ಕ್ರೀಡಾ ಚಟುವಟಿಕೆಗೆ ಸೌಲಭ್ಯ ಕೊರತೆ


Team Udayavani, Aug 21, 2017, 11:56 AM IST

bidar 6.jpg

ಹುಮನಾಬಾದ: ದೈಹಿಕವಾಗಿ ಸದೃಢರಾಗಲು ಮನುಷ್ಯನಿಗೆ ಕ್ರೀಡೆಗಳು ಅವಶ್ಯ ಎಂದು ಅನೇಕರು ಹೇಳುತ್ತಾರೆ. ಆದರೆ ಇಲ್ಲಿನ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಸೂಕ್ತ ಕ್ರೀಡಾಂಗಣ ಹಾಗೂ ಸೌಲಭ್ಯಗಳ ಕೊರತೆಯಿಂದಾಗಿ ಕ್ರೀಡೆಗೆ ಗ್ರಹಣ ಹಿಡಿದಂತಾಗಿದೆ. ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ 12ನೇ ಹಣಕಾಸು ಯೋಜನೆಯಡಿ ಕೆಆರ್‌ಐಡಿಎಲ್‌ ವತಿಯಿಂದ 42.25 ಲಕ್ಷ ರೂ. ವೆಚ್ಚದಲ್ಲಿ ಮಾಣಿಕನಗರದಲ್ಲಿ ನಿರ್ಮಾಣಗೊಂಡ ಕ್ರೀಡಾಂಗಣದಲ್ಲಿ ಸೌಲಭ್ಯಗಳ ಕೊರತೆ ಇದೆ. ಇದರಿಂದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಚುನಾಯಿತ ಜನ ಪ್ರತಿನಿಧಿಗಳು, ಅಧಿಕಾರಿಗಳಿಗೆ ಹಿಡಿ ಶಾಪ ಹಾಕುವಂತಾಗಿದೆ. ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಹಿಂದುಳಿಯುವ ಬೀದರ ಜಿಲ್ಲೆಯ ವಿದ್ಯಾರ್ಥಿಗಳು ಕ್ರೀಡಾ ಕ್ಷೇತ್ರದಲ್ಲೂ ಕೊನೆ ಸ್ಥಾನದಲ್ಲಿದ್ದಾರೆ. ಕಾರಣ ಮೂಲ ಸೌಲಭ್ಯಗಳ ಕೊರತೆ ಎಂಬುದು ದೈಹಿಕ ಶಿಕ್ಷಣ ಶಿಕ್ಷಕರ ಮಾತು. ಹೋಬಳಿ, ವಲಯ, ತಾಲೂಕು, ಜಿಲ್ಲೆ, ವಿಭಾಗೀಯ ವಿವಿಧ ಕ್ರೀಡೆಗಳಲ್ಲಿ ಪಾಲ್ಗೊಳುವ ಕ್ರೀಡಾಪಟುಗಳು ರಾಜ್ಯಮಟ್ಟದ ಸ್ಪರ್ಧೆಗಳಲ್ಲಿ ಸೋಲು ಅನುಭವಿಸುವುದು ಖಚಿತ. ಕಾರಣ ಜಿಲ್ಲೆಯ ಯಾವ ತಾಲೂಕು ಕೇಂದ್ರಗಳಲ್ಲೂ ಕ್ರೀಡೆಗಳ ಪ್ರೋತ್ಸಾಹಕ್ಕೆ ಸೂಕ್ತ ವ್ಯವಸ್ಥೆ ಇಲ್ಲ. ಅಲ್ಲದೇ ಬಹುತೇಕ ಶಾಲೆಗಳಲ್ಲಿ ಆಟದ ಮೈದಾನ ಕೂಡ ಇಲ್ಲ ಎಂಬುವುದು ಶಿಕ್ಷಕರ ಮಾತು. ಈ ಹಿನ್ನೆಲೆಯಲ್ಲಿ ಕ್ರೀಡೆಗಳ ಪ್ರೋತ್ಸಾಹಕ್ಕೆ ಸರ್ಕಾರ ಚಿಂತನೆ ನಡೆಸುವ ಅವಶ್ಯಕತೆ ಇದೆ. ಸೌಕರ್ಯ ಕೊರತೆ: ಪ್ರತಿವರ್ಷ ವಲಯ ಮಟ್ಟ ಹಾಗೂ ತಾಲೂಕು ಮಟ್ಟದ ಕ್ರೀಡಾಕೊಟಗಳು ಮಾಣಿಕ ನಗರದ ಕ್ರೀಡಾಂಗಣದಲ್ಲಿ ನಡೆಯುತ್ತವೆ. ಆದರೆ ಕ್ರೀಡಾಂಗಣದಲ್ಲಿ ಶೌಚಾಲಯ, ಕುಡಿವ ನೀರಿನ ಕೊರತೆ ಇದ್ದು, ವಿದ್ಯಾರ್ಥಿನಿಯರು ಹಾಗೂ ಶಿಕ್ಷಕಿಯರು ಹೆಚ್ಚು ಸಮಸ್ಯೆ ಎದುರಿಸುವಂತಾಗಿದೆ. ವಲಯ ಮಟ್ಟದ ಕ್ರೀಡೆಗೆ ಸುಮಾರು 500, ತಾಲೂಕು ಮಟ್ಟದ ಕ್ರೀಡೆಗಳಲ್ಲಿ ಸುಮಾರು 1200ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳುತ್ತಾರೆ. ಮಳೆ ಬಂದರೆ ಮಕ್ಕಳು ನಿಲ್ಲಲೂ ಕೂಡ ಛಾವಣಿಯ ವ್ಯವಸ್ಥೆ ಇಲ್ಲಿಲ್ಲ. ಖೋ ಖೋ, ಕಬ್ಬಡಿ, ವಾಲಿಬಾಲ್‌, ಹಾಕಿ, ಫುಟ್‌ಬಾಲ್‌, ಬಾಸ್ಕೇಟ್‌ ಬಾಲ್‌, ಬ್ಯಾಟ್‌ಮೆಂಟನ್‌, ಬಾಲ್‌ ಬ್ಯಾಟಮೀಟನ್‌, ಟೇಬಲ್‌ ಟೆನ್ನಿಸ್‌, ಥ್ರೋಬಾಲ್‌, ಕುಸ್ತಿ, ಅಥ್ಲೆಟಿಕ್ಸ್‌, ಯೋಗ, ಚಕ್ರ ಎಸೆತ, ಗುಂಡು ಎಸೆತ, ಎತ್ತರ ಜಿಗಿತ, ಉದ್ದ ಜಿಗಿತ, ಓಟದ ಸ್ಪರ್ಧೆಗಳು ಇಲ್ಲಿ ನಡೆಯುತ್ತವೆ. ಆದರೆ ಕಬ್ಬಡಿ ಸ್ಪರ್ಧೆಗೆ ಸೂಕ್ತ ವ್ಯವಸ್ಥೆ ಇಲ್ಲದ ಕಾರಣ ವಿದ್ಯಾರ್ಥಿಗಳು ಗಾಯಗೊಂಡ ಘಟನೆಗಳು ನಡೆಯುತ್ತಿವೆ. ಬ್ಯಾಟ್‌ ಮೆಂಟನ್‌, ಬಾಲ್‌ ಬ್ಯಾಟಮೀಟನ್‌ ಆಟಗಳಿಗೆ ಒಳಾಂಗಣ ಕ್ರೀಡಾಂಗಣ ವ್ಯವಸ್ಥೆ ಇಲ್ಲದ ಕಾರಣ ಸೂಕ್ತ ಸೌಲಭ್ಯಗಳಿಲ್ಲದ ಖಾಸಗಿ ಗೋದಾಮಿನಲ್ಲಿ ಆಟ ಆಡಿಸುವ ಅನಿವಾರ್ಯತೆ ಶಿಕ್ಷಕರಿಗೆ ಎದುರಾಗಿದೆ. ಅಲ್ಲದೆ ಭಾಸ್ಕೇಟ್‌ ಬಾಲ್‌ ಕ್ರೀಡೆಗಂತೂ ಯಾವುದೇ ಸೌಕರ್ಯ ಇಲ್ಲದ ಕಾರಣ ಯಾವ ಶಾಲೆಯೂ ಈ ಸ್ಪರ್ಧೆಗೆ ಮುಂದಾಗುತ್ತಿಲ್ಲ. ಅನುದಾನ ಕೊರತೆ: ವಿವಿಧ ಹಂತದ ಕ್ರೀಡಾಕೂಟಗಳಿಗೆ ಶಿಕ್ಷಣ ಇಲಾಖೆ ಅಥವಾ ಸರ್ಕಾರದಿಂದ ಸೂಕ್ತ ಪ್ರಮಾಣದ ಅನುದಾನ ದೊರೆಯದ ಕಾರಣ ಶಿಕ್ಷಣ ಇಲಾಖೆ ಖಾಸಗಿ ಶಿಕ್ಷಣ ಸಂಸ್ಥೆಗಳ ಸಹಭಾಗಿತ್ವದಲ್ಲಿ ಕ್ರೀಡಾಕೂಟಗಳನ್ನು ಏರ್ಪಡಿಸುವ ಸ್ಥಿತಿ ನಿರ್ಮಾಣಗೊಂಡಿದೆ. ಇದರಿಂದ ಖಾಸಗಿ ಶಿಕ್ಷಣ ಸಂಸ್ಥೆಗಳು ಸಾವಿರಾರೂ ರೂ. ಖರ್ಚು ಮಾಡಿ ಕ್ರೀಡಾಕೂಟ ನಡೆಸಬೇಕಾದ ಅನಿವಾರ್ಯತೆ ಎದುರಾಗಿದೆ. ಶಾಲೆಗಳಿಂದ ವಸೂಲಿ ಮಾಡುವ ಕ್ರೀಡಾ ನಿಧಿ  ಹಣವನ್ನು ಕ್ರೀಡೆಗೆ ಬರುವ ಕ್ರೀಡಾಪಟು ಹಾಗೂ ಮೇಲ್ವಿಚಾರಕರಿಗೆ ನೀಡಲು ಬಳಸಲಾಗುತ್ತಿದೆ ಎಂದು ದೈಹಿಕ ಶಿಕ್ಷಕರು ತಿಳಿಸಿದ್ದು, ಕ್ರೀಡೆಗಳ ಪ್ರೋತ್ಸಾಹಕ್ಕೆ ಸರ್ಕಾರ ವಿಶೇಷ ಅನುದಾನ ನೀಡುವ ಕುರಿತು ಚಿಂತನೆ ನಡೆಸುವ ಅವಶ್ಯಕತೆ ಇದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ

ದುರ್ಯೋಧನ ಹೂಗಾರ

ಟಾಪ್ ನ್ಯೂಸ್

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.