ಮಳೆ ಕೊರತೆಗೆ ಅಲ್ಪಾವಧಿ ಬೆಳೆ ಹಾಳು


Team Udayavani, Aug 20, 2017, 10:49 AM IST

Farmerstory1 copy.JPG

ಅಫಜಲಪುರ: ತಾಲೂಕಿನಾದ್ಯಂತ ಮಳೆ ಕೊರತೆ ಹಿನ್ನೆಲೆಯಲ್ಲಿ ಅಲ್ಪಾವಧಿ ಬೆಳೆಗಳು ಸಂಪೂರ್ಣ ಹಾಳಾಗಿದ್ದು, ರೈತರು ಆತಂಕಪಡುವಂತೆ ಆಗಿದೆ. ಉತ್ತಮ ಮುಂಗಾರು ಮಳೆ ಬಂದ ಹಿನ್ನೆಲೆಯಲ್ಲಿ ರೈತರು ಖುಷಿಯಿಂದ ಅಲ್ಪಾವಧಿ ಬೆಳೆಗಳಾದ ಉದ್ದು, ಎಳ್ಳು, ಹೆಸರು ಬಿತ್ತನೆ ಮಾಡಿದ್ದರು. ಬಿತ್ತನೆಯಾದ ಮೇಲೆ ಮಳೆಯೇ ಬಾರದಿರುವ ಹಿನ್ನೆಲೆಯಲ್ಲಿ ಬೆಳೆಗಳು ಹಾಳಾಗಿವೆ. ಕೆಲವೆಡೆ ರೈತರು ತಾವೇ ಬಿತ್ತಿದ ಬೆಳೆಯನ್ನು ಕಿತ್ತು ಹಾಕುತ್ತಿದ್ದಾರೆ. ತಾಲೂಕಿನ ಘತ್ತರಗಿಯಲ್ಲಿ ರೈತರೊಬ್ಬರು ಮಳೆ ಆಗದಿದ್ದರೇನಂತೆ ಎಂದು ಸ್ಪಿಂಕ್ಲರ್‌ ಮೂಲಕ ನೀರು ಸಿಂಪಡಿಸಿ ನೋಡುತ್ತೇನೆ ಎಂದು ಬೆಳೆಗೆ ನೀರು ಸಿಂಪಡಿಸುತ್ತಿದ್ದಾರೆ. ಈ ಪ್ರಯತ್ನ ಫಲ ನೀಡಿದರೆ ಶ್ರಮಕ್ಕೆ ಫಲ ಸಿಗಲಿದೆ. ತಾಲೂಖೀನ ಗೊಬ್ಬೂರ (ಬಿ) ಗ್ರಾಮದಲ್ಲಿ ರೈತರು ಮಳೆ ಕೊರತೆಯಿಂದ ಬಾಡಿ ಹೋಗುತ್ತಿರುವ ಹೆಸರು ಬೆಳೆಯನ್ನು ಕಿತ್ತು ಹಾಕುತ್ತಿದ್ದಾರೆ. ಸಾಲ ಮಾಡಿಕೊಂಡು ದುಬಾರಿಯಾದರೂ ಯೋಚಿಸದೆ ಆಳುಗಳನ್ನು ಹಚ್ಚಿ ಬಿತ್ತನೆ ಮಾಡಿದ್ದ ರೈತರು ಅದೇ ಕೂಲಿ ಆಳುಗಳಿಂದ ಬಿತ್ತಿದ ಬೆಳೆಯನ್ನು ಕಿತ್ತಿಸುತ್ತಿದ್ದಾರೆ. ಹಿಂಗಾರಿ ಬೆಳೆ ಮೇಲೆ ಆಸೆ: ಮುಂಗಾರು ಮಳೆ ಕೈ ಕೊಟ್ಟಿದ್ದು, ಹಿಂಗಾರು ಮಳೆ ಉತ್ತಮವಾಗಿ ಆದರೆ ಜೋಳವನ್ನಾದರೂ ಬೆಳೆದುಕೊಂಡು ವರ್ಷದ ಗಂಜಿ ಮಾಡಿಕೊಳ್ಳುತ್ತೇವೆ. ದನಕರುಗಳಿಗೆ ಕಣಕಿ ಮೇವಾದರೂ ಸಿಗಲಿದೆ. ಹಿಂಗಾರು ಮಳೆಯೂ ಬಾರದಿದ್ದರೆ ನಾವು ಈ ಬಾರಿ ಗುಳೆ ಹೋಗುವುದಂತು ಖಂಡಿತ ಎಂದು ರೈತರು ತಮ್ಮ ಗೋಳನ್ನು ಹೇಳಿಕೊಳ್ಳುತ್ತಾರೆ. ಈ ಬಾರಿ ತಾಲೂಕಿನಾದ್ಯಂತ 2095 ಹೆಕ್ಟೇರ್‌ ಪ್ರದೇಶದಲ್ಲಿ ಮಳೆಯಾಶ್ರಿತ ಬಿತ್ತನೆಯಾಗಿದೆ. ಈ ಪೈಕಿ 1676 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಇದು ಮಳೆಯಾಶ್ರಿತ ಬೆಳೆಯಾಗಿದ್ದರಿಂದ ಸ್ಪಿಂಕ್ಲರ್‌ ಪಯೋಗಿಸದರೆ ಪ್ರಯೋಜನವಿಲ್ಲ ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಶರಣಗೌಡ ಪಾಟೀಲ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ

ಹಿಂಗಾರು ಕೈಕೊಟ್ಟರೆ ಬೀದಿಪಾಲು: ಮುಂಗಾರು ಮಳೆ ಬಾರದೇ ಇರುವುದರಿಂದ ಬಿತ್ತಿದ ಬೆಳೆ ಹಾಳಾಗಿದೆ. ಹಿಂಗಾರು ಮಳೆಯಾದರೂ ಉತ್ತಮವಾಗಿ ಬಂದರೆ ಜೋಳ ಬೆಳೆದುಕೊಂಡು ನಮಗೂ ಮತ್ತು ದನಕರುಗಳಿಗೂ
ತುತ್ತಿನ ಗಂಜಿ ಬೆಳೆದುಕೊಳ್ಳುತ್ತೇವೆ. ಇಲ್ಲದಿದ್ದರೆ ನಮ್ಮ ಬಾಳು ಬೀದಿಪಾಲಾಗಲಿದೆ. 

ಶಿವಾನಂದ ಬಸಣ್ಣ ಕಲಶೆಟ್ಟಿ, ಗೊಬ್ಬೂರ (ಬಿ) ಗ್ರಾಮದ ರೈತ

ಬೆಳೆ ಕೈ ಹಿಡಿಯದಿದ್ದರೆ ಪರದಾಟ: ಸ್ಪಿಂಕ್ಲರ್‌ ಬಳಸಿ ಹೆಸರು ಬೆಳೆಗೆ ನೀರು ಹರಿಸುತ್ತಿದ್ದೇನೆ. ಇದರಿಂದ ಬೆಳೆ ಕೈಹಿಡಿದರೆ ನಾವು, ನಮ್ಮ ಕುಟುಂಬದವರು ಬದುಕಲು ಸಹಕಾರಿಯಾಗಲಿದೆ. ಇಲ್ಲದಿದ್ದರೆ ತುತ್ತು ಅನ್ನಕ್ಕೂ ಪರದಾಡುವ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಬೆಳೆ ಕೈ ಹಿಡಿದರೆ ಇತರ ರೈತರಿಗೂ ಮಾದರಿ ಆಗಲಿದೆ.
ಮಹಾದೇವಪ್ಪ ಗುರುಪ್ಪ ಭೂಸನೂರ, ಘತ್ತರಗಾ ಗ್ರಾಮದ ರೈತ

ಟಾಪ್ ನ್ಯೂಸ್

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

BJP Symbol

Madhya Pradesh: ಮತ್ತೊಬ್ಬ ಕಾಂಗ್ರೆಸ್‌ ಎಂಎಲ್‌ಎ ಬಿಜೆಪಿಗೆ

arrested

ನೂಪುರ್‌ ಶರ್ಮಾ, ಬಿಜೆಪಿ ಶಾಸಕನ ಹತ್ಯೆ ಸಂಚು: ಮೌಲ್ವಿ ಬಂಧನ

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.