ಭಾನುವಾರ ಇಂದಿರಾ ಕ್ಯಾಂಟೀನ್‌ಗೆ ಬಂದವರೇ ಕಡಿಮೆ


Team Udayavani, Aug 21, 2017, 11:27 AM IST

canteen-kadime.jpg

ಬೆಂಗಳೂರು: ಇತರ ದಿನಗಳಿಗೆ ಹೋಲಿಸಿದರೆ ಭಾನುವಾರ ಇಂದಿರಾ ಕ್ಯಾಂಟೀನ್‌ನಲ್ಲಿ ಜನಸಂಧಣಿ ಕಡಿಮೆಯಾಗಿತ್ತು. ಕೇಂದ್ರ ಭಾಗದ ಕೆಲ ಕ್ಯಾಂಟೀನ್‌ಗಳ ಹೊರತು, ಉಳಿದೆಡೆ ಜನರ ಸಾಲು ಕಾಣಲಿಲ್ಲ. ಇಂದಿರಾ ಕ್ಯಾಂಟೀನ್‌ ಆರಂಭವಾದ ದಿನದಿಂದಲೂ ಕ್ಯಾಂಟೀನ್‌ಗಳ ಬಳಿ ಭಾರಿ ಜನಜಂಗುಳಿ ಇದ್ದ ಕಾರಣ ಕೆಲವರು ಆಹಾರ ದೊರೆಯದೆ ಬೇಸರದಿಂದ ಹಿಂದಿರುಗಿದ್ದರು. ಆದರೆ, ಭಾನುವಾರ ಆ ಸ್ಥಿತಿ ಕಾಣಲಿಲ್ಲ.

ಇಂದಿರಾ ಕ್ಯಾಂಟೀನ್‌ ಯೋಜನೆಗೆ ನಗರದ ಕೇಂದ್ರ ಭಾಗದಲ್ಲಿನ ವಾರ್ಡ್‌ಗಳಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಅತಿ ಹೆಚ್ಚು ಜನರು ಭೇಟಿ ನೀಡುವ ಕ್ಯಾಂಟೀನ್‌ಗಳ ಮಾಹಿತಿಯನ್ನು ವಲಯ ಜಂಟಿ ಆಯುಕ್ತರಿಂದ ಪಡೆದು ವರದಿ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. 

ಜನರ ಅಸಮಾಧಾನ: ಇಂದಿರಾ ಕ್ಯಾಂಟೀನ್‌ಗಳಲ್ಲಿ ಆಹಾರ ಕೊರತೆಯಾಗುತ್ತಿರುವ ಕುರಿತು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದರೊಂದಿಗೆ ಗಂಟೆಗಟ್ಟಲೇ ಕಾಯುವುದರ ಕುರಿತೂ ದೂರಿದ್ದಾರೆ. ಪ್ರತಿ ಕ್ಯಾಂಟೀನ್‌ನಲ್ಲಿ ಒಂದು ಹೊತ್ತಿಗೆ 500 ಜನರಿಗೆ ಆಹಾರ ವಿತರಿಸಲಾಗುತ್ತಿದೆ. ಆದರೆ, ಪ್ರತಿ ಕ್ಯಾಂಟೀನ್‌ಗಳಿಗೆ 200 ಊಟದ ತಟ್ಟೆಗಳನ್ನು ಮಾತ್ರ ನೀಡಿರುವುದರಿಂದ ಶೀಘ್ರ ಸಾರ್ವಜನಿಕರಿಗೆ ಆಹಾರ ಪೂರೈಕೆ ಮಾಡಲಾಗುತ್ತಿಲ್ಲ. ತಟ್ಟೆಗಳನ್ನು ಸ್ವತ್ಛಗೊಳಿಸಿ ತರುವುದರಲ್ಲಿ ಸಾರ್ವಜನಿಕರು ಗಲಾಟೆಗೆ ಮುಂದಾಗುತ್ತಿದ್ದಾರೆ ಎಂಬುದು ಕ್ಯಾಂಟೀನ್‌ ಸಿಬ್ಬಂದಿಯ ಅಭಿಪ್ರಾಯ. 

ಉಪಹಾರ ಸವಿದ ಜಮೀರ್‌
ನಗರದ ಗುಡ್ಡದಹಳ್ಳಿಯಲ್ಲಿರುವ ಇಂದಿರಾ ಕ್ಯಾಂಟೀನ್‌ಗೆ ಭಾನುವಾರ ಬೆಳಗ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಶಾಸಕ ಜಮೀರ್‌ ಅಹಮದ್‌ ಖಾನ್‌, ಅಲ್ಲಿಯೇ ಬೆಂಬಲಿಗರೊಂದಿಗೆ ಉಪ್ಪಿಟ್ಟು ಹಾಗೂ ಪಲಾವ್‌ ಸೇವಿಸಿದರು. 

ಇದೇ ವೇಳೆ ಕ್ಯಾಂಟೀನ್‌ನಲ್ಲಿ ದೊರೆಯುವ ಆಹಾರದ ಗುಣಮಟ್ಟ ಹಾಗೂ ಸ್ವತ್ಛತೆ ಕುರಿತು ಸಾರ್ವಜನಿಕರಿಂದ ಮಾಹಿತಿ ಪಡೆದುಕೊಂಡರು. ನಂತರ ಮಾತನಾಡಿದ ಅವರು, ಬಹುತೇಕರು ಕರೆ ಮಾಡಿ ಕ್ಯಾಂಟೀನ್‌ ನಿರ್ಮಿಸಿ ಉತ್ತಮ ಕೆಲಸ ಮಾಡಿದ್ದೀರಾ ಎಂದು ಅಭಿನಂದಿಸಿದ್ದಾರೆ ಇದನ್ನು ಸರ್ಕಾರ ಮಾಡಿದ್ದು ಎಂಬುದು ಅವರಿಗೆ ಗೊತ್ತಿಲ್ಲ. ಶಾಸಕರೇ ಮಾಡಿದ್ದಾರೆ ಎಂದು ಅವರು ಭಾವಿಸಿದ್ದಾರೆ.ಇದು ಸರ್ಕಾರದ ಕೆಲಸ ಎಂಬುದನ್ನು ತಿಳಿಸಿದ್ದೇನೆ ಎಂದರು. 

ಬಡವರಿಗೆ ಆಹಾರ ನೀಡಲು ಯೋಜನೆ ಜಾರಿಗೊಳಿಸಿರುವುದು ಉತ್ತಮ ಕಾರ್ಯ. 5 ರೂ.ಗಳಿಗೆ ತಿಂಡಿ ಕೊಡುತ್ತಿದ್ದು, ಅದರ ರುಚಿ ಹೇಗಿದೆ ಎಂಬುದನ್ನು ನೋಡಲು ಕ್ಯಾಂಟೀನ್‌ಗೆ ಭೇಟಿ ನೀಡಿದ್ದೇನೆ. ಕ್ಯಾಂಟೀನ್‌ಗೆ ಪ್ರತಿಕ್ರಿಯೆ ಹೇಗಿದೆ ಎಂದರೆ ಸ್ಪಾರ್‌ ಹೋಟೆಲ್‌ಗ‌ಳಲ್ಲಿ ಟೇಬಲ್‌ ಬುಕ್‌ ಮಾಡುವ ರೀತಿ ಇಲ್ಲಿ ಮೊದಲೇ ಟೋಕನ್‌ ಪಡೆಯಬೇಕಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು. 

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.