ಹಕ್ಕುಪತ್ರಕ್ಕೆ  ಪ್ರತಿಭಟನೆ ನಡೆಸಿದ್ದು ಹಾಸ್ಯಾಸ್ಪದ: ಪ್ರಮೋದ್‌


Team Udayavani, Aug 22, 2017, 7:35 AM IST

pramod.jpg

ಕೋಟ:  94ಸಿ ಮತ್ತು  94ಸಿ.ಸಿಯಲ್ಲಿ  ಹಕ್ಕು ಪತ್ರಕ್ಕಾಗಿ ಅರ್ಜಿಸಲ್ಲಿಸಲು ಸೆ.12ರ ವರೆಗೆ  ಅವಕಾಶವಿದ್ದು, ಅರ್ಜಿ ಸಲ್ಲಿಸುವ ಅವಧಿ ಮುಗಿಯುವ ಮೊದಲೇ ಕುಂದಾಪುರ ಭಾಗದ ಕೆಲವು ರಾಜಕೀಯ ನಾಯಕರು ಪಾದಯಾತ್ರೆ ಮಾಡಿ ಪ್ರತಿಭಟನೆ ನಡೆಸಿದ್ದು ಹಾಸ್ಯಾಸ್ಪದ ಸಂಗತಿ ಎಂದು ಮೀನುಗಾರಿಕೆ, ಯುವ ಸಬಲೀಕರಣ, ಕ್ರೀಡಾ ಸಚಿವ ಪ್ರಮೋದ್‌ ಮಧ್ವರಾಜ್‌ ಹೇಳಿದರು.

ಅವರು  ಶುಕ್ರವಾರ ಮಂದಾರ್ತಿ ದುರ್ಗಾಪರಮೇಶ್ವರೀ ದೇವಸ್ಥಾನದ ಸಭಾಂಗಣದಲ್ಲಿ ನಡೆದ ಕೋಟ ಹೋಬಳಿ ಮಟ್ಟದ ಜನಸಂಪರ್ಕ ಸಭೆ ಉದ್ಘಾಟಿಸಿ ಮಾತನಾಡಿದರು.

ಕಾಂಗ್ರೆಸ್‌ ಸರಕಾರ ಆಡಳಿತಕ್ಕೆ ಬಂದ ಮೇಲೆ ಉಡುಪಿ ಜಿಲ್ಲೆಯಲ್ಲಿ 60ಸಾವಿರ ಕುಟುಂಬಕ್ಕೆ ಪಡಿತರ ಚೀಟಿ ವಿತರಿಸಿದೆ. ಇಂದು ಬಿ.ಪಿ.ಎಲ್‌.ಕಾರ್ಡ್‌ ಕೇವಲ ಪಡಿತರ ಪಡೆಯಲು ಸೀಮಿತವಾಗಿಲ್ಲ, ಆರೋಗ್ಯ ಯೋಜನೆ, ಭಾಗ್ಯಲಕ್ಷ್ಮೀ, ವಿದ್ಯುತ್‌ ಹೀಗೆ ಅನೇಕ ಸೌಲಭ್ಯಗಳಿಗೆ ಉಪಯೋಗವಾಗುತ್ತಿದೆ. ಹೀಗಾಗಿ ಹೆಚ್ಚಿನ ಷರತ್ತುಗಳನ್ನು ವಿಧಿಸದೆ ಬಿ.ಪಿ.ಎಲ್‌.ಕಾರ್ಡ್‌ಗಳನ್ನು ನೀಡಲಾಗುತ್ತಿದೆ.ರಾಜ್ಯ ಸರಕಾರ ರೈತರ ಕುರಿತು ಕಾಳಜಿಯನ್ನು ಸಾಲ ಮನ್ನಾ ಮಾಡುವುದರ ಮೂಲಕ ತೋರಿಸಿದೆ. ಅದೇ ರೀತಿ ಕೇಂದ್ರ ಸರಕಾರ ಕೂಡ ರಾಷ್ಟ್ರೀಕೃತ ಬ್ಯಾಂಕ್‌ಗಳ ಸಾಲ ಮನ್ನಾ ಮಾಡಬೇಕು ಎಂದು ಆಗ್ರಹಿಸಿದರು.

ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್‌ ಮಾತನಾಡಿ, ಜಿಲ್ಲಾಡಳಿತ ಹಾಗೂ ಜಿ.ಪಂ. ಆಶ್ರಯದಲ್ಲಿ ಉಡುಪಿ ಜಿಲ್ಲೆಯನ್ನು ತ್ಯಾಜ್ಯ ಮುಕ್ತ ಜಿಲ್ಲೆ ಮಾಡುವ ಸಂಕಲ್ಪ ಹೊಂದಿದ್ದು ಸಾರ್ವಜನಿಕರು ಇದಕ್ಕೆ ಸಹಕರಿಸಬೇಕು ಎಂದರು.
ಈ ಸಂದರ್ಭ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳನ್ನು ವಿತರಿಸಲಾಯಿತು ಹಾಗೂ ಜನರ ಸಮಸ್ಯೆಯ ಕುರಿತು ಇಲಾಖೆಯ ಅಧಿಕಾರಿಗಳ ಜತೆ  ಚರ್ಚಿಸಲಾಯಿತು.

ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ್‌ ಶೆಟ್ಟಿ, ಬ್ರಹ್ಮಾವರ ವಿಶೇಷ ತಹಶೀಲ್ದಾರ್‌ ಪ್ರದೀಪ್‌ ಕುಡೇìಕರ್‌, ಉಡುಪಿ ಜಿ.ಪಂ. ಮಾಜಿ ಸದಸ್ಯ ಶಂಕರ್‌ ಕುಂದರ್‌, ಬಿಲ್ಲಾಡಿ ಗ್ರಾ.ಪಂ. ಅಧ್ಯಕ್ಷ ನವೀನ್‌ಚಂದ್ರ ಶೆಟ್ಟಿ, ವಡ್ಡರ್ಸೆ ಗ್ರಾ.ಪಂ. ಅಧ್ಯಕ್ಷೆ ಹೇಮಾ, ಹೆಗ್ಗುಂಜೆ ಗ್ರಾ.ಪಂ. ಅಧ್ಯಕ್ಷ ಗಣೇಶ್‌ ಶೆಟ್ಟಿ, ಆವರ್ಸೆ ಗ್ರಾ.ಪಂ. ಅಧ್ಯಕ್ಷ  ಚಿತ್ತರಂಜನ್‌ ಶೆಟ್ಟಿ ಉಪಸ್ಥಿತರಿದ್ದರು. ಕಾಡೂರು ಗ್ರಾ.ಪಂ. ಪಿ.ಡಿ.ಒ. ಮಹೇಶ್‌ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

1-qeeqwew

Mizoram; ರೆಮಲ್‌ ಅಬ್ಬರಕ್ಕೆ ಕುಸಿದ ಕಲ್ಲುಕ್ವಾರಿ: 17 ಮಂದಿ ಬಲಿ

1-wewewqe

Kerala ಸುರಿದ ಧಾರಾಕಾರ ಮಳೆ: ‘ಮೇಘ ಸ್ಫೋಟ’ದ ಸಾಧ್ಯತೆ

1-raf

26 Rafale ಖರೀದಿಗೆ ನಾಳೆ ಭಾರತ, ಫ್ರಾನ್ಸ್‌ ಮಾತುಕತೆ

Dharmasthala ಮೇಳದ ಈ ಸಾಲಿನ ತಿರುಗಾಟಕ್ಕೆ ಮಂಗಳ

Dharmasthala ಮೇಳದ ಈ ಸಾಲಿನ ತಿರುಗಾಟಕ್ಕೆ ಮಂಗಳ

ಸರಕಾರಿ ಅಧಿಕಾರಿಗಳ ರಕ್ಷಣೆಗೆ ಸದಾ ಬದ್ಧ: ಕೆ. ರಘುಪತಿ ಭಟ್‌ ಭರವಸೆ

ಸರಕಾರಿ ಅಧಿಕಾರಿಗಳ ರಕ್ಷಣೆಗೆ ಸದಾ ಬದ್ಧ: ಕೆ. ರಘುಪತಿ ಭಟ್‌ ಭರವಸೆ

K. S. Eshwarappa ಪಕ್ಷ ನಿಷ್ಠರಿಗೆ ಅಮಾನತು ಶಿಕ್ಷೆ

K. S. Eshwarappa ಪಕ್ಷ ನಿಷ್ಠರಿಗೆ ಅಮಾನತು ಶಿಕ್ಷೆ

ಕೇರಳಕ್ಕೆ ವಿದ್ಯುತ್‌ ಸಾಗಾಟಕ್ಕೆ ಟವರ್‌ ನಿರ್ಮಾಣ; ಇನ್ನಾದಲ್ಲಿ ಭಾರೀ ಪ್ರತಿಭಟನೆ

ಕೇರಳಕ್ಕೆ ವಿದ್ಯುತ್‌ ಸಾಗಾಟಕ್ಕೆ ಟವರ್‌ ನಿರ್ಮಾಣ; ಇನ್ನಾದಲ್ಲಿ ಭಾರೀ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸರಕಾರಿ ಅಧಿಕಾರಿಗಳ ರಕ್ಷಣೆಗೆ ಸದಾ ಬದ್ಧ: ಕೆ. ರಘುಪತಿ ಭಟ್‌ ಭರವಸೆ

ಸರಕಾರಿ ಅಧಿಕಾರಿಗಳ ರಕ್ಷಣೆಗೆ ಸದಾ ಬದ್ಧ: ಕೆ. ರಘುಪತಿ ಭಟ್‌ ಭರವಸೆ

K. S. Eshwarappa ಪಕ್ಷ ನಿಷ್ಠರಿಗೆ ಅಮಾನತು ಶಿಕ್ಷೆ

K. S. Eshwarappa ಪಕ್ಷ ನಿಷ್ಠರಿಗೆ ಅಮಾನತು ಶಿಕ್ಷೆ

ಕೇರಳಕ್ಕೆ ವಿದ್ಯುತ್‌ ಸಾಗಾಟಕ್ಕೆ ಟವರ್‌ ನಿರ್ಮಾಣ; ಇನ್ನಾದಲ್ಲಿ ಭಾರೀ ಪ್ರತಿಭಟನೆ

ಕೇರಳಕ್ಕೆ ವಿದ್ಯುತ್‌ ಸಾಗಾಟಕ್ಕೆ ಟವರ್‌ ನಿರ್ಮಾಣ; ಇನ್ನಾದಲ್ಲಿ ಭಾರೀ ಪ್ರತಿಭಟನೆ

Udupi ಯಾಂತ್ರೀಕೃತ ಮೀನುಗಾರಿಕೆ ನಿಷೇಧ

Udupi ಯಾಂತ್ರೀಕೃತ ಮೀನುಗಾರಿಕೆ ನಿಷೇಧ

25

Bramavara: ಚೇರ್ಕಾಡಿಗೆ ಬಂದಿದ್ದ ಬೆಂಗಳೂರಿನ ಕ್ಯಾಬ್‌ ಚಾಲಕ ಸಾವು

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

1-qeeqwew

Mizoram; ರೆಮಲ್‌ ಅಬ್ಬರಕ್ಕೆ ಕುಸಿದ ಕಲ್ಲುಕ್ವಾರಿ: 17 ಮಂದಿ ಬಲಿ

1-wewewqe

Kerala ಸುರಿದ ಧಾರಾಕಾರ ಮಳೆ: ‘ಮೇಘ ಸ್ಫೋಟ’ದ ಸಾಧ್ಯತೆ

1-raf

26 Rafale ಖರೀದಿಗೆ ನಾಳೆ ಭಾರತ, ಫ್ರಾನ್ಸ್‌ ಮಾತುಕತೆ

1-wqeqewewqewqe

TMCಯ ಶಹಜಹಾನ್‌ ವಿರುದ್ಧ ಕೊಲೆ ಯತ್ನ ಕೇಸು

1-wqeqewqe

Congo;ಭಾರತದ ಮೇಜರ್‌ ರಾಧಿಕಾಗೆ ವಿಶ್ವಸಂಸ್ಥೆಯ ಉನ್ನತ ಪ್ರಶಸ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.