110 ಪವನ್‌ ಚಿನ್ನಾಭರಣ, 70,000 ರೂ. ನಗದು, ರ್ಯಾಡೋ ವಾಚ್‌ ಕಳವು


Team Udayavani, Aug 19, 2017, 10:07 AM IST

19-MLR-3.jpg

ಮಂಜೇಶ್ವರ: ಕುಂಜತ್ತೂರುಪದವಿನಲ್ಲಿ ಗುರುವಾರ ತಡರಾತ್ರಿ  ಮನೆಯೊಂದಕ್ಕೆ ನುಗ್ಗಿದ ಕಳ್ಳರು 110 ಪವನ್‌ ಚಿನ್ನಾಭರಣ, 70 ಸಾವಿರ ರೂ. ನಗದು ಮತ್ತು ರ್ಯಾಡೋ ವಾಚ್‌ ಕಳವು ಮಾಡಿದ್ದಾರೆ.

ಕುಂಜತ್ತೂರುಪದವು ನಿವಾಸಿ ಹೊಸಂಗಡಿಯಲ್ಲಿ ಹಾಲಿನ ವ್ಯಾಪಾರಿಯಾಗಿರುವ ಅಬ್ದುಲ್‌ ಮುನೀರ್‌ ಅವರ ಮನೆಯಿಂದ  ಮನೆಯ ಅಡುಗೆ ಕೋಣೆ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು ಬೆಡ್‌ ರೂಂ ಪ್ರವೇಶಿಸಿ ಕಪಾಟಿನಲ್ಲಿದ್ದ ಚಿನ್ನಾಭರಣ, ವಾಚ್‌ ಹಾಗು ಹಣವನ್ನು ದೋಚಿದ್ದಾರೆ. 
ಅವುಗಳನ್ನು ಪೆಟ್ಟಿಗೆಯೊಂದರಲ್ಲಿ ಇರಿಸಲಾಗಿತ್ತು. ಈ ಪೆಟ್ಟಿಗೆಯನ್ನೇ ಕೊಂಡೊಯ್ದಿದ್ದಾರೆ.

ಅಬ್ದುಲ್‌ ಮುನೀರ್‌, ಪತ್ನಿ ಹಸೀನಾ ಹಾಗೂ ಮೂವರು ಮಕ್ಕಳು ಒಂದೇ ಕೊಠಡಿಯಲ್ಲಿ ನಿದ್ದೆ ಮಾಡಿದ್ದರು. ತಡರಾತ್ರಿ 2 ಗಂಟೆಗೆ ಶಬ್ದ ಕೇಳಿ ಬಂದ ಹಿನ್ನೆಲೆಯಲ್ಲಿ ಅಬ್ದುಲ್‌ ಮುನೀರ್‌ ಹೊರಗೆ ಬೆಳಕು ಹಾಯಿಸಿ ಬಳಿಕ ಮತ್ತೆ ನಿದ್ದೆ ಮಾಡಿದ್ದರು. 
ಕಪಾಟು ತೆರೆಯುವ ಶಬ್ದ ಕೇಳಿ ಹಸೀನಾ ಎಚ್ಚರ ಗೊಂಡಿದ್ದರು. ಕೂಡಲೇ ಪತಿಯನ್ನು ಎಬ್ಬಿಸುತ್ತಿದ್ದಂತೆ ಕಪಾಟಿನೊಳಗಿದ್ದ ನಗ -ನಗದು ಇದ್ದ ಪೆಟ್ಟಿಗೆಯನ್ನು ತೆಗೆದು ಕಳ್ಳರು ಪರಾರಿಯಾಗಿದ್ದಾರೆ. ಕೂಡಲೇ ಕಳ್ಳರನ್ನು ಹಿಂಬಾಲಿಸಿದಾಗ ಕಂಪೌಂಡ್‌ ಹಾರಿದ ಕಳ್ಳರು ಸಮೀಪದಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ ಪರಾರಿಯಾಗಿದ್ದಾರೆ.

ಕಪಾಟಿನೊಳಗೆ ಪೆಟ್ಟಿಗೆಯಲ್ಲಿ ಹಸೀನ ಅವರ 15 ಹಾಗು 10 ಪವನಿನ ಎರಡು ಸರ, ಒಂದು ಪವನಿನ 9 ಬಳೆ, 6 ಪವನ್‌ನ ಒಂದು ಬಳೆ, 11 ಪವನ್‌ನ ಅಲಂಕಾರ ಹೂ, ಹಸೀನಾ ಅವರ ಸಹೋದರಿ ಬಂದ್ಯೋಡಿನ ಮಿಸ್ರಿಯಾ ಅವರ 15 ಪವನ್‌ನ ಸೊಂಟದ ಪಟ್ಟಿ, 5 ಪವನ್‌ನ ತೋಳ್ಪಟ್ಟಿ, ಎರಡೂವರೆ ಪವನಿನ ಸರ, ಇನ್ನೋರ್ವ ಸಹೋದರಿ ನುಸ್ರ ಅವರ ಒಂದು ಪವನಿನ 6 ಬಳೆ, 4 ಪವನಿನ ಬೆಂಡೋಲೆ, ಹಸೀನರ ತಾಯಿ ಆಮಿನ ಅವರ 5 ಪವನ್‌ನ ಆಭರಣ ಹಾಗು ಮಕ್ಕಳಾಭರಣ ಸಹಿತ 110 ಪವನ್‌ ಚಿನ್ನಾಭರಣ ಇರಿಸಲಾಗಿತ್ತು. 

ಮನೆಯ ಆವರಣ ಗೋಡೆಯ ಒಂದು ಭಾಗದಲ್ಲಿ ಕೆಂಪು ಕಲ್ಲುಗಳನ್ನು ತೆಗೆದು ಆ ಮೂಲಕ ಕಳ್ಳರು ಒಳಗೆ ಪ್ರವೇಶಿಸಿದ್ದಾರೆ. ಬಳಿಕ ಬಾಗಿಲಿನ ಬೀಗ ಮುರಿದು ಒಳನುಗ್ಗಿ ಕಪಾಟಿನ ಮೇಲಿರಿಸಿದ್ದ ಕೀಲಿ ಕೈ ಬಳಸಿ ಕಳವು ಮಾಡಲಾಗಿದೆ. 

ಎರಡಂತಸ್ತಿನ ಮನೆ ಚಾವಡಿಯಲ್ಲಿ ಮನೆ ಮಂದಿ ಬಾಗಿಲು ಶೀಘ್ರ ತೆರೆಯದಿರಲು ಬಾಗಿಲಿಗೆ ಅಡ್ಡವಾಗಿ ಕಳ್ಳರು ನೈಲಾನ್‌ ಹಗ್ಗ ಕಟ್ಟಿದ್ದರು.

ಮಂಜೇಶ್ವರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ  ಪರಿಶೀಲಿಸಿದರು. ಶ್ವಾನ ದಳ ಮತ್ತು ಬೆರಳ ಗುರುತು ತಜ್ಞರು ತನಿಖೆ ನಡೆಸಿದ್ದಾರೆ.

ಟಾಪ್ ನ್ಯೂಸ್

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.