ವೀರಶೈವ-ಲಿಂಗಾಯತ ಗೊಂದಲ ಬೇಡ : ಪಾಟೀಲ


Team Udayavani, Aug 22, 2017, 12:45 PM IST

bid 9.jpg

ಬಸವಕಲ್ಯಾಣ: ವೀರಶೈವ ಹಾಗೂ ಲಿಂಗಾಯತ ಎನ್ನುವುದು ಬೇರೆ ಬೇರೆಯಲ್ಲ. ಈ ಬಗ್ಗೆ ಸಮಾಜದಲ್ಲಿ ಗೊಂದಲ ಸೃಷ್ಟಿ ಮಾಡುವುದು ಬೇಡ ಎಂದು ಬಿಜೆಪಿ ಉಪಾಧ್ಯಕ್ಷ ಸುನೀಲ ಪಾಟೀಲ ಹೇಳಿದರು. ನಗರದ ಗವಿಮಠದಲ್ಲಿ ಶ್ರಾವಣ ಮಾಸದ ನಿಮಿತ್ತ ಶ್ರೀ ಜಗದ್ಗುರು ಘನಲಿಂಗ ರುದ್ರಮುನಿ ಶಿವಾಚಾರ್ಯ ಗವಿಮಠ ಟ್ರಸ್ಟ್‌ ಹಾಗೂ ಶ್ರೀಮದ್ವೀರಶೈವ ಸದ್ಬೋಧನ ಸಂಸ್ಥೆ ತಾಲೂಕು ಘಟಕದ ಸಹಯೋಗದಲ್ಲಿ ಆಯೋಜಿಸಿದ್ದ ಸಿದ್ಧಾಂತ ಶಿಖಾಮಣಿ ನಿತ್ಯ ಪಠಣ ಹಾಗೂ
ಉಪನ್ಯಾಸ ಮಾಲೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅಖೀಲ ಭಾರತ ವೀರಶೈವ ಮಹಾಸಭೆಗೆ ಶ್ರೀ ಭೀಮಣ್ಣ ಖಂಡ್ರೆ ಅವರು ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ವೀರಶೈವ, ಲಿಂಗಾಯತದ ಬಗ್ಗೆ ಸಮಾಜದಲ್ಲಿರುವ ಗೊಂದಲ ನಿವಾರಿಸುವ ಪ್ರಯತ್ನ ನಡೆದಿತ್ತು. ಅಂದು ಕೂಡಲ ಸಂಗಮದಲ್ಲಿ ಸಮಾವೇಶ ಆಯೋಜಿಸಿ ಪಂಚಾಚಾರ್ಯರ ಪರಂಪರೆ ಮತ್ತು ವಿರಕ್ತ ಪರಂಪರೆ ಮಠಾಧಿಧೀಶರನ್ನು ಒಂದೇ ವೇದಿಕೆಗೆ ಆಹ್ವಾನಿಸಿಸಲಾಗಿತ್ತು ಎಂದರು. ಡಾ| ಶಿವಲೀಲಾ ಶಾಂತಲಿಂಗ ಮಠಪತಿ ಮಾತನಾಡಿ, ವೀರಶೈವ ಲಿಂಗಾಯತ ಧರ್ಮ ಸಿಂಧೂ ನಾಗರಿಕತೆಯಷ್ಟೆ ಪ್ರಾಚೀನ. ಇತಿಹಾಸ ತಜ್ಞ ಸರ್‌ ಜಾನ್‌ ಮಾರ್ಷಲ್‌ ಅವರು ಈ ನಾಗರಿಕತೆಯ ನೆಲೆಗಳಲ್ಲಿ ಅನೇಕ ಚಿಕ್ಕ ಲಿಂಗಗಳನ್ನು ಶೋಧಿಸಿ ಪ್ರಪಂಚಕ್ಕೆ ಪರಿಚಯಿಸಿದ್ದು ಸಾಕ್ಷಿಯಾಗಿದೆ. ಶಿವಾಗಮಗಳು ವೀರಶೈವ ಲಿಂಗಾಯತ ಸಾಹಿತ್ಯವಾಗಿದ್ದು ಇವುಗಳ ಅಧ್ಯಯನದಿಂದ ಸತ್ಯ ಅರಿಯಲು ಸಾಧ್ಯವಿದೆ ಎಂದರು. ಸಾನ್ನಿಧ್ಯ ವಹಿಸಿದ್ದ ಶ್ರೀ ಅಭೀನವ ಘನಲಿಂಗ ರುದ್ರಮುನಿ ಶಿವಾಚಾರ್ಯರು ಆಶೀರ್ವಚನ ನೀಡಿದರು. ಪ್ರೌಢ ಶಾಲೆ ಮುಖ್ಯಗುರು ವಿಶ್ವನಾಥ ಬಿರಾದಾರ ಮಾತನಾಡಿದರು. ದಯಾನಂದ ಶೀಲವಂತ ಪ್ರಾಸ್ತಾವಿಕ ಮಾತನಾಡಿದರು. ಸಂಸ್ಥೆ ಅಧ್ಯಕ್ಷ ಬಸವಂತಪ್ಪಾ ಲವಾರೆ ನಿರೂಪಿಸಿದರು. ರುದ್ರೇಶ್ವರ ಸ್ವಾಮಿ ಗೋರ್ಟಾ ವಂದಿಸಿದರು. ಸಂಸ್ಥೆಯ ಮಹಿಳಾ ಘಟಕದ ಅಧ್ಯಕ್ಷೆ ಸವಿತಾ ರಮೇಶ ಸ್ವಾಮಿ, ಸರಸ್ವತಿ ಬೆಂಬಳೆ, ಶೀಲಾದೇವಿ ಲವಾರೆ, ರೇಣುಕಾ ಮಠಪತಿ, ರೇವಣಸಿದ್ದಯ್ನಾ ಮಠಪತಿ, ವೀರಣ್ಣಾ ಶೀಲವಂತ, ಮಲ್ಲಿಕಾರ್ಜುನ ನಂದಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.