ಸಿಎಂ ರಾಜೀನಾಮೆಗೆ ಆಗ್ರಹಿಸಿ ರಾಜ್ಯಾದ್ಯಂತ ಪ್ರತಿಭಟನೆ ಇಂದು
Team Udayavani, Aug 20, 2017, 6:10 AM IST
ಶಿವಮೊಗ್ಗ: ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ವನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ಭಾನುವಾರ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸಲಿದೆ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂಧನ ಸಚಿವ ಡಿ.ಕೆ.ಶಿವಕುಮಾರ್ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ ನಂತರ ಬಿಜೆಪಿ ನಾಯಕರ ವಿರುದಟಛಿ ಮುಖ್ಯಮಂತ್ರಿ ಸೇಡಿನ ರಾಜಕೀಯ ಮಾಡತೊಡಗಿದ್ದಾರೆ. ಎಸಿಬಿಯನ್ನು ದುರ್ಬಳಕೆ ಮಾಡಿಕೊಂಡು ಹೈಕೋರ್ಟ್ನಲ್ಲಿ ಖುಲಾಸೆಯಾಗಿದ್ದ ಪ್ರಕರಣವನ್ನು ಮತ್ತೂಮ್ಮೆ ತೆರೆಯಲು ಮುಂದಾಗಿದ್ದಾರೆ.
ಶಿವರಾಮ ಕಾರಂತ ಬಡಾವಣೆ ನಿರ್ಮಾಣ ಸಂಬಂಧ ಡಿನೋಟಿಫೈ ಮಾಡಿ ಸರ್ಕಾರಕ್ಕೆ 2 ಸಾವಿರ ಕೋಟಿ ರೂ.ನಷ್ಟ ವಾಗಿದೆ ಎಂದು ಹೇಳಲಾಗಿದೆ. ಆದರೆ, ಹೈಕೋರ್ಟ್ನಲ್ಲಿ ಈ ಪ್ರಕರಣದ ವಿಚಾರಣೆ ನಡೆದು ನ್ಯಾಯಾಲಯ ಪ್ರಕರಣವನ್ನು ಖುಲಾಸೆಗೊಳಿಸಿದೆ. ಹೀಗಿದ್ದರೂ, ಮುಖ್ಯಮಂತ್ರಿ ವಿಶೇಷ ಆಸಕ್ತಿ ವಹಿಸಿ ಕೇಸು ದಾಖಲಿಸುತ್ತಿರುವುದರ ಹಿಂದೆ ಸೇಡಿನ ಹಾಗೂ ಕುತಂತ್ರ ರಾಜಕೀಯ ಬಿಟ್ಟರೆ ಬೇರೆ ಯಾವ ಉದ್ದೇಶವೂ ಇಲ್ಲ. ಈ ಮೂಲಕ ಬಹಿರಂಗ ವ್ಯಭಿಚಾರ ಮಾಡಲಾಗುತ್ತಿದೆ ಎಂದು ದೂರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
D. K. Shivakumar ಪೆನ್ಡ್ರೈವ್ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ
Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್ ದಾಖಲು
Hassan Pen Drive Case; ಕಾರ್ತಿಕ್ ಪೆನ್ಡ್ರೈವ್ ಕೊಟ್ಟಿದ್ದು ನಿಜ: ದೇವರಾಜೇಗೌಡ