ದೇಶದಲ್ಲಿ ರೈತರ ಪರಿಸ್ಥಿತಿ ಶೋಚನೀಯ


Team Udayavani, Aug 19, 2017, 3:09 PM IST

19-SHIV-2.jpg

ಶಿವಮೊಗ್ಗ: ಹೆಚ್ಚು ಹಣ ಗಳಿಸಬೇಕು ಎಂಬ ಒಂದೇ ಉದ್ದೇಶದಿಂದ ದೇಶಿ ಕೃಷಿಯ ವೈವಿಧ್ಯತೆ ಮರೆತು ರಾಸಾಯನಿಕ ಕೃಷಿಯತ್ತ ಹೋದ ರೈತ ಸಮುದಾಯ ಇಂದು ಅನೇಕ ಸಮಸ್ಯೆಗಳ ಸುಳಿಗೆ ಸಿಲುಕಿದ್ದಾರೆ ಎಂದು ಬಸವಕೇಂದ್ರದ ಶ್ರೀ ಮರುಳಸಿದ್ದ ಸ್ವಾಮೀಜಿ ಹೇಳಿದರು.

ರವೀಂದ್ರನಗರದ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ ಶುಕ್ರವಾರ ಸಹಜ ಸಮೃದ್ಧಿ, ಆಗ್ಯಾìನಿಕ್‌ ಶಿವಮೊಗ್ಗ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ದೇಶಿ ಅಕ್ಕಿ ಮೇಳ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ದುರಾಸೆಗೆ ಬಿದ್ದ ರೈತ ನೆಲದ ಹಸಿವನ್ನು ಗಮನಿಸಲಿಲ್ಲ. ಬೇಡಿಕೆಯನ್ನು ಮನ್ನಿಸಲಿಲ್ಲ.
ಬದಲಾಗಿ ಈ ನೆಲಕ್ಕೆ ಯಾವ ಬೆಳೆ ಬೇಕಾಗಿತ್ತೋ ಅದನ್ನು ಬೆಳೆಯದೆ ಬೇರೆ ಬೆಳೆಯನ್ನು ತಂದು ಬೆಳೆದ. ಇದಕ್ಕೆ ರಾಸಾಯನಿಕ ಗೊಬ್ಬರ, ಕೀಟ ನಾಶಕವನ್ನು ಯಥೇತ್ಛವಾಗಿ ಬಳಕೆ ಮಾಡಿದ. ಹೀಗಾಗಿ ಇಂದು ತಿನ್ನಬಾರದ ಆಹಾರ ತಿನ್ನುವಂತಾಗಿದೆ. ಇದರಿಂದ ಬರ ಬಾರದ ಕಾಯಿಲೆಗಳು ಬರತೊಡಗಿದೆ ಎಂದರು.

ಕೃಷಿಯೇ ಪ್ರಧಾನವಾಗಿರುವ ಭಾರತದಲ್ಲಿ ಸರ್ಕಾರಗಳು ಕೂಡ ರೈತರ ಬಗ್ಗೆ ಗಂಭೀರವಾಗಿ ಯೋಚನೆಯನ್ನೇ ಮಾಡುತ್ತಿಲ್ಲ. ಬದಲಾಗಿ ಕೃಷಿ ಕ್ಷೇತ್ರವನ್ನು ಕೊನೆಯ ಆದ್ಯತೆಯನ್ನಾಗಿಸಿವೆ. ದೇಶದಲ್ಲಿ ರೈತರ ಪರಿಸ್ಥಿತಿ ಶೋಚನೀಯವಾಗಿದೆ. ಯುವ ಜನತೆ ಕ್ರಿಕೆಟ್‌ ಬಗ್ಗೆ ಯೋಚಿಸುತ್ತಾರೆಯೇ ವಿನಃ ರೈತರ ಕಷ್ಟದ ಬಗ್ಗೆ ಕಿಂಚಿತ್ತು ಕಾಳಜಿ ತೋರುತ್ತಿಲ್ಲ. ಇದು ದೇಶದ ದುರಂತ ಎಂದು ಹೇಳಿದರು.

ಕೃಷಿಯಲ್ಲಿ ರಾಸಾಯನಿಕ ಉತ್ಪನ್ನಗಳ ಬಳಕೆಯಿಂದಾಗಿ ಮಣ್ಣು ಸತ್ವ ಇಲ್ಲದಂತಾಗಿದೆ. ಮತ್ತೆ ಮರಳಿ ದೇಶೀಯ ಕೃಷಿ ಪದ್ಧತಿಯನ್ನು ರೈತರು ಅಳವಡಿಸಿಕೊಳ್ಳಬೇಕು. ನಮ್ಮ ನೆಲದ ಸತ್ವ ತಿಳಿದು ಬೆಳೆಗಳನ್ನು ಬೆಳೆಯಬೇಕು. ಇಲ್ಲವಾದಲ್ಲಿ ಇನ್ನು ಹೆಚ್ಚಿನ ಅನಾಹುತಗಳು ಸಂಭವಿಸುತ್ತವೆ ಎಂದು ಎಚ್ಚರಿಕೆ ನೀಡಿದರು.

ರೈತ ಮುಖಂಡ ಎಚ್‌.ಆರ್‌. ಬಸವರಾಜಪ್ಪ ಮಾತನಾಡಿ, ಹಿಂದೆ ಒಕ್ಕಲುತನ ಎಂದರೆ ಒಂದು ಸಂಸ್ಕೃತಿಯಾಗಿತ್ತು. ರೈತರು ನೆಮ್ಮದಿಯಿಂದ, ಸಂತೋಷದಿಂದ ಕೃಷಿ ಚಟುವಟಿಕೆಯಲ್ಲಿ ಪಾಲ್ಗೊಳ್ಳುತ್ತಿದ್ದರು. ಲಾಭ-ನಷ್ಟದ ಪ್ರಶ್ನೆಯೂ ಇರಲಿಲ್ಲ. ಶ್ರೀಮಂತರಾಗಬೇಕು ಎಂಬ ಭಾವನೆಯೂ ಇರಲಿಲ್ಲ. ಆದರೆ ಇತ್ತೀಚೆಗೆ ರೈತ ಸಮುದಾಯ ಹೆಚ್ಚಿನ ಇಳುವರಿ ಪಡೆಯುವುದಕ್ಕಾಗಿ ರಾಸಾಯನಿಕ ಗೊಬ್ಬರ, ಕೀಟ ನಾಶಕಗಳನ್ನು ಮಣ್ಣಿಗೆ ಉಣಬಡಿಸುತ್ತಿದ್ದಾರೆ ಎಂದರು.

 ಎಸ್‌.ಎಸ್‌. ಸತೀಶ್‌, ಎನ್‌.ಆರ್‌. ಶೆಟ್ಟಿ, ದುಮ್ಮಳ್ಳಿ ಶಿವಮ್ಮ, ಡಾ| ಎನ್‌.ಕೆ. ನಾಯಕ್‌, ನಂದೀಶ್‌, ಗಿರಿಜಮ್ಮ ಮತ್ತಿತರರು ಉಪಸ್ಥಿತರಿದ್ದರು. ದೀಪಾ ಕಾಮತ್‌ ಪ್ರಾರ್ಥಿಸಿದರು. ಈಶ್ವರ್‌ ತೀರ್ಥ ಸ್ವಾಗತಿಸಿ, ಮಂಜುನಾಥ್‌ ನಿರೂಪಿಸಿದರು. ಮೇಳದಲ್ಲಿ ವಿವಿಧ ತಳಿಯ ಭತ್ತ, ಅಕ್ಕಿ ಪ್ರದರ್ಶನ ಹಾಗೂ ಮಾರಾಟಕ್ಕೆ ಕಲ್ಪಿಸಲಾಗಿತ್ತು. 

ಟಾಪ್ ನ್ಯೂಸ್

1-asaaasas

Dalai Lama ವಿರುದ್ಧ ಅವಹೇಳನ: ಕಂಗನಾ ವಿರುದ್ಧ ಕಪ್ಪು ಬಾವುಟ

kejriwal

AAP ವಿದೇಶಿ ದೇಣಿಗೆ: ED ದೂರು ಪಿತೂರಿ ಎಂದ ಕೇಜ್ರಿವಾಲ್‌ ಪಕ್ಷ

1-wwewqe

Retirement ಬಗ್ಗೆ ಧೋನಿ ಏನೂ ಹೇಳಿಲ್ಲ: ಸಿಎಸ್‌ಕೆ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

ಅವ್ಯವಸ್ಥೆ… ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

Shimoga; ಪ್ಲಾಸ್ಟಿಕ್ ನುಂಗಿದ್ದ ಹಾವು ರಕ್ಷಣೆ

Shimoga; ಪ್ಲಾಸ್ಟಿಕ್ ನುಂಗಿದ್ದ ಹಾವು ರಕ್ಷಣೆ

ayanuru-Manjunath

BJPಯಲ್ಲಿ ನನಗೆ ಅನ್ಯಾಯವಾದಾಗ ರಘುಪತಿ ಭಟ್ ಸ್ಪರ್ಧೆ ಬೇಡ ಅಂದಿದ್ದರು: ಆಯನೂರು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-asaaasas

Dalai Lama ವಿರುದ್ಧ ಅವಹೇಳನ: ಕಂಗನಾ ವಿರುದ್ಧ ಕಪ್ಪು ಬಾವುಟ

kejriwal

AAP ವಿದೇಶಿ ದೇಣಿಗೆ: ED ದೂರು ಪಿತೂರಿ ಎಂದ ಕೇಜ್ರಿವಾಲ್‌ ಪಕ್ಷ

1-wwewqe

Retirement ಬಗ್ಗೆ ಧೋನಿ ಏನೂ ಹೇಳಿಲ್ಲ: ಸಿಎಸ್‌ಕೆ

1-fff

Geneva Open ಟೆನಿಸ್‌: ಸುಮಿತ್‌ಗೆ ಸೋಲು

police USA

China ಶಾಲೆಯಲ್ಲಿ ಚಾಕು ಇರಿತ: 5 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.