ನರಸಿಂಹ ರಾವ್ ಮಾಧ್ಯಮ ಸಲಹೆಗಾರ ಪಿ ವಿ ಆರ್ ಕೆ ಪ್ರಸಾದ್ ನಿಧನ
Team Udayavani, Aug 21, 2017, 10:46 AM IST
ಹೈದರಾಬಾದ್ : ದಿವಂಗತ ಪ್ರಧಾನಿ ಪಿ ವಿ ನರಸಿಂಹ ರಾವ್ ಅವರಿಗೆ ಮಾಧ್ಯಮ ಸಲಹೆಗಾರರಾಗಿದ್ದ ಹಾಗೂ ಹೆಚ್ಚುವರಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಪಿ ವಿ ಆರ್ ಕೆ ಪ್ರಸಾದ್ (77) ಅವರಿಂದು ನಸುಕಿನ ವೇಳೆ ಇಲ್ಲಿನ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆಯಲ್ಲಿ ಹೃತ್ಕ್ರಿಯೆ ನಿಂತು ನಿಧನ ಹೊಂದಿದರು.
ಆಂಧ್ರ ಪ್ರದೇಶ ಕೇಡರ್ನ ಐಎಎಸ್ ಅಧಿಕಾರಿಯಾಗಿದ್ದ ಪ್ರಸಾದ್ ಅವರು ತಿರುಮಲ ತಿರುಪತಿ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿಯಾಗಿ, ವಿಶಾಖಪಟ್ಟಣ ಬಂದರು ಮಂಡಳಿಯ ಅಧ್ಯಕ್ಷರಾಗಿ ಮಾತ್ರವಲ್ಲದೆ ಹಲವಾರು ಹೊಣೆಗಾರಿಕೆಗಳನ್ನು ನಿಭಾಯಿಸಿದ್ದರು.
ಮಾಜಿ ಪ್ರಧಾನಿ ದಿವಂಗತ ನರಸಿಂಹ ರಾವ್ ಅವರಿಗೆ ನಿಕಟರಾಗಿದ್ದ ಪ್ರಸಾದ್ ಅವರು ರಾವ್ ಅವರ ಮಾಧ್ಯಮ ಸಲಹೆಗಾರರಾಗಿಯೂ ದುಡಿದಿದ್ದರು. ಅವರು ಪತ್ನಿ, ಓರ್ವ ಪುತ್ರಿ, ಪತ್ರನನ್ನು ಅಗಲಿದ್ದಾರೆ. ಅವರ ಅಂತ್ಯಕ್ರಿಯೆ ಇಂದಿಲ್ಲಿ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್ ಶಾ
1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್ಡಿಎ ಗ್ಯಾರಂಟಿ
Election; ಮೊಹಬ್ಬತ್ ಕೀ ದುಕಾನ್ನಲ್ಲಿ ಫೇಕ್ ವೀಡಿಯೋಗಳು ಮಾರಾಟ: ಮೋದಿ
Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್ ಗರಂ
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ