ಸಂಚಾರ ದಟ್ಟಣೆ ನಿಯಂತ್ರಣಕ್ಕೆ “ಬೊಲಾರ್ಡ್‌’ ವ್ಯವಸ್ಥೆ


Team Udayavani, Aug 21, 2017, 10:11 AM IST

21-STATE-8.jpg

ಶಿವಮೊಗ್ಗ: ಸಂಚಾರ ದಟ್ಟಣೆ ನಿಯಂತ್ರಿಸುವ ಸಲುವಾಗಿ ಅಳವಡಿಸುವ “ಬೊಲಾರ್ಡ್‌’ ವ್ಯವಸ್ಥೆ ಇದೇ ಮೊದಲ ಬಾರಿಗೆ ಮಲೆನಾಡು ನಗರಿ ಶಿವಮೊಗ್ಗಕ್ಕೆ ಬಂದಿದೆ.

ಮುಂದುವರಿದ ದೇಶ ಮತ್ತು ದೇಶದ ಮೆಟ್ರೋ ಸಿಟಿಗಳಲ್ಲಿ ಮಾತ್ರ ಕಾಣುವ ಈ ಬೊಲಾರ್ಡ್‌ ವ್ಯವಸ್ಥೆ ಇದೀಗ ರಾಜ್ಯದಲ್ಲಿಯೇ ಮೊದಲ ಬಾರಿಗೆ ಶಿವಮೊಗ್ಗದಲ್ಲಿ ಅಳವಡಿಸಲಾಗುತ್ತಿದ್ದು, ನಗರದ ವಾಣಿಜ್ಯ ವ್ಯವಹಾರಗಳ ಹೃದಯ ಭಾಗ ಎನಿಸಿರುವ ಗಾಂಧಿ ಬಜಾರ್‌ನಲ್ಲಿ “ಬೊಲಾರ್ಡ್‌’ ಬಳಕೆಗೆ ಜಿಲ್ಲಾ ಪೊಲೀಸ್‌ ಇಲಾಖೆ ಮುಂದಾಗಿದೆ. ಆ. 21ರಂದು ಇದರ ಉದ್ಘಾಟನೆ ನೆರವೇರಲಿದೆ. ಈ ಬೊಲಾರ್ಡ್‌ ವ್ಯವಸ್ಥೆ ಅಳವಡಿಸಿದರೆ ದ್ವಿಚಕ್ರ ವಾಹನದ ಹೊರತಾಗಿ ಬೇರಾವುದೇ ವಾಹನ ಸಂಚಾರ ಆ ಸ್ಥಳದಲ್ಲಿ ಸಾಧ್ಯವಿಲ್ಲ. ಪದೇಪದೆ ಸರಿಸಬೇಕಾದ ಬ್ಯಾರಿಕೇಡ್‌ನ‌ ಬದಲಿಗೆ ಶಾಶ್ವತವಾಗಿ
ರಸ್ತೆಯಲ್ಲಿ ಅಳವಡಿಸುವ ವ್ಯವಸ್ಥೆಯೇ ಈ ಬೊಲಾರ್ಡ್‌. ನೆಲದೊಳಗೆ ಅಳವಡಿಸುವ ಬೊಲಾರ್ಡ್‌ ಕಂಬಗಳನ್ನು ಬೇಕೆನಿಸಿದಾಗ ಮೇಲಕ್ಕೆತ್ತಿ ಬೀಗ ಹಾಕಿದರೆ ಬ್ಯಾರಿಕೇಡ್‌ ರೀತಿಯಲ್ಲಿ ಕೆಲಸ ಮಾಡುತ್ತದೆ.

ಇಲ್ಲಿನ ಗಾಂಧಿ ಬಜಾರ್‌ ಪ್ರವೇಶದಲ್ಲೇ 3 ಸೆಟ್‌ ಬೊಲಾರ್ಡ್‌ ಅಳವಡಿಸಲಾಗಿದೆ. ಪೊಲೀಸ್‌ ಇಲಾಖೆಯ ವಿಶೇಷ ಆಸಕ್ತಿಯಿಂದ ಇದು ಅಸ್ತಿತ್ವಕ್ಕೆ ಬಂದಿದೆ. ಗಣೇಶ ಮೂರ್ತಿಯ ವಿಸರ್ಜನಾ ಪೂರ್ವ ಮೆರವಣಿಗೆ ಸೇರಿ ಯಾವುದೇ ವಿಶೇಷ ಹಾಗೂ ಸಾಮಾನ್ಯ ಸಂದರ್ಭದಲ್ಲಿ ಬೊಲಾರ್ಡ್‌ ಬಳಸಲು ನಿರ್ಧರಿಸಲಾಗಿದೆ. ಸ್ಮಾರ್ಟ್‌ ಸಿಟಿ ಯೋಜನೆಯಡಿ ಗಾಂಧಿ ಬಜಾರ್‌ ರಸ್ತೆಯ ಅಭಿವೃದ್ಧಿ ಸೇರಿರುವುದರಿಂದ ಮುಂದಿನ ದಿನಗಳಲ್ಲಿ ವಾಹನ ದಟ್ಟಣೆ ನಿಯಂತ್ರಣಕ್ಕೆ ಇದರಿಂದ ಸಹಾಯವಾಗಲಿದೆ. ಬೊಲಾರ್ಡ್‌ ಅಳವಡಿಕೆಯಿಂದ ಪೊಲೀಸ್‌ ಹಾಗೂ ಗೃಹ ರಕ್ಷಕ ದಳದ ಸಿಬ್ಬಂದಿ ನಿಯೋಜನೆ ತಪ್ಪಲಿದೆ.

ಏನಿದು ಬೊಲಾರ್ಡ್‌?: ಬೊಲಾರ್ಡ್‌  ಎಂಬುದು ವಾಹನ ಸಂಚಾರ ನಿಯಂತ್ರಣಕ್ಕೆ ಬಳಸುವ ಸಾಧನವಾಗಿದ್ದು, ವಿಶೇಷವಾದ ಕಬ್ಬಿಣ ಅಥವಾ ಉಕ್ಕಿನಿಂದ ತಯಾರಿಸಲಾಗಿರುತ್ತದೆ. ಪ್ರಸ್ತುತ ಮುಂದುವರಿದ ದೇಶ ಹಾಗೂ ಭಾರತದ ಮೆಟ್ರೋ ನಗರಗಳಲ್ಲಿ ಇದನ್ನು ಬಳಸಲಾಗುತ್ತಿದ್ದು ಉತ್ತಮ ಫಲಿತಾಂಶ ಲಭಿಸಿದೆ. ನಾಲ್ಕರಿಂದ ಐದು ಅಡಿ ಉದ್ದ ಹಾಗೂ ದಪ್ಪವಾದ ಕಬ್ಬಿಣದ ಪಟ್ಟಿಯ (ಬೊಲಾರ್ಡ್‌) ಸೆಟ್‌ನ್ನು ರಸ್ತೆಯಲ್ಲಿ ಶಾಶ್ವತವಾಗಿ
ಹುಗಿಯಲಾಗುತ್ತದೆ. ಅಗತ್ಯಕ್ಕನುಗುಣವಾಗಿ ಬೊಲಾರ್ಡ್‌ನ್ನು ಮೇಲೆತ್ತಿ ಅದಕ್ಕೆ ಬೀಗ ಹಾಕಿದರೆ ಮುಗಿಯಿತು. ಪದೇಪದೆ ಕಬ್ಬಿಣದ ಬ್ಯಾರಿಕೇಡ್‌ ಇಡುವುದು ತಪ್ಪುತ್ತದೆ. ಪ್ರಸ್ತುತ ಶಿವಮೊಗ್ಗದ ಗಾಂಧಿ ಬಜಾರ್‌ನಲ್ಲಿ ಅಳವಡಿಸಲಾಗಿರುವ ಬೊಲಾರ್ಡ್‌ ನೆಲಮಟ್ಟದಿಂದ 3 ಅಡಿ ಎತ್ತರದಲ್ಲಿದ್ದು ಪ್ರತಿ ಎರಡು  ಕಂಬದ ನಡುವಿನ ಅಂತರ 3.75 ಅಡಿ ಇದೆ. ಇದರಿಂದಾಗಿ ದ್ವಿಚಕ್ರ ಹೊರತುಪಡಿಸಿ ಆಟೋ ಸೇರಿ ಯಾವುದೇ ವಾಹನ ಗಾಂಧಿ ಬಜಾರ್‌ನ ಮುಖ್ಯ ರಸ್ತೆಯಿಂದ ಪ್ರವೇಶಿಸುವುದು ಸಾಧ್ಯವಾಗದು. ರಾತ್ರಿ ವೇಳೆ ವಾಹನ ಸವಾರರಿಗೆ ಸ್ಪಷ್ಟವಾಗಿ ಗೋಚರಿಸುವಂತೆ ಬೊಲಾರ್ಡ್‌ಗೆ ರೇಡಿಯಂ ಸ್ಟಿಕ್ಕರ್‌ ಅಂಟಿಸಲಾಗಿದೆ.

ಮೆಕ್ಯಾನಿಕಲ್‌ ಎಂಜಿನಿಯರ್‌ ಆಗಿರುವ ಶಿವಮೊಗ್ಗದ ಉದ್ಯಮಿ ವೆಂಕಟೇಶ್‌ ಮತ್ತು ತಂಡದವರು ಇದನ್ನು ಸಿದ್ಧಪಡಿಸಿದ್ದಾರೆ. ಮಾರುಕಟ್ಟೆಯಲ್ಲಿ ಉತ್ತಮ ಗುಣಮಟ್ಟದ ಬೊಲಾರ್ಡ್‌ನ ಬೆಲೆ ಸುಮಾರು 1 ಲಕ್ಷ ರೂ. ತನಕ ಇದೆ. ಆದರೆ ಶಿವಮೊಗ್ಗದ ಉದ್ಯಮಿ ಮೇಕ್‌ ಇನ್‌ ಇಂಡಿಯಾ ಯೋಜನೆಯಡಿ
23 ಸಾವಿರ ರೂ.ಗೆ ಉತ್ತಮ ಗುಣಮಟ್ಟದ ಬೊಲಾರ್ಡ್‌ ತಯಾರಿಸಿಕೊಟ್ಟಿದ್ದಾರೆ. 

ಗೋಪಾಲ್‌ ಯಡಗೆರೆ

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.