ಜನ ಮನಸು ಮಾಡಿದರೆ ಅಭಿವೃದ್ಧಿ ಪರ ಸರ್ಕಾರ


Team Udayavani, Aug 21, 2017, 11:27 AM IST

ananthkumar.jpg

ಬೆಂಗಳೂರು: ದೇಶಾದ್ಯಂತ ನರೇಂದ್ರ ಮೋದಿ ಮತ್ತು ಅಮಿತ್‌ ಶಾ ಜೋಡಿ ಉತ್ತಮ ಆಡಳಿತ ನೀಡುತ್ತಿದ್ದು, ಕರ್ನಾಟಕ ಜನತೆ ಮನಸು ಮಾಡಿದರೆ ಇಲ್ಲಿಯೂ ಅದು ಮುಂದುವರೆಯಲಿದೆ ಎಂದು ಕೇಂದ್ರ ಸಚಿವ ಅನಂತಕುಮಾರ್‌ ಹೇಳಿದರು.

ಕರ್ನಾಟಕ ಆರ್ಯ ವೈಶ್ಯ ಮಹಾಸಭಾ ನಗರ ಫ್ರೀಡಂ ಪಾರ್ಕ್‌ನಲ್ಲಿ ಆಯೋಜಿಸಿದ್ದ ಆರ್ಯವೈಶ್ಯ ಸಮಾವೇಶ ಉದ್ಘಾಟನೆ ನೆರವೇರಿಸಿ  ಮಾತನಾಡಿದ ಅವರು, ದೇಶದ ಬಹುತೇಕ ಕಡೆಗಳಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಶಾ ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜೋಡಿ ದಿಗ್ವಿಜಯ ಸಾಧಿಸಿದೆ. ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡಲು ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದು, ಯಶಸ್ವಿಯಾಗಿದೆ ಎಂದು ಹೇಳಿದರು.

ದೇಶದ ಪ್ರಗತಿ ಹಾಗೂ ಒಳ್ಳೆಯ ಅಡಳಿತಕ್ಕೂ ಬದ್ಧ, ಸಮಯ ಬಂದರೆ ಸರ್ಜಿಕಲ್‌ ಸ್ಟ್ರೈಕಿಗೂ ಸಿದ್ಧ ಎಂಬುದನ್ನು ಈಗಾಗಲೇ ಸಾಧಿಸಿ ತೋರಿಸಿದ್ದಾರೆ. ರಾಜ್ಯದ ಜನತೆ ಆಶೀರ್ವಾದ ಮಾಡಿದರೆ ಇಲ್ಲಿಯೂ ಒಳ್ಳೆಯ ಆಡಳಿತ ಬರಲಿದೆ ಎಂದರು. ಮಹಾತ್ಮ ಗಾಂಧೀಜಿಯವರ ಮೂಲಕ ಇಡೀ ಭಾರತವನ್ನೇ ಸ್ವಾಭಿಮಾನಿ ಮಾಡಿದ ಸಮಾಜ ಆರ್ಯವೈಶ್ಯ ಸಮಾಜವಾಗಿದೆ.

ದೇಶವನ್ನು ಶ್ರೀಮಂತವನ್ನಾಗಿಸಿದ ಸಮಾಜವೂ ಕೂಡ ಇದಾಗಿದ್ದು, ಆರ್ಯವೈಶ್ಯ ಸಮಾಜದ ದಿಗ್ಗಜರು, ಸ್ವಾತಂತ್ರ್ಯಹೋರಾಟಗಾರರು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನಗೈದವರ ಕುರಿತು ನೂರು ಪುಸ್ತಕಗಳನ್ನು ಹೊರತಂದು ಸಮಾಜದ ಮುಂದಿನ ಪೀಳಿಗೆಯವರಿಗೆ ಕೊಡಬೇಕು. ಆರ್ಯವೈಶ್ಯ ಸಮಾಜ ಬೆಳೆದು ಬಂದ ರೀತಿ, ನಾಡಿಗೆ ಕೊಟ್ಟ ಕೊಡುಗೆಗಳನ್ನು ಯುವ ಜನರಿಗೆ ತಿಳಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದರು. 

ಇದೇ ಸಂದರ್ಭದಲ್ಲಿ ನೂತನವಾಗಿ ನಿರ್ಮಾಣಗೊಂಡು ಭಾನುವಾರ ಲೋಕಾರ್ಪಣೆಗೊಂಡ 20 ಅಂತಸ್ತುಗಳ ಆರ್ಯವೈಶ್ಯ ಮಹಾಸಭಾದ ಶತಮಾನೋತ್ಸವ ಭವನಕ್ಕೆ ಆರ್ಯವೈಶ್ಯ ಟವರ್ ಎಂದು ಸಚಿವ ಅನಂತಕುಮಾರ್‌ ನಾಮಕರಣ ಮಾಡಿದರು. ಸಭೆಯಲ್ಲಿದ್ದವರು ಚಪ್ಪಾಳೆ ತಟ್ಟುವ ಮೂಲಕ ಅದನ್ನು ಅನುಮೋದಿಸಿದರು. ಕರ್ನಾಟಕ ಆರ್ಯವೈಶ್ಯ ಮಹಾಸಭಾ ಅಧ್ಯಕ್ಷ ಆರ್‌.ಪಿ.ರವಿಶಂಕರ್‌, ಯಾವುದೇ ಸಮಾಜ ಅಭಿವೃದ್ಧಿ ಸಾಧಿಸಲು ಸಂಘಟನೆ ಬಹಳ ಮುಖ್ಯ.

ಮಹಾಸಭಾದ ಉದ್ದೇಶ ಭವನ ನಿರ್ಮಾಣ ಅಲ್ಲ. ಸಮಾಜದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುವುದೇ ಆಗಿದೆ. ಸಂಘವು 2020ರೊಳಗೆ ಆರ್ಯವೈಶ್ಯ ಸಮಾಜದಲ್ಲಿ ಸಂಪೂರ್ಣವಾಗಿ ಬಡತನ ನಿರ್ಮೂಲನೆಯಾಗಬೇಕು ಎಂದು ತೀರ್ಮಾನಿಸಿದೆ. ಸರ್ಕಾರಕ್ಕೆ ಸಾಧ್ಯವಾದರೆ ಸಹಾಯ ಮಾಡಲಿ. ಆಗದಿದ್ದರೆ, ಕಾಲು ಎಳೆಯಬಾರದು ಎಂದ ಅವರು, ಲಿಂಗಾಯತ ಮತ್ತು ವೀರಶೈವರ ನಡುವೆ ಜಾತಿ ಒಡೆಯುವ ಕೆಲಸವಾಗುತ್ತಿದೆ. ನಮ್ಮ ಸಮಾಜದಲ್ಲಿ ಈ ಕೆಲಸಕ್ಕೆ ಅವಕಾಶ ನೀಡಬಾರದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ವಿಧಾನಪರಿಷತ್‌ ಸಭಾಪತಿ ಡಿ.ಎಚ್‌.ಶಂಕರಮೂರ್ತಿ ಕಾರ್ಯಕ್ರಮ ಉದ್ಘಾಟಿಸಿದರು. ಜಿಎಂಆರ್‌ ಗ್ರೂಪ್‌ ಅಧ್ಯಕ್ಷ ಜಿ.ಎಂ.ರಾವ್‌, ಬ್ರಿಗೇಡ್‌ ಗ್ರೂಪ್‌ ಸಿಎಂಡಿ ಎಂ.ಆರ್‌.ಜಯಶಂಕರ್‌ ಸೇರಿದಂತೆ ತಮಿಳುನಾಡು, ಕೇರಳ, ತೆಲಂಗಾಣ, ಮಹಾರಾಷ್ಟ್ರಗಳ ಆರ್ಯವೈಶ್ಯ ಸಂಘದ ಮುಖಂಡರು ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.