ರೇಣುಕಾಚಾರ್ಯ ಕಾಲ್ಪನಿಕ ವ್ಯಕ್ತಿ
Team Udayavani, Aug 21, 2017, 11:51 AM IST
ಬಾಗಲಕೋಟೆ: ವೀರಶೈವ ಲಿಂಗಾಯತ ಧರ್ಮ ಸ್ಥಾಪಕರು ಶ್ರೀ ರೇಣುಕಾಚಾರ್ಯರು ಎಂದು ಪಂಚ ಪೀಠಾಧೀಶರು ಹೇಳಿಕೊಂಡು ಬರುತ್ತಿದ್ದಾರೆ. ಆದರೆ, ರೇಣುಕಾಚಾರ್ಯರು ಒಬ್ಬ ಕಾಲ್ಪನಿಕ ವ್ಯಕ್ತಿ ಎಂದು ಬಸವಧರ್ಮ ಪೀಠಾಧ್ಯಕ್ಷೆ ಜಗದ್ಗುರು ಶ್ರೀ ಮಾತೆ ಮಹಾದೇವಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವೀರಶೈವ ಲಿಂಗಾಯತ ಧರ್ಮಕ್ಕೆ ತಳಬುಡ ಇಲ್ಲ. ವೀರಶೈವ-ಲಿಂಗಾಯತ ಪ್ರತ್ಯೇಕ ಧರ್ಮ ವಿರೋಧಿಸುವವರಿಗೆ ಅಧ್ಯಯನದ ಕೊರತೆ ಇದೆ. ಸಮಗ್ರ ಅಧ್ಯಯನ ಮಾಡಿದವರಿಗೆ ಲಿಂಗಾಯತ ಧರ್ಮದ ಬಗ್ಗೆ ಸ್ಪಷ್ಟ ಉತ್ತರ ಸಿಗುತ್ತದೆ. ಲಿಂಗಾಯತ ಧರ್ಮ ಬೇಡಿಕೆಗೆ ಬಿಜೆಪಿ ಮತ್ತು ಆರ್ ಎಸ್ಎಸ್ ಮುಖಂಡರು ಬೆಂಬಲಿಸಬಾರದು ಮತ್ತು ಆ ಹೇಳಿಕೆಗಳಿಂದ ದೂರ ಇರಬೇಕೆಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ ಭಾಗವತ್ ಹೇಳಿರುವುದನ್ನು ಪತ್ರಿಕೆಗಳಲ್ಲಿ ನೋಡಿದ್ದೇನೆ. ಆದರೆ, ಪ್ರತ್ಯೇಕ ಧರ್ಮಕ್ಕಾಗಿ ಮೋಹನ ಭಾಗವತ್ ಅವರೂ ಬೆಂಬಲಿಸಬೇಕು ಎಂದು ಒತ್ತಾಯಿಸಿದರು.
ತುಮಕೂರಿನ ಸಿದ್ಧಗಂಗಾ ಶ್ರೀಗಳು, ಲಿಂಗಾಯತ ಪ್ರತ್ಯೇಕ ಧರ್ಮದ ವಿಷಯದಲ್ಲಿ ಯಾವುದೇ ಹೇಳಿಕೆ ಕೊಟ್ಟಿಲ್ಲ. ಒಂದು ಕಾರ್ಯಕ್ರಮದಲ್ಲಿ ತಾವು ವೀರಶೈವ ಮಠಗಳ ಪರಂಪರೆಯವರು ಎಂದು ಹೇಳಿಕೊಳ್ಳುವ ಮೂಲಕ, ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ತಾವು ಒಪ್ಪುವುದಿಲ್ಲ ಎಂಬುದನ್ನು ಪರೋಕ್ಷವಾಗಿ ಹೇಳಿದ್ದಾರೆ. ಸಿದ್ಧಗಂಗಾ ಶ್ರೀಗಳಿಗೂ ಅಧ್ಯಯನದ ಕೊರತೆ ಇದೆ. ಯಡಿಯೂರಪ್ಪ ಅವರು ಪ್ರತ್ಯೇಕ ಧರ್ಮಕ್ಕೆ ಈ ಹಿಂದೆ ಒಪ್ಪಿಕೊಂಡಿದ್ದರು. ಈಗ ಬಿಜೆಪಿ ಹೈಕಮಾಂಡ್ ತಾಕೀತು ಮಾಡಿದ ಹಿನ್ನೆಲೆಯಲ್ಲಿ ಅವರು ಸುಮ್ಮನಾಗಿದ್ದಾರೆ. ಮೇಲಾಗಿ ಅವರಿಗೆ ಅಧ್ಯಯನ, ಆತ್ಮವಿಶ್ವಾಸದ ಕೊರತೆ ಇದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
MUST WATCH
ಹೊಸ ಸೇರ್ಪಡೆ
Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
WhatsApp ಚಾಟ್ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ
LPG Cylinder: ವಾಣಿಜ್ಯ ಎಲ್ಪಿಜಿ ಸಿಲಿಂಡರ್ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ