ಕ್ಯಾಂಟೀನ್‌ ವ್ಯವಸ್ಥೆ ಮೇಲೆ ಕಣ್ಣು 


Team Udayavani, Aug 23, 2017, 12:10 PM IST

canteen-mayor.jpg

ಬೆಂಗಳೂರು: ಇಂದಿರಾ ಕ್ಯಾಂಟೀನ್‌ಗಳಲ್ಲಿನ ವ್ಯವಸ್ಥೆ ಬಗ್ಗೆ ತಿಳಿಯಲು ದಿಢೀರ್‌ ಭೇಟಿ ಮುಂದುವರಿಸಿರುವ ಮೇಯರ್‌ ಜಿ. ಪದ್ಮಾವತಿ, ಮಂಗಳವಾರ ಅತಿ ¤ಗುಪ್ಪೆ, ನಾಗರಬಾವಿ, ಪಾದರಾಯನಪುರ, ಆಜಾದ್‌ನಗರ ಮತ್ತು ರಾಯಪುರಂ ವಾರ್ಡ್‌ಗಳಲ್ಲಿರುವ ಇಂದಿರಾ ಕ್ಯಾಂಟೀನ್‌ಗಳಲ್ಲಿ ಪರಿಶೀಲನೆ ನಡೆಸಿದರು.

ಈ ವೇಳೆ ಕ್ಯಾಂಟೀನ್‌ ಸಿಬ್ಬಂದಿಗೆ ಹಲವು ಸಲಹೆ ಸೂಚನೆಗಳನ್ನು ಮೇಯರ್‌ ನೀಡಿದ್ದಾರೆ. “ಕ್ಯಾಂಟೀನ್‌ಗೆ ಬರುವ ಸಾರ್ವಜನಿಕರೊಂದಿಗೆ ಸೌಜನ್ಯದಿಂದ ನಡೆದುಕೊಳ್ಳಬೇಕು. ಆಹಾರದ ಹಂಚಿಕೆ ಸಮರ್ಪಕವಾಗಿರಬೇಕು ಹಾಗೂ ಸ್ವತ್ಛತೆ ಕಾಪಾಡಬೇಕು,’ ಎಂದು ತಾಕೀತು ಮಾಡಿದ್ದಾರೆ. ಆಜಾದ್‌ನಗರ ಮತ್ತು ಬಾಬು ಜಗಜೀವನರಾಮ್‌ ನಗರದಲ್ಲಿರುವ ಇಂದಿರಾ ಕ್ಯಾಂಟೀನ್‌ ಹೊರಭಾಗದಲ್ಲಿ ನಡೆಯುತ್ತಿರುವ ಸಿವಿಲ್‌ ಕಾಮಗಾರಿಗಳನ್ನು ಆದಷ್ಟು ಬೇಗ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಆದೇಶಿಸಿದರು. 

ಅನಿರೀಕ್ಷಿತ ತಪಾಸಣೆ ವೇಳೆ ಅತ್ತಿಗುಪ್ಪೆ ವಾರ್ಡ್‌ ಇಂದಿರಾ ಕ್ಯಾಂಟೀನ್‌ನಲ್ಲಿ ಶಾಲಾ ಮಕ್ಕಳು ಸಾಲಿನಲ್ಲಿ ನಿಂತಿರುವುದನ್ನು ಗಮನಿಸಿದ ಮೇಯರ್‌, ಮಕ್ಕಳಿಗೆ ಸ್ವತಃ ತಿಂಡಿ ತಿನಿಸಿದರು. ವ್ಯವಸ್ಥಿತವಾಗಿ ತಿಂಡಿ ಸರಬರಾಜು ಆಗುತ್ತಿರುವುದನ್ನು ಗಮನಿಸಿದರು. ನಂತರ ಪೂರ್ವವಲಯದ ಗಂಗಾನಗರ ವಾರ್ಡ್‌, ಗಂಗೇನಹಳ್ಳಿ ವಾರ್ಡ್‌, ಹೆಬ್ಟಾಳ ವಾರ್ಡ್‌ನಲ್ಲಿರುವ ಇಂದಿರಾ ಕ್ಯಾಂಟೀನ್‌ಗಳಿಗೆ ಮಧ್ಯಾಹ್ನದ ಊಟ ಸರಬರಾಜಿನ ಬಗ್ಗೆ ತಪಾಸಣೆ ಕೈಗೊಂಡು ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಸಾರ್ವಜನಿಕರಿಂದ ಆಹಾರದ ಗುಣಮಟ್ಟ ಮತ್ತು ರುಚಿಯ ಬಗ್ಗೆ ಉತ್ತಮ ಅಭಿಪ್ರಾಯ ವ್ಯಕ್ತವಾಯಿತು. ಈ ವೇಳೆ ಮಾತನಾಡಿದ ಮೇಯರ್‌, ಇಂದಿರಾ ಕ್ಯಾಂಟೀನ್‌ ವ್ಯವಸ್ಥೆಯು ದಿನೇ ದಿನೇ ಸುಧಾರಿಸುತ್ತಿದ್ದು, ನಿರೀಕ್ಷೆಗಿಂತ ಹೆಚ್ಚು ಜನ ಭೇಟಿ ನೀಡುತ್ತಿದ್ದಾರೆ. ಹಾಗಾಗಿ, ಎಲ್ಲರಿಗೂ ಸಮರ್ಪಕ ಆಹಾರ ಪೂರೈಕೆಯಲ್ಲಿ ತುಸು ವ್ಯತ್ಯಾಸವಾಗುತ್ತಿದ್ದು, ಹಂತ-ಹಂತವಾಗಿ ಸುಧಾರಣೆ ಆಗಲಿದೆ ಎಂದರು. 

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.