ಪಂಚಭೂತಗಳಲ್ಲಿ ಲೀನರಾದ ಏಣಗಿ ಬಾಳಪ್ಪ
Team Udayavani, Aug 20, 2017, 7:55 AM IST
ಬೆಳಗಾವಿ/ಸವದತ್ತಿ: ನಾಡೋಜ ಹಿರಿಯ ರಂಗಜೀವಿ, ನಾಟ್ಯಭೂಷಣ, ಕಲಾ ತಪಸ್ವಿ ಡಾ| ಏಣಗಿ ಬಾಳಪ್ಪ ಶನಿವಾರ
ಪಂಚಭೂತಗಳಲ್ಲಿ ಲೀನರಾದರು.
ಶುಕ್ರವಾರ ಬೆಳಗ್ಗೆ ವಿಧಿವಶರಾದ ಡಾ| ಏಣಗಿ ಬಾಳಪ್ಪನವರ ಪಾರ್ಥಿವ ಶರೀರವನ್ನು ಶನಿವಾರ ಬೆಳಗ್ಗೆಯಿಂದ ಅಂತಿಮ ದರ್ಶನಕ್ಕೆ ಇಡಲಾಗಿತ್ತು. ಸಕಲ ಸರಕಾರಿ ಗೌರವದೊಂದಿಗೆ ಜನ್ಮಸ್ಥಳ ಏಣಗಿ ಗ್ರಾಮದಲ್ಲಿ ಶನಿವಾರ ಅಂತ್ಯಕ್ರಿಯೆ ನೆರವೇರಿಸಲಾಯಿತು.
ಬಾಳಪ್ಪನವರ ನಿವಾಸದ ಆವರಣದಲ್ಲಿ ಗಾಳಿಯಲ್ಲಿ ಮೂರು ಸುತ್ತು ಕುಶಾಲತೋಪು ಹಾರಿಸಿ ಗೌರವ ಸಲ್ಲಿಸಲಾಯಿತು. ಗ್ರಾಮದ ಸಮೀಪದಲ್ಲಿ ಇರುವ ಜಮೀನಿನಲ್ಲಿ ಪತ್ನಿ ಸಾವಿತ್ರಮ್ಮ ಅವರ ಸಮಾಧಿ ಪಕ್ಕದಲ್ಲಿಯೇ ಅಂತ್ಯಕ್ರಿಯೆ ನೆರವೇರಿಸಲಾಯಿತು. ಕುಟುಂಬದ ಸದಸ್ಯರು ವಿಧಿವಿಧಾನಗಳನ್ನು ನೆರವೇರಿಸಿದರು. ಲಿಂಗಾಯತ ಸಂಪ್ರದಾಯದ ಪ್ರಕಾರ ಅಂತ್ಯಸಂಸ್ಕಾರ ನೆರವೇರಿಸಲಾಯಿತು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಬಾಳಪ್ಪನವರ ಪಾರ್ಥಿವ ಶರೀರದ ಮೆರವಣಿಗೆ ನಡೆಸಲಾಯಿತು.
ಡಾ| ಏಣಗಿ ಬಾಳಪ್ಪನವರ ಪಾರ್ಥಿವ ಶರೀರಕ್ಕೆ ಸಚಿವೆ ಉಮಾಶ್ರೀ ಅಂತಿಮ ನಮನ ಸಲ್ಲಿಸಿದರು. ಸಂಸದ ಸುರೇಶ
ಅಂಗಡಿ, ಶಾಸಕರಾದ ಆನಂದ ಮಾಮನಿ, ಡಾ| ವಿಶ್ವನಾಥ ಪಾಟೀಲ, ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಎನ್.ಆರ್. ವಿಶುಕುಮಾರ, ಜಿಲ್ಲಾಧಿಕಾರಿ ಜಿಯಾವುಲ್ಲಾ, ಎಸ್ಪಿ ಡಾ| ಬಿ.ಆರ್. ರವಿಕಾಂತೇಗೌಡ ಗೌರವ ಸಲ್ಲಿಸಿದರು. “ಬಾಳಪ್ಪನವರ ನಿಧನದಿಂದ ನಾಡಿನ
ಸಾಂಸ್ಕೃತಿಕ ಕೊಂಡಿ ಕಳಚಿದಂತಾಗಿದೆ.
ರಂಗಭೂಮಿಯ ಬಹುದೊಡ್ಡ ಕಲಾವಿದರಾದ ಅವರು ಶತಾಯುಷಿಯಾಗಿ ನಮ್ಮೊಂದಿಗೆ ಇದ್ದಿದ್ದು ನಮ್ಮೆಲ್ಲರ
ಭಾಗ್ಯ’ ಎಂದು ಸಚಿವೆ ಉಮಾಶ್ರೀ ಸ್ಮರಿಸಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
MUST WATCH
ಹೊಸ ಸೇರ್ಪಡೆ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ