ಆಹಾರ ಮೇಳ: ಕೆಂಪಿರುವೆ ಚಟ್ನಿ, ಸೊನೆ ಬೇರು ಟೀ


Team Udayavani, Aug 19, 2017, 11:32 AM IST

mys5.jpg

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯುವ ದಸರಾ ಆಹಾರ ಮೇಳದಲ್ಲಿ ಸಾಮಾನ್ಯವಾಗಿ ದೊರೆಯುವ ಆಹಾರ ಪದಾರ್ಥಗಳ ಜತೆಗೆ ಸಾರ್ವಜನಿಕರಿಗೆ ಬುಡಕಟ್ಟು ಸಮುದಾಯದ ಆಹಾರ ಪದ್ಧತಿಯನ್ನು ಪರಿಚಯಿಸಲಾಗುವುದು ಎಂದು ದಸರಾ ಆಹಾರ ಮೇಳ ಉಪ ಸಮಿತಿ ಕಾರ್ಯಾಧ್ಯಕ್ಷ ಡಾ.ಕಾ.ರಾಮೇಶ್ವರಪ್ಪ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ಆಹಾರ ಮೇಳದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಈ ಬಾರಿ ದಸರಾ ಆಹಾರ ಮೇಳವನ್ನು ವಿಶೇಷವಾಗಿ ನಡೆಸಲು ತೀರ್ಮಾನಿಸಿದ್ದು, ರಾಜ್ಯದ ವಿವಿಧ ಕಡೆಗಳಲ್ಲಿರುವ ಬುಡಕಟ್ಟು ಸಮುದಾಯದ ಆಹಾರ ಪದ್ಧತಿಗಳ ಬಗ್ಗೆ ಸಾರ್ವಜನಿಕರಿಗೆ ಪರಿಚಯಿಸಲಾಗುವುದು ಎಂದರು. 

ತರ ತರದ ತಿಂಡಿ: ಅದರಂತೆ ಈ ಬಾರಿಯ ಆಹಾರ ಮೇಳದಲ್ಲಿ ಸೋಲಿಗರ ಕೆಂಪಿರುವೆ ಚಟ್ನಿ, ಅವರೆ ಸೊನೆಯ ಬೇರು ಟೀ, ಏಡಿ ಸಾರು, ರಾಗಿ ಮುದ್ದೆ, ಬಿದಿರಕ್ಕಿ ಪಾಯಸ, ವೈವಿಧ್ಯಮಯ ಬಾಳೆಹಣ್ಣಿನ ಜತೆಗೆ ನೈಸರ್ಗಿಕ ತಿನಿಸುಗಳನ್ನು ಆಹಾರ ಮೇಳದಲ್ಲಿ ನೀಡಲಾಗುತ್ತಿದೆ ಎಂದು ವಿವರಿಸಿದರು.

ಮೂರು ಕಡೆ ಆಯೋಜನೆ: ಪ್ರತಿಬಾರಿಯೂ ಆಹಾರ ಮೇಳಕ್ಕೆ ಸಾರ್ವಜನಿಕರಿಂದ ಒಳ್ಳೆಯ ಪ್ರತಿಕ್ರಿಯೆ ದೊರೆಯುತ್ತಿದ್ದು, ಹೀಗಾಗಿ ಜನರ ಒತ್ತಡ ನಿಯಂತ್ರಿಸುವ ಮೂಲಕ ಪ್ರತಿಯೊಬ್ಬರು ಆಹಾರ ಮೇಳದ ಸವಿಯನ್ನು ಸವಿಯಲು ಅನುಕೂಲವಾಗಲಿ ಎಂಬ ಉದ್ದೇಶದಿಂದ ಈ ಬಾರಿ ನಗರದ ಮೂರು ಕಡೆಗಳಲ್ಲಿ ಆಹಾರ ಮೇಳ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಒಟ್ಟು 275 ಮಳಿಗೆಗಳು: ಎಂದಿನಂತೆ ನಗರದ ಸ್ಕೌಟ್ಸ್‌ ಅಂಡ್‌ ಗೈಡ್ಸ್‌ ಮೈದಾನದಲ್ಲಿ 100 ಮಳಿಗೆ, ಸಾತಗಳ್ಳಿ ಬಸ್‌ ಡಿಪೋ ನಿಲ್ದಾಣದ ಪಕ್ಕದ ಮೈದಾನದಲ್ಲಿ 100 ಮಳಿಗೆ ಮತ್ತು ಲಲಿತ್‌ ಮಹಲ್‌ ಸಮೀಪದ ತಿ.ನರಸೀಪುರ ಮುಖ್ಯರಸ್ತೆ ಪಕ್ಕದಲ್ಲಿ 75 ಮಳಿಗೆಗಳನ್ನು ತೆರೆಯಲಾಗುವುದು. ಈ ಬಾರಿಯ ದಸರಾ ಆಹಾರ ಮೇಳ ಸೆ.21 ರಿಂದ 28 ರವರೆಗೆ ನಡೆಯಲಿದ್ದು, ಜತೆಗೆ ಮೂರು ಕಡೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದರು.

ರಾಜ್ಯ ಬುಡಕಟ್ಟು ಅಧ್ಯಯ ಸಂಸ್ಥೆ ನಿರ್ದೇಶಕ ಡಾ.ಬಸವನಗೌಡ ಮಾತನಾಡಿ, ಉತ್ತರ ಕನ್ನಡದ ಸಿದ್ದಿ ಬುಡಕಟ್ಟು ಸಮುದಾಯ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆ, ಹಾಸನ, ಶಿವಮೊಗ್ಗ ಸೇರಿದಂತೆ 8 ಜಿಲ್ಲೆಗಳ ಸಿದ್ಧಿ ಸಮುದಾಯ, ಹಕ್ಕಿ-ಪಿಕ್ಕಿ ಜನಾಂಗ ಹಾಗೂ ಕಾಡಂಚಿನ ನಿವಾಸಿಗಳ 15ಕ್ಕೂ ಹೆಚ್ಚಿನ ಸಮುದಾಯದ ಆಹಾರಗಳನ್ನು ಪರಿಚಯಿಸಲಾಗುತ್ತಿದೆ. ನೈಸರ್ಗಿಕ ಆಹಾರ ಪದ್ಧತಿಗಳನ್ನು ಆಹಾರ ಮೇಳದಲ್ಲಿ ಪರಿಚಯಿಸಲಾಗುವುದು.

ಆ ಮೂಲಕ ಎಲ್ಲಾ ಬುಡಕಟ್ಟು ಸಮುದಾಯಗಳನ್ನು ಒಂದೂಗೂಡಿಸುವ ಕೆಲಸ ಮಾಡಲಾಗುವುದು ಎಂದು ಹೇಳಿದರು. ಆಹಾರ ಇಲಾಖೆ ಸಹಾಯಕ ನಿರ್ದೇಶಕ ಎಚ್‌.ಕೆ ರಾಮು, ಜಿಲ್ಲಾ ಗಿರಿಜನ ಕಲ್ಯಾಣ ಅಧಿಕಾರಿ ಶಿವಕುಮಾರ್‌, ಆಹಾರ ಸುರಕ್ಷತಾಧಿಕಾರಿ ದಾûಾಯಣಿ ಬಡಿಗೇರಾ, ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್‌ ಮುಖಂಡ ಕಾವೇರಾ ಇನ್ನಿತರರು ಹಾಜರಿದ್ದರು.

ಟಾಪ್ ನ್ಯೂಸ್

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Vitla ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

10-hunsur

Hunsur: ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಚಾವಣಿ, ಬ್ಯಾರನ್‌ಗೂ ಹಾನಿ

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

2-hunsur

Hunsur: ಹೆದ್ದಾರಿ ಸರ್ವೆ ಕಾರ್ಯ ತಡೆದು ರೈತರ ಆಕ್ರೋಶ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.