ರಾಮರಾಜ ಕ್ಷತ್ರಿಯ ಸೇವಾ ಸಂಘ: ಶ್ರಾವಣ ಸಂಭ್ರಮ


Team Udayavani, Aug 23, 2017, 12:19 PM IST

65.jpg

ಮುಂಬಯಿ: ರಾಮರಾಜ ಕ್ಷತ್ರಿಯ ಸೇವಾ ಸಂಘ ಮುಂಬಯಿ ಇದರ ಮಹಿಳಾ ವಿಭಾಗದ ವತಿಯಿಂದ  ಶ್ರಾವಣ ಸಂಭ್ರಮ ಆಚರಣೆಯು ಆ. 20ರಂದು ಅಂಧೇರಿ ಪೂರ್ವದ ಮರೋಲ್‌ ಕೊಂಡಿವಿಟಾದ  ಕಮ್ಯುನಿಟಿ ಹಾಲ್‌ ಸಭಾಗೃಹದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಿತು.

ಸಂಘದ ಅಧ್ಯಕ್ಷ ರಾಜ್‌ಕುಮಾರ್‌ ಕಾರ್ನಾಡ್‌ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರತಿಯೊಬ್ಬರೂ ತಮ್ಮ ತಮ್ಮ ಧರ್ಮಗಳ ಸಂಸ್ಕೃತಿಯನ್ನು ಆಚರಿಸಿದಾಗ ಸ್ವಂತಿಕೆಯ ಸಂಸ್ಕಾರಗಳ ಜ್ಞಾನೋದಯವಾಗುವುದು. ಸಂಸ್ಥೆ ಅಥವಾ ಸಾರ್ವತ್ರಿಕವಾಗಿ ಇಂತಹ ಆಚರಣೆಗಳನ್ನು ನಡೆಸಿದಾಗ ಜೀವನ ಪದ್ಧತಿಯ ನೈಜತೆಯ ಅರಿವು ಮೂಡುತ್ತದೆ. ಮಹಿಳಾ ಸಂಘಟನೆಯಿಂದ ಸಮಾಜದ ಏಳಿಗೆ ಸಾಧ್ಯ ಎನ್ನುವುದು ನಮ್ಮ ಸಂಸ್ಥೆಯ ಸ್ತ್ರೀಶಕ್ತಿಯ ಸಾಂಘಿಕತೆಯಿಂದ ತಿಳಿಯಬಹುದು. ಈ ಮೊದಲು ಪುರುಷರೇ ಎಲ್ಲಾ ಜವಾಬ್ದಾರಿಗಳನ್ನು 

ನಿರ್ವಹಿಸಿ ಸಂಸ್ಥೆಯನ್ನು ಮುನ್ನಡೆಸಬೇಕಾಗಿತ್ತು. ಆದರೆ ಈಗ ಹಾಗಿಲ್ಲ. ಸ್ತ್ರೀಯರ ಸಕ್ರಿಯತೆಯಿಂದ  ಸಂಸ್ಥೆಯು ಸುಗಮವಾಗಿ ಸಾಗುತ್ತಿದೆ. ಶೀಘ್ರವೇ ನಮ್ಮ ಸಮಾಜದ ಯುವಕ ವೃಂದವನ್ನು ಸ್ಥಾಪಿಸುವ ಸಂಕಲ್ಪ ಹೊಂದಿದ್ದೇವೆ. ಆದ್ದರಿಂದ ನಮ್ಮಲ್ಲಿನ ಯುವ ಜನತೆ ಮುಂದೆ  ಬಂದು ಸಂಘದ ಏಳಿಗೆಗೆ ಶ್ರಮಿಸಬೇಕು. ನಮ್ಮವರು ಅನೇಕರು ಮುಂಬಯಿಯಲ್ಲಿ ನೆಲೆಯಾಗಿದ್ದು ಇನ್ನೂ ಸಂಸ್ಥೆಯೊಡನೆ ಬೆರೆತುಕೊಂಡಿಲ್ಲ. ಅವರನ್ನೆಲ್ಲರನ್ನೂ ಒಗ್ಗೂಡಿಸುವಲ್ಲಿ ಎಲ್ಲರೂ ಶ್ರಮಿಸಬೇಕಾಗಿದೆ ಎಂದು ಹೇಳಿದರು.

ಮಹಿಳಾ ವಿಭಾಗಧ್ಯಕ್ಷೆ ರೀನಾ ಕೇದರ್‌ನಾಥ ಬೋಳಾರ್‌ ಅವರು ಮಾತನಾಡಿ, ಧರ್ಮಾಚರಣೆಯಿಂದ ಸಂಸ್ಕಾರಯುತ ಬಾಳು ಸಾಧ್ಯ. ಇಂತಹ ಆಚರಣೆಗಳಿಂದ ಸಮುದಾಯದೊಳಗಿನ ಸಂಸ್ಕೃತಿಯ ಅನಾವರಣ ಸಾಧ್ಯವಾಗುತ್ತದೆ. ಮಾತ್ರವಲ್ಲದೆ ಸಂಸ್ಕೃತಿ ಪ್ರಧಾನ ಸ್ತ್ರೀಯರಲ್ಲಿ ಆತ್ಮಶಕ್ತಿ ಉದ್ದೀಪನ ಆಗುತ್ತದೆ. ಆದ್ದರಿಂದ ಸ್ವಸಮಾಜದ ಎಲ್ಲಾ ಕಾರ್ಯಕ್ರಮಗಳಲ್ಲಿ ಯುವಶಕ್ತಿ ಮತ್ತು ಮಹಿಳೆಯರು ಉತ್ಸುಕರಾಗಬೇಕು. ಸಂಸ್ಥೆಯ ಏಳಿಗೆಯಿಂದ ಸಮಾಜೋದ್ಧಾರ ಸಾಧ್ಯ. ಆದ್ದರಿಂದ ಸ್ತ್ರೀಪುರುಷರೆಂಬ ಭೇದ‌ ಮರೆತು ಒಗ್ಗಟ್ಟಿನಿಂದ ಶ್ರಮಿಸಬೇಕು. ಅದಕ್ಕಾಗಿ ಹಲವು ಕಾರ್ಯಕ್ರಮ
ಗಳನ್ನು ಹಮ್ಮಿಕೊಳ್ಳಬೇಕು ಎಂದರು.

ಶ್ರಾವಣ ಸಂಭ್ರಮ ಕಾರ್ಯಕ್ರಮವನ್ನು ರಾಮರಾಜ ಕ್ಷತ್ರಿಯ ಸಂಘ ಮುಂಬಯಿ ಅಧ್ಯಕ್ಷ ಬಿ. ಗಣಪತಿ ಶೇರೆಗಾರ್‌ ಅವರು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ರಾಮರಾಜ ಕ್ಷತ್ರೀಯ ಸಂಘ ಮುಂಬಯಿ ಮಹಿಳಾ ವಿಭಾಗಧ್ಯಕ್ಷೆ ಶುಭಾ ವಿ. ರಾವ್‌, ಕ್ಷತ್ರೀಯ ಸೇವಾ ಸಂಘದ ಉಪಾಧ್ಯಕ್ಷ ಕೆ. ಶಿವರಾಮ ರಾವ್‌, ಗೌರವ ಪ್ರಧಾನ ಕಾರ್ಯದರ್ಶಿ ಎನ್‌. ರವೀಂದ್ರನಾಥ್‌ ರಾವ್‌, ಗೌರವ ಕೋಶಾಧಿಕಾರಿ ನವೀನ್‌ ಎಸ್‌. ರಾವ್‌, ಜೊತೆ ಕಾರ್ಯದರ್ಶಿಗಳಾದ ಕೇದರ್‌ನಾಥ ಆರ್‌. ಬೋಳಾರ್‌ ಮತ್ತು ರಿತೇಶ್‌ ಆರ್‌. ರಾವ್‌, ಜೊತೆ ಕೋಶಾಧಿಕಾರಿ ರೂಪೇಶ್‌ ಆರ್‌. ರಾವ್‌, ಮಹಿಳಾ ಉಪ ಕಾರ್ಯಾಧ್ಯಕ್ಷೆ ವೀಣಾ ಎಸ್‌. ರಾವ್‌, ಗೌರವ ಕೋಶಾಧಿಕಾರಿ ಪ್ರಜ್ಞಾ ಎಸ್‌. ರಾವ್‌, ಜೊತೆ ಕಾರ್ಯದರ್ಶಿ ಆರತಿ ಎನ್‌. ರಾವ್‌, ಜೊತೆ ಕೋಶಾಧಿಕಾರಿ ಕವಿತಾ ಆರ್‌. ರಾವ್‌ ಸೇರಿದಂತೆ ಸಮಾಜ ಬಾಂಧವರು, ಮಹಿಳೆಯರು ಅಧಿಕ ಸಂಖ್ಯೆಯಲ್ಲಿ  ಉಪಸ್ಥಿತರಿದ್ದರು.

ಎನ್‌. ರವೀಂದ್ರ ರಾವ್‌ ವಾಶಿ ಮತ್ತು ವಿನೋದಾ ಆರ್‌. ರಾವ್‌ ದಂಪತಿಯನ್ನು ಸಮ್ಮಾನಿಸಿ ಗೌರವಿಸಲಾುತು. ಮಹಿಳಾ ವಿಭಾಗದ  ಗೌರವ ಕಾರ್ಯದರ್ಶಿ ಚಿತ್ರಾ ಎಂ. ರಾವ್‌ ಸ್ವಾಗತಿಸಿದರು. ಮಹಿಳಾ ವಿಭಾಗದ ಸದಸ್ಯೆಯರಿಂದ ಭಜನ ಕಾರ್ಯಕ್ರಮ ನಡೆಯಿತು.  ಅನಂತರ ಅರಸಿನ ಕುಂಕುಮ ಕಾರ್ಯಕ್ರಮ ನೆರವೇರಿತು. ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳು ನಡೆದವು. ವಿಜೇತ ಸ್ಪರ್ಧಿಗಳನ್ನು  ರಾಜ್‌ಕುಮಾರ್‌ ಕಾರ್ನಾಡ್‌ ಬಹುಮಾನವನ್ನಿತ್ತು ಶುಭ ಹಾರೈಸಿದರು. ಸಪ್ನಾ ಯು. ಬೇಕಲ್‌ ಕಾರ್ಯಕ್ರಮ ನಿರೂಪಿಸಿದರು.  ಕೀರ್ತನಾ ರೂಪೇಶ್‌ ರಾವ್‌ ವಂದಿಸಿದರು. ಸಮಾಜದ ಮಹಿಳೆಯರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. 

 ಚಿತ್ರ-ವರದಿ: ರೊನಿಡಾ ಮುಂಬಯಿ

ಟಾಪ್ ನ್ಯೂಸ್

Swati Maliwal Assault Case: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ ಬಂಧನ

Swati Maliwal Assault Case: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ ಬಂಧನ

Hubli; ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

Hubli; ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ

Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ

Agra: ಆಗ್ರಾದಲ್ಲಿ ತಲೆ ಎತ್ತಿದೆ ತಾಜ್‌ ಮಹಲ್‌ ಪ್ರತಿಸ್ಪರ್ಧಿ

Agra: ಆಗ್ರಾದಲ್ಲಿ ತಲೆ ಎತ್ತಿದೆ ತಾಜ್‌ ಮಹಲ್‌ ಪ್ರತಿಸ್ಪರ್ಧಿ

2

ಎಸ್‌ಎಸ್‌ಎಲ್‌ಸಿ ಗ್ರೇಸ್‌ ಮಾರ್ಕ್ಸ್ ರದ್ದು: ಪ್ರತಿಭಾವಂತರ ಶ್ರಮಕ್ಕೆ ಮನ್ನಣೆ 

ಕ್ಯಾಂಟರ್ ಅಡ್ಡಗಟ್ಟಿ 32 ಲಕ್ಷ ರೂ. ದರೋಡೆ: ಖಾರದ ಪುಡಿ ಎರಚಿ ಹಲ್ಲೆ, ಇಬ್ಬರಿಗೆ ಗಾಯ

ಕ್ಯಾಂಟರ್ ಅಡ್ಡಗಟ್ಟಿ 32 ಲಕ್ಷ ರೂ. ದರೋಡೆ: ಖಾರದ ಪುಡಿ ಎರಚಿ ಹಲ್ಲೆ, ಇಬ್ಬರಿಗೆ ಗಾಯ

Bengaluru ಎಷ್ಟೇ ಮಳೆ ಬಂದರೂ ಪಂದ್ಯ ನಡೆಸಬಹುದು; ಏನಿದು ಚಿನ್ನಸ್ವಾಮಿಯ ಸಬ್ ಏರ್ ಸಿಸ್ಟಂ?

Bengaluru ಎಷ್ಟೇ ಮಳೆ ಬಂದರೂ ಪಂದ್ಯ ನಡೆಸಬಹುದು; ಏನಿದು ಚಿನ್ನಸ್ವಾಮಿಯ ಸಬ್ ಏರ್ ಸಿಸ್ಟಂ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

World Mother’s Day 2024: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮೆರಿಕದಲ್ಲಿ ಲೈಬ್ರರಿ, ಮಕ್ಕಳು ಮತ್ತು ನಾಯಿ….!

Desi Swara: ಅಮೆರಿಕದಲ್ಲಿ ಲೈಬ್ರರಿ, ಮಕ್ಕಳು ಮತ್ತು ನಾಯಿ….!

ಕರ್ನಾಟಕ ಸಂಘ ಕತಾರ್‌: ವಾರ್ಷಿಕ ಸಂಭ್ರಮ ವಸಂತೋತ್ಸವ-24 ಆಚರಣೆ

ಕರ್ನಾಟಕ ಸಂಘ ಕತಾರ್‌: ವಾರ್ಷಿಕ ಸಂಭ್ರಮ ವಸಂತೋತ್ಸವ-24 ಆಚರಣೆ

Desi Swara: ಮಕ್ಕಳೊಂದಿಗೆ ಬೆರೆತು ಮನಸ್ಸನ್ನು ಅರಿಯೋಣ

Desi Swara: ಮಕ್ಕಳೊಂದಿಗೆ ಬೆರೆತು ಮನಸ್ಸನ್ನು ಅರಿಯೋಣ

Desi Swara: ಸಿರಿಗನ್ನಡ ಮ್ಯೂನಿಕ್‌: ನವವರ್ಷವನ್ನು ಹರುಷದಿ ಸ್ವಾಗತಿಸಿದ ಸಿರಿಗನ್ನಡಿಗರು

Desi Swara: ಸಿರಿಗನ್ನಡ ಮ್ಯೂನಿಕ್‌: ನವವರ್ಷವನ್ನು ಹರುಷದಿ ಸ್ವಾಗತಿಸಿದ ಸಿರಿಗನ್ನಡಿಗರು

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Biography of Mother Teresa in web series

Mother Teresa; ವೆಬ್‌ ಸೀರೀಸ್‌ನಲ್ಲಿ ಮದರ್‌ ತೆರೇಸಾ ಜೀವನ ಚರಿತ್ರೆ

Swati Maliwal Assault Case: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ ಬಂಧನ

Swati Maliwal Assault Case: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ ಬಂಧನ

1-panaji

Panaji: 55ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಪೋಸ್ಟರ್ ಅನಾವರಣ

Hubli; Government should have woken up after Neha case: Jayamrinthujaya Swamiji

Hubli; ನೇಹಾ ಪ್ರಕರಣದ ಬಳಿಕ ಸರ್ಕಾರ ಎಚ್ಚೆತ್ತುಕೊಳ್ಳಬೇಕಿತ್ತು: ಜಯಮೃಂತ್ಯುಜಯ ಸ್ವಾಮೀಜಿ

ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ

Belagavi; ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.