ಶಾಂತಿಗೆ ಸಹಕಾರ-ಅಶಾಂತಿಗೆ ಕಡಿವಾಣ


Team Udayavani, Aug 22, 2017, 10:53 AM IST

gul 4.jpg

ವಾಡಿ: ಸಾಂಪ್ರದಾಯಿಕ ಹಬ್ಬಗಳನ್ನು ಶಾಂತಿ ಮತ್ತು ಸಹೋದರತೆಯಿಂದ ಆಚರಿಸುವುದಾದರೆ ಸಹಕಾರ
ನೀಡುತ್ತೇವೆ. ಆಚರಣೆ ಎಂಬುದು ಅಶಾಂತಿಗೆ ಕಾರಣವಾಗುವಂತಿದ್ದರೆ ಕಿಡಿಗೇಡಿಗಳಿಗೆ ಕಡಿವಾಣ ಹಾಕಲು ಕಾನೂನು ಕ್ರಮಕ್ಕೆ ಮುಂದಾಗಲು ಹಿಂದೆಮುಂದೆ ನೋಡುವುದಿಲ್ಲ ಎಂದು ಚಿತ್ತಾಪುರ ಸಿಪಿಐ ಶಂಕರಗೌಡ ಪಾಟೀಲ ಎಚ್ಚರಿಕೆ ನೀಡಿದರು. ಗಣೇಶ ಚತುರ್ಥಿ ಹಾಗೂ ಬಕ್ರೀದ್‌ ಹಬ್ಬಗಳ ನಿಮಿತ್ತ ಪಟ್ಟಣದ ಪೊಲೀಸ್‌ ಠಾಣೆ ಮೈದಾನದಲ್ಲಿ ಸೋಮವಾರ ಸಂಜೆ ಏರ್ಪಡಿಸಲಾಗಿದ್ದ ಶಾಂತಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಹಬ್ಬಗಳಂದು ಕುಟುಂಬ ಸದಸ್ಯರಿಂದ ಬೇರ್ಪಟ್ಟು ಬಂದೋಬಸ್ತ್ ಮಾಡುವ ಜತೆಗೆ ಸ್ನೇಹಪೂರ್ವಕವಾಗಿ ಸಾರ್ವಜನಿಕರೊಂದಿಗೆ ಬರೆಯುತ್ತೇವೆ. ಪೊಲೀಸ್‌ ಮುಕ್ತ ಹಬ್ಬಗಳ ಆಚರಣೆಯಾದಾಗ ಮಾತ್ರ ಕೋಮು ಸೌಹಾರ್ಧತೆಗೆ ಅರ್ಥ ಬರುತ್ತದೆ ಎಂದು ಹೇಳಿದರು. ಸಾರ್ವಜನಿಕವಾಗಿ ರಸ್ತೆಗಳಲ್ಲಿ ನಿಂತು ವಾಹನಗಳನ್ನು ತಡೆದು ಹೆದರಿಸುವ ಮೂಲಕ ಚಂದಾ ವಸೂಲಿ ಮಾಡುವಂತಿಲ್ಲ. ವಿದ್ಯಾ ಬುದ್ಧಿ ಕರುಣಿಸುವ ಗಣೇಶ ಆಚರಣೆ ದಿನಗಳಲ್ಲಿ ವಿದ್ಯಾರ್ಥಿಗಳು ಶಾಲೆಗಳನ್ನು ತಪ್ಪಿಸುವುದು ತರವಲ್ಲ. ಇನ್ನೊಬ್ಬರ ಮನಸ್ಸಿಗೆ ನೋವಾಗುವ ರೀತಿಯಲ್ಲಿ ಆಚರಣೆಗಳಿರಬಾರದು. ವಿದ್ಯುತ್‌ ಅವಘಡಗಳ ಬಗ್ಗೆ ಎಚ್ಚರವಿರಲಿ. ಈಜಲು ಬಾರದವರು ಗಣೇಶ ಮೂರ್ತಿ ವಿಸರ್ಜನೆ ವೇಳೆ ನೀರಿಗಿಳಿಯಬಾರದು.
ಪಾಲಕರು ಮಕ್ಕಳ ಸುರಕ್ಷತೆ ಬಗ್ಗೆ ಕಾಳಜಿ ವಹಿಸಬೇಕು. ಕಾನೂನು ಉಲ್ಲಂಘಿಸುವ ಕೃತ್ಯಕ್ಕೆ ಕೈಹಾಕಬಾರದು ಎಂದು ವಿವರಿಸಿದರು. ಪಿಎಸ್‌ಐ ಸಂತೋಷ ರಾಠೊಡ ಮಾತನಾಡಿ, ಗಣೇಶ ಉತ್ಸವದ ವೇಳೆ ಪಟಾಕಿ ಸಿಡಿಸುವುದು ಮತ್ತು ಗುಲಾಲು ಎರೆಚುವುದನ್ನು ನಿಷೇಧಿ ಸಲಾಗಿದೆ ಎಂದು ಹೇಳಿದರು. ಮುಖಂಡರಾದ ಬಸವರಾಜ ಪಂಚಾಳ,
ಇಂದ್ರಜೀತ ಸಿಂಗೆ, ಫಿರೋಜ್‌ ಖಾನ್‌, ವೀರಣ್ಣ ಯಾರಿ, ಸಿದ್ದಣ್ಣ ಕಲಶೆಟ್ಟಿ, ಬಾಬುಮಿಯ್ನಾ, ಮಹ್ಮದ್‌ ಹುಸೇನ್‌ ರಾವೂರ ಮಾತನಾಡಿ, ಪರಸ್ಪರ ಸಹಕಾರದಿಂದ ಹಬ್ಬಗಳನ್ನು ಆಚರಿಸುತ್ತೇವೆ ಎಂದು ಭರವಸೆ ನೀಡಿದರು. ಜಾಮೀಯಾ ಮಸೀದಿ ಸಮಿತಿ ಅಧ್ಯಕ್ಷ ಮುಕುºಲ್‌ ಜಾನಿ, ಎಎಸ್‌ಐ ಬಾನುದಾಸ, ಉಪ ತಹಶೀಲ್ದಾರ ಮಲ್ಲಿಕಾರ್ಜುನ, ಜೆಸ್ಕಾಂ ಅಧಿಕಾರಿ ಶರಣಪ್ಪ ಎಸ್‌, ಪುರಸಭೆ ಸದಸ್ಯರಾದ ಶರಣು ನಾಟೀಕಾರ, ಮಹ್ಮದ್‌ ಗೌಸ್‌, ಮುಖಂಡರಾದ ರವಿ ಕಾರಬಾರಿ, ಸಿದ್ದು ಪಂಚಾಳ, ಶ್ರವಣಕುಮಾರ ಮೌಸಲಗಿ, ರವಿ ಬಡಿಗೇರ, ಹಣಮಂತ ಹೇರೂರ, ಸತೀಶ ಭಟ್ಟರ್ಕಿ, ಜಗತಸಿಂಗ ರಾಠೊಡ, ಆನಂದ ಇಂಗಳಗಿ, ಬಾಬಾ ಖಾನ್‌, ಬಸವರಾಜ ಕೇಶ್ವಾರ, ಸಾಯಬಣ್ಣ ಜಾಲಗಾರ, ಹಣಮಂತ ಚವ್ಹಾಣ, ನಾಗೇಂದ್ರ ಜೈಗಂಗಾ, ಪೇದೆ ದತ್ತು ಜಾನೆ, ದೊಡ್ಡಪ್ಪ, ಬಸಲಿಂಗಪ್ಪ ಸೇರಿದಂತೆ ನೂರಾರು ಜನ ಪಾಲ್ಗೊಂಡಿದ್ದರು. ಕಸಾಪ ತಾಲೂಕು ಗೌರವ ಕಾರ್ಯದರ್ಶಿ ಸಿದ್ದಲಿಂಗ ಬಾಳಿ ನಿರೂಪಿಸಿ, ವಂದಿಸಿದರು.

ಟಾಪ್ ನ್ಯೂಸ್

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.