ಮದುಮಗಳು ಚೆನ್ನಾಗಿದ್ರೆ ಗಂಡುಗಳು ಜಾಸ್ತಿ ಬರ್ತಾವೆ’
Team Udayavani, Aug 20, 2017, 7:30 AM IST
ಬೆಂಗಳೂರು: “ಮದುಮಗಳು ಚೆನ್ನಾಗಿದ್ದರೆ, ಗಂಡುಗಳು ಜಾಸ್ತಿ ಬರ್ತಾವೆ’ -ಹೀಗೆಂದು ಹಾಸ್ಯ ಚಟಾಕಿ ಹಾರಿಸಿದವರು ವಿಧಾನಸಭೆಯಿಂದ ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಕೇಂದ್ರದ ಮಾಜಿ ಸಚಿವ ಸಿ.ಎಂ. ಇಬ್ರಾಹಿಂ.
ಪರಿಷತ್ ಚುನಾವಣೆಗೆ ತಮ್ಮನ್ನು ಅಭ್ಯರ್ಥಿಯಾಗಿ ಘೋಷಣೆ ಮಾಡಿರುವುದಕ್ಕೆ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ನನಗೆ ಅವಕಾಶ ನೀಡಿದ್ದಕ್ಕೆ ಪಕ್ಷದ ಅಧ್ಯಕ್ಷೆ ಸೋನಿಯಾಗಾಂಧಿ, ಉಪಾಧ್ಯಕ್ಷ ರಾಹುಲ್ಗಾಂಧಿ ಸೇರಿ ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ’ ಎಂದು ಹೇಳಿದರು.
“ಜೆಡಿಎಸ್ ಸೇರುತ್ತೀರಿ ಎಂಬ ಮುನ್ಸೂಚನೆಯಿಂದ ನಿಮಗೆ ಟಿಕೆಟ್ ನೀಡಿದ್ದಾರ’ ಎಂಬ ಪ್ರಶ್ನೆಗೆ, “ಮದುಮಗಳು
ಚೆನ್ನಾಗಿದ್ದಾರೆ ಗಂಡುಗಳು ಜಾಸ್ತಿ ಬರ್ತಾವೆ’ ಎಂದು ಚಟಾಕಿ ಹಾರಿಸಿದರು. “ಮುಖ್ಯಮಂತ್ರಿ ಸಿದ್ದರಾಮಯ್ಯ
ಜತೆ ಯಾವುದೇ ಮುನಿಸಿಲ್ಲ. ಅವರು ನನ್ನ ಹಳೆಯ ಸ್ನೇಹಿತರು. ಅವರು ಉಪ ಮುಖ್ಯಮಂತ್ರಿಯಾದಾಗಿದ್ದಕ್ಕಿಂತ
ಈಗ ಹೆಚ್ಚು ಜವಾಬ್ದಾರಿ ಅವರ ಮೇಲಿದೆ’ ಎಂದರು.
“ನನಗೊಂದು ಜವಾಬ್ದಾರಿ ನೀಡಲಿ ಎನ್ನುವುದು ಜನರ ಅಭಿಪ್ರಾಯವಾಗಿತ್ತು. ಅದರಂತೆ ವಿಧಾನ ಪರಿಷತ್ತಿಗೆ ಅವಕಾಶ ಕಲ್ಪಿಸಿದ್ದಾರೆ. ಎರಡು ಹುದ್ದೆಯಲ್ಲಿ ಮುಂದುವರಿಯುವುದು ಬೇಡ ಎಂಬ ಕಾರಣಕ್ಕೆ ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಸೋಮವಾರ ಮೇಲ್ಮನೆ ಚುನಾವಣೆಗೆ ನಾಮಪತ್ರ ಸಲ್ಲಿಸುತ್ತೇನೆ ‘ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್