಛತ್ರಪತಿ ಶಿವಾಜಿ ವಿಮಾನ ನಿಲ್ದಾಣದಲ್ಲಿ ಬಂದಿಳಿದಾಗ ವಿಮಾನ ನಿಲ್ದಾಣದ ಇಮಿಗ್ರೇಶನ್‌ ಅಧಿಕಾರಿಗಳು ಮಂಗಳೂರಿನ ಪೊಲೀಸರಿಗೆ ಮಾಹಿತಿ ನೀಡಿದ್ದು, ಮಂಗಳೂರು ಪೊಲೀಸರು ಮುಂಬಯಿಗೆ ತೆರಳಿ ಶುಕ್ರವಾರ ಮಂಗಳೂರಿಗೆ ಕರೆ ತಂದಿದ್ದಾರೆ. ಆತನನ್ನು  ಜೆ.ಎಂ.ಎಫ್‌.ಸಿ. 2 ನೇ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿ ನ್ಯಾಯಾಂಗ ಬಂಧನ ವಿಧಿಸಲಾಗಿದೆ. 

ಪ್ರಕರಣದ ಹಿನ್ನೆಲೆ: 
ಕಟೀಲು ಕ್ಷೇತ್ರದ ದೇವತೆ ಸಹಿತ ಹಿಂದೂ ದೇವತೆಗಳನ್ನು ಫೇಸ್‌ಬುಕ್‌ನಲ್ಲಿ ಅವಹೇಳನ ಮಾಡಿದ ಪ್ರಕರಣ 2016 ಸೆಪ್ಟಂಬರ್‌ ತಿಂಗಳಲ್ಲಿ  ನಡೆದಿದ್ದು, ಈ ಬಗ್ಗೆ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿದ್ದರು. ಮಂಗಳೂರಿನ ಬಂದರು ಪೊಲೀಸ್‌ ಠಾಣೆಯಲ್ಲಿಯೂ ಈ ಬಗ್ಗೆ ಪ್ರತ್ಯೇಕ ಪ್ರಕರಣ ದಾಖಲಿಸಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಫೇಸ್‌ಬುಕ್‌ನಲ್ಲಿ ಇದನ್ನು ಪೋಸ್ಟ್‌ ಮಾಡಿದ ವ್ಯಕ್ತಿಗಳು ಕಲಂದರ್‌ ಶಾಫಿ ಬಿ. ಎಂ. ಮತ್ತು ದರ್ವೇಝ್ ಮೊದಿನ್‌ ಎಂಬುದಾಗಿ ಗುರುತಿಸಿದ್ದು, ಈ ಹಿನ್ನೆಲೆಯಲ್ಲಿ  ಅವರಿಬ್ಬರ ಮೇಲೆ ಕೇಸು ದಾಖಲಿಸಿದ್ದರು. ಆರೋಪಿಗಳು ವಿದೇಶ ದಲ್ಲಿದ್ದು, ಈ ಕೃತ್ಯವನ್ನು ಎಸಗಿದ್ದರಿಂದ ಅವರ ಪತ್ತೆಗಾಗಿ ಮಂಗಳೂರು ಪೊಲೀಸರು ಲುಕ್‌ಔಟ್‌ ನೋಟೀಸು ಜಾರಿಗೊಳಿಸಿದ್ದರು. 

ಆರೋಪಿ ಕಲಂದರ್‌ ಶಾಫಿ ಬಿ.ಎಂ.ನನ್ನು 2016ರ ಅಕ್ಟೋಬರ್‌ 9ರಂದು ವಿದೇಶದಿಂದ ವಿಮಾನದಲ್ಲಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದ ಸಂದರ್ಭದಲ್ಲಿ  ಬಂದರು ಪೊಲೀಸ್‌ ಠಾಣೆಯ ಇನ್ಸ್‌ಪೆಕ್ಟರ್‌ ಶಾಂತಾರಾಮ್‌ ಮತ್ತು ಸಿಬಂದಿ ವಶಕ್ಕೆ ಪಡೆದು ಬಂಧಿಸಿದ್ದರು. ಆತನನ್ನು ಬಳಿಕ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾನೆ. 

ದರ್ವೇಝ್ ಮೊದಿನ್‌ ಬಂಧನದೊಂದಿಗೆ ಈ ಪ್ರಕರಣದ ಎಲ್ಲಾ ಇಬ್ಬರು ಆರೋಪಿಗಳನ್ನು ಬಂಧಿಸಿದಂತಾಗಿದೆ. ಆರೋಪಿಗಳು “ಮೆಹಪಿಲ್‌ ಗೈಸ್‌’ ಎಂಬ ವಾಟ್ಸಪ್‌ ಗ್ರೂಪ್‌ ರಚಿಸಿಕೊಂಡು ಅದರ ಮೂಲಕ ಮಾಹಿತಿ ವಿನಿಮಯ ಮಾಡಿಕೊಳ್ಳುತ್ತಿದ್ದರು ಹಾಗೂ ನಕಲಿ ಫೇಸ್‌ಬುಕ್‌ ಖಾತೆಯನ್ನು ತೆರೆ ದಿದ್ದರು.   ಕಟೀಲು ಕ್ಷೇತ್ರದ ದೇವತೆ ಮತ್ತು ಹಿಂದೂ ದೇವತೆಗಳನ್ನು ಸಾಮಾಜಿಕ ಜಾಲ ತಾಣದಲ್ಲಿ  ಅವಹೇಳನ ಮಾಡಿದ ಪ್ರಕರಣ ಜಿಲ್ಲೆಯಲ್ಲಿ ಹಾಗೂ ರಾಜ್ಯದಲ್ಲಿ  ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಆರೋಪಿಗಳು ವಿದೇಶದಲ್ಲಿದ್ದುಕೊಂಡು ಈ ಕೃತ್ಯ ಎಸಗಿದ್ದರಿಂದ ಹಾಗೂ ಆರೋಪಿಗಳು ಪತ್ತೆಯಾಗದ ಕಾರಣ ಮಂಗಳೂರು ಪೊಲೀಸರು ಫೇಸ್‌ ಬುಕ್‌ ಸಂಸ್ಥೆಯ ಸಹಕಾರವನ್ನು ಕೋರಿದ್ದರು.

ಫೇಸ್‌ ಬುಕ್‌ ವಿರುದ್ಧ ಕೇಸು ದಾಖಲು
 ಹಲವು ಬಾರಿ ರಿಮೈಂಡರ್‌ ಕಳುಹಿಸಿದ್ದರೂ ಫೇಸ್‌ಬುಕ್‌ ಸಂಸ್ಥೆಯು  ಸಹಕಾರ ಕೊಡದ ಕಾರಣ ಅದರ ವಿರುದ್ಧ  ಪ್ರಕರಣ ದಾಖಲಿಸಿದ್ದರು. ಆಗಲೂ ಸಹಕರಿಸದೆ ಇದ್ದಾಗ ಮಂಗಳೂರಿನ ಪೊಲೀಸರು 2016ರ ಡಿ. 9ರಂದು ಮುಂಬಯಿನ ಫೇಸ್‌ಬುಕ್‌ ಸಂಸ್ಥೆಗೆ ತೆರಳಿ ಅಲ್ಲಿ  ದಾಖಲೆ ಪತ್ರಗಳ ಶೋಧ ಕಾರ್ಯಾಚಣೆ ನಡೆಸಿ ಅಲ್ಲಿನ ಸಿಬಂದಿಯನ್ನು ತರಾಟೆಗೆ ತೆಗೆದುಕೊಂಡಿದ್ದರು. 

ಕೆಲಸ ಬಿಟ್ಟು ಹೋದ ಅಧಿಕಾರಿ 
ಈಗ ಮಂಗಳೂರು ಪೊಲೀಸರ ಕಾರ್ಯಾ ಚರಣೆಗೆ ಹೆದರಿ ಫೇಸ್‌ಬುಕ್‌ ಸಂಸ್ಥೆಯ ಲೀಗಲ್‌ ಆಫೀಸರ್‌ ಆಗಿದ್ದ ಸುಹೈಲ್‌ ಕೆಲಸಕ್ಕೆ ರಾಜೀನಾಮೆ ನೀಡಿದ್ದಾರೆ. ಈಗ ಫೇಸ್‌ಬುಕ್‌ನ ಲೀಗಲ್‌ ಆಫೀಸರ್‌ ವಿಕ್ರಂ ಸಿಂಗಾಪುರದಲ್ಲಿ ಇದ್ದು, ಆತನ ಬಳಿಗೆ ತೆರಳಲು ಮಂಗಳೂರಿನ ಪೊಲೀಸರು ಸಿದ್ಧತೆ ನಡೆಸುತ್ತಿದ್ದಾರೆ. 

ಟಾಪ್ ನ್ಯೂಸ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.