ಒಬಿಸಿಗೆ  ಬಿಜೆಪಿ ಮೀಸಲಿನಾಮಿಶ; ಕೆಟಗರಿ ವಿಭಜಿಸಲು ಆಯೋಗ


Team Udayavani, Aug 24, 2017, 6:00 AM IST

PTI8_23_.jpg

ನವದೆಹಲಿ: 2019ರ ಲೋಕಸಭೆ ಚುನಾವಣೆ ಮೇಲೆ ಕಣ್ಣು ಇಟ್ಟಿರುವ ಬಿಜೆಪಿ, ಒಬಿಸಿಯಲ್ಲೇ ಉಪ-ಕೆಟಗರಿ ರೂಪಿಸಲು ಆಯೋಗದ ರಚನೆ ಮತ್ತು ಕೆನೆಪದರ ಮಿತಿಯನ್ನು ಏರಿಸುವ ಬಗ್ಗೆ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಒಬಿಸಿ ಕೆಟಗರಿಯಲ್ಲಿ ಸಬ್‌-ಕೆಟಗರಿ ಗುರುತಿಸಲು ಆಯೋಗವೊಂದನ್ನು ರಚಿಸಲು ತೀರ್ಮಾನಿಸಲಾಗಿದೆ. ಈ ಮೂಲಕ ಒಬಿಸಿ ಪಂಗಡದಲ್ಲೇ ಇರುವ ಅತ್ಯಂತ ನಿರ್ಲಕ್ಷಿತ ಮತ್ತು ತಳ ಸಮುದಾಯದ ಮೇಲೂ ಬಿಜೆಪಿ ಕಣ್ಣು ಹಾಕಿದೆ.

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಕೆಟಗರಿಯಲ್ಲೇ ಉಪ ಕೆಟಗರಿ ಮಾಡುವ ಕುರಿತಂತೆ ಭರವಸೆ ನೀಡಿದ್ದ ಬಿಜೆಪಿ, ಇದರಲ್ಲಿ ಯಶಸ್ವಿಯೂ ಆಗಿತ್ತು. ಇದೀಗ ಇದೇ ನಿಯಮವನ್ನು ಕೇಂದ್ರ ಸರ್ಕಾರದ ಉದ್ಯೋಗದಲ್ಲೂ ಜಾರಿಗೆ ತರಲು ಮುಂದಾಗಿದೆ.

ಈಗಾಗಲೇ ಕರ್ನಾಟಕವೂ ಸೇರಿದಂತೆ ದೇಶದ ಒಂಬತ್ತು ರಾಜ್ಯಗಳು ಸ್ಥಳೀಯ ಸರ್ಕಾರಿ ಉದ್ಯೋಗಗಳಲ್ಲಿ ಸಬ್‌-ಕೆಟಗರಿ ಮೀಸಲಾತಿ ನೀಡುತ್ತಿವೆ. ಇದೇ ನೀತಿಯನ್ನು ಕೇಂದ್ರದ ಅಡಿಯಲ್ಲಿ ಬರುವ ಉದ್ಯೋಗಗಳಲ್ಲೂ ಜಾರಿಗೆ ತರುವ ಬಗ್ಗೆ ಸರ್ಕಾರ ವರ್ಷದಿಂದಲೂ ಪ್ರಯತ್ನಿಸುತ್ತಿದ್ದು, ಇದೀಗ ಮೂರ್ತ ಸ್ವರೂಪ ಸಿಕ್ಕಿದೆ. ಇದರಿಂದಾಗಿ ಸಬ್‌-ಕೆಟಗರಿಗಳಿಗೆ ಮೀಸಲಾತಿ ನೀಡುವ ಸಂಬಂಧ ಸಾಧ್ಯಾಸಾಧ್ಯತೆಗಳನ್ನು ಪರಿಶೀಲಿಸಲು ಸಮಿತಿ ರಚನೆ ಮಾಡಲು ನಿರ್ಧರಿಸಲಾಗಿದೆ. ಆಯೋಗದ ಅಧ್ಯಕ್ಷರ ನೇಮಕವಾದ ದಿನದಿಂದ 12 ದಿನಗಳಲ್ಲಿ ವರದಿ ನೀಡಬೇಕಿದೆ.

ಕೆನೆಪದರ ಮಿತಿ ಏರಿಕೆ
ಈ ಮಧ್ಯೆ, ಒಬಿಸಿಯೊಳಗೆ ಕೆನೆಪದರ ಮೀಸಲಾತಿ ಮಿತಿಯನ್ನು 6 ಲಕ್ಷ ರೂ.ಗಳಿಂದ 8 ಲಕ್ಷ ರೂ.ಗಳಿಗೆ ಏರಿಕೆ ಮಾಡಲು ಕೇಂದ್ರ ಸಂಪುಟ ನಿರ್ಧರಿಸಿದೆ. ಇದುವರೆಗೆ ವಾರ್ಷಿಕ 6 ಲಕ್ಷ ರೂ.ಗಳವರೆಗೆ ಆದಾಯವಿದ್ದವರಿಗೆ ಮಾತ್ರ ಮೀಸಲಾತಿ ಸೌಲಭ್ಯ ಸಿಗುತ್ತಿತ್ತು. ಈ ಮಿತಿಯನ್ನು 8 ಲಕ್ಷಗಳಿಗೆ ಏರಿಕೆ ಮಾಡಲಾಗಿದ್ದು, ಒಬಿಸಿಯಲ್ಲಿರುವ ಬಹುತೇಕ ಮಂದಿಗೆ ಅನುಕೂಲವಾಗಲಿದೆ. ಈ ಬಗ್ಗೆಯೂ ಕಳೆದ ವರ್ಷವೇ ಕೇಂದ್ರ ಸರ್ಕಾರ ಪ್ರಸ್ತಾಪವಿಟ್ಟಿತ್ತಾದರೂ, ಈ ನಿರ್ಧಾರ ಈಗ ಜಾರಿಗೆ ಬಂದಿದೆ.

ಸಬ್‌-ಕೆಟಗರಿ ಮೀಸಲಾತಿಯ ಲಾಭ-ನಷ್ಟ
ಕೆಟಗರಿಯಲ್ಲೇ ಉಪ-ಕೆಟಗರಿ ಮಾಡಿ ಮೀಸಲಾತಿ ನೀಡುವು ಇರುವೆ ಗೂಡಿಗೆ ಕೈಹಾಕಿದಷ್ಟು ಕಷ್ಟಕರವಾದ ಕೆಲಸ. ಒಬಿಸಿಯಲ್ಲಿ ನೂರಾರು ಜಾತಿಗಳು ಬರಲಿದ್ದು, ಇವುಗಳನ್ನು ಯಾವ ಕೆಟಗರಿಗೆ ಸೇರಿಸಬೇಕು ಎಂಬುದೇ ಮೊದಲ ಗೊಂದಲ. ಅಲ್ಲದೆ ಸದ್ಯ ಇರುವಂತೆ ಹೆಚ್ಚು ಹಿಂದುಳಿದವರು, ಹಿಂದುಳಿದವರು ಮತ್ತು ತೀರಾ ಹಿಂದುಳಿದವರು ಎಂದು ವಿಭಾಗಿಸಲಾಗಿದೆ. ಇದುವರೆಗೆ ಹೆಚ್ಚಿನ ಮೀಸಲಾತಿ ಸೌಲಭ್ಯ ಸಿಕ್ಕಿರುವುದು ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಪ್ರಬಲರಾಗಿರುವ ಹೆಚ್ಚು ಹಿಂದುಳಿದವರಿಗೇ. ಇವರನ್ನು ಬಿಟ್ಟರೆ ಹಿಂದುಳಿದವರಿಗೆ ಕೊಂಚ ಮಟ್ಟಿಗೆ ಸಿಕ್ಕಿದೆ. ಆದರೆ ತೀರಾ ಹಿಂದುಳಿದವರಿಗೆ 30 ವರ್ಷಗಳಿಂದಲೂ ನಷ್ಟವಾಗುತ್ತಲೇ ಇದೆ. ಇದನ್ನು ಸರಿದೂಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಉಪ ಕೆಟಗರಿ ಮಾಡಿ ಮೀಸಲಾತಿ ನೀಡಲು ಮುಂದಾಗಿದೆ ಎನ್ನಲಾಗಿದೆ.

ಉತ್ತರ ಪ್ರದೇಶದಲ್ಲಿ ಯಶಸ್ವಿಯಾದ ತಂತ್ರ
ಉತ್ತರ ಪ್ರದೇಶದಲ್ಲಿ ಇದೇ ತಂತ್ರವನ್ನು ಇರಿಸಿಕೊಂಡೇ ಬಿಜೆಪಿ ಚುನಾವಣೆಗೆ ಇಳಿದಿತ್ತು. 1990ರಲ್ಲಿ ವಿ.ಪಿ. ಸಿಂಗ್‌ ನೇತೃತ್ವದ ಸರ್ಕಾರ ಮಂಡಲ್‌ ಆಯೋಗದ ಮೂಲಕ ಒಬಿಸಿ ವರ್ಗಕ್ಕೆ ಶೇ.27ರಷ್ಟು ಮೀಸಲಾತಿ ನೀಡುವ ಅವಕಾಶ ಕಲ್ಪಿಸಿತ್ತು. ಆಗಿನಿಂದಲೂ ಕೇಂದ್ರ ಸರ್ಕಾರಿ ಉದ್ಯೋಗಳಲ್ಲಿ ಒಬಿಸಿಯಲ್ಲಿನ ಹೆಚ್ಚು ಹಿಂದುಳಿದ ವರ್ಗದವರೇ ಇದರ ಅನುಕೂಲ ಪಡೆದುಕೊಂಡು ಬಂದಿದ್ದಾರೆ. ಅಲ್ಲದೆ ಉತ್ತರ ಪ್ರದೇಶದಲ್ಲಿ ಈ ಮೀಸಲಾತಿಯ ಸದುಪಯೋಗ ಪಡೆದವರು ಯಾದವರು. ಈ ಅಂಶವನ್ನೇ ಮುಂದಿಟ್ಟುಕೊಂಡಿದ್ದ ಬಿಜೆಪಿ ಯಾದವೇತರರ ಮತಗಳನ್ನು ಸೆಳೆಯುವಲ್ಲಿ ಯಶಸ್ವಿಯಾಗಿತ್ತು. ಇದೇ ತಂತ್ರವನ್ನು 2019ಕ್ಕೂ ಅನ್ವಯಿಸುವ ಇರಾದೆ ಬಿಜೆಪಿಗೆ ಇದೆ ಎಂದು ಹೇಳಲಾಗಿದೆ.

ಮೀಸಲಾತಿಯ ಮರುಪರಿಶೀಲನೆ ಅಲ್ಲ
ಒಬಿಸಿ ವರ್ಗದಲ್ಲಿನ ಉಪ-ಕೆಟಗರಿ ಮೀಸಲಾತಿ ನೀಡುವ ಸಂಬಂಧ ಆಯೋಗ ರಚಿತವಾಗಿರುವ ಹಿಂದೆ ಮೀಸಲಾತಿ ವ್ಯವಸ್ಥೆಯನ್ನು ಮರುಪರಿಶೀಲನೆ ಮಾಡುವ ಉದ್ದೇಶವಿಲ್ಲ ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ. ಇದು ಕೇವಲ ಮೀಸಲಾತಿ ಸಿಗದವರಿಗೆ ಮಾತ್ರ ಅನುಕೂಲವಾಗಲಿ ಎಂಬ ಕಾರಣದಿಂದ ಮಾಡಲಾಗಿದೆ. ಇದನ್ನು ಬಿಟ್ಟು ಬೇರೆ ಯಾವ ಉದ್ದೇಶವಿಲ್ಲ ಎಂದು ಸುದ್ದಿಗಾರರಿಗೆ ಮಾಹಿತಿ ನೀಡಿದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.