ನಾನು ಆರೋಗ್ಯವಾಗಿದ್ದೇನೆ; ವದಂತಿಗಳಿಗೆ ತೆರೆ ಎಳೆದ ಪರ್ರಿಕರ್
Team Udayavani, Aug 20, 2017, 10:31 AM IST
ಪಣಜಿ :’ನಾನು ಕ್ಷೇಮವಾಗಿದ್ದೇನೆ, ಯಾವುದೇ ಆರೋಗ್ಯ ಸಮಸ್ಯೆ ಹೊಂದಿಲ್ಲ’ ಎಂದು ಗೋವಾ ಮುಖ್ಯಮಂತ್ರಿ ಮನೋಹರ್ ಪರ್ರಿಕರ್ ಹೇಳಿದ್ದಾರೆ.
ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಪರ್ರಿಕರ್ ವಿದ್ಯಾರ್ಥಿಯೊಬ್ಬ ನಿಮ್ಮ ಆರೋಗ್ಯ ಹೇಗಿದೆ ಎಂದು ಕೇಳಿದಾಗ ‘ನಾನು ಆರೋಗ್ಯವಾಗಿದ್ದೇನೆ. ಕೆಲ ಪಟ್ಟಭದ್ರ ಹಿತಾಸಕ್ತಿಗಳು ನನ್ನ ಆರೋಗ್ಯದ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿವೆ’ ಎಂದಿದ್ದಾರೆ.
’10 ವರ್ಷಗಳ ಹಿಂದೆ ನಾನು ಆ್ಯಂಜಿಯೋಪ್ಲಾಸ್ಟಿ ಸರ್ಜರಿಗೆ ಒಳಗಾಗಿದ್ದೆ , ಹೀಗಾಗಿ ಎಂದಿನಂತೆ ಆಸ್ಪತ್ರೆಗೆ ಪರೀಕ್ಷೆಗೆ ತೆರಳಿದ್ದೆ. ಸಣ್ಣ ಪ್ರಮಾಣದ ಬ್ಲಾಕ್ ಇರುವ ಬಗ್ಗೆ ವೈದ್ಯರು ಹೇಳಿದರು. ತಕ್ಷಣ ಚಿಕಿತ್ಸೆ ಪಡೆದು 3 ರಿಂದ 4 ಗಂಟೆಗಳ ಒಳಗೆ ನಾನು ಆಸ್ಪತ್ರೆಯಿಂದ ಹೊರಗೆ ಬಂದಿದ್ದೇನೆ’ ಎಂದರು.
‘ಎಲ್ಲರಿಗೂ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಗಳಿರುತ್ತವೆ. ನನಗೆ ಬೇರೆ ಯಾವುದೇ ಸಮಸ್ಯೆ ಇಲ್ಲ. ನಾನು ದೆಹಲಿಯಲ್ಲಿದ್ದಾಗ 85 ಕೆ.ಜಿ ಇದ್ದೆ , ಈಗ 75 ಕೆ.ಜಿಗೆ ಇಳಿದಿದ್ದೇನೆ. ನನ್ನ ಆರೋಗ್ಯವನ್ನು ನಾನು ಕಾಪಾಡಿಕೊಳ್ಳುತ್ತೇನೆ. ಯಾರೂ ಈ ಬಗ್ಗೆ ತಲೆ ಕೆಡಿಸಿಕೊಳ್ಳಬೇಕಿಲ್ಲ’ ಎಂದರು.
ಪರ್ರಿಕರ್ ಅವರು ಕೇಂದ್ರ ರಕ್ಷಣಾ ಸಚಿವ ಸ್ಥಾನ, ರಾಜ್ಯ ಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸಿದ್ದರು. ಹೀಗಾಗಿ ವಿಧಾನಸಭೆಗೆ ಆಯ್ಕೆಯಾಗುವುದು ಅನಿವಾರ್ಯವಾಗಿತ್ತು. ಹುಲ್ಲಾಮಾಲು ಕ್ಷೇತ್ರದ ಬಿಜೆಪಿ ಶಾಸಕ ರಾಜೀನಾಮೆ ನೀಡಿ ಪರ್ರಿಕರ್ ಅವರ ಸ್ಫರ್ಧೆಗೆ ಅನುವು ಮಾಡಿಕೊಟ್ಟಿದ್ದರು. ಅಗಸ್ಟ್ 23 ರಂದು ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’