ನಾಳೆ ಡೇರಾ ಬಾಬಾ ವಿರುದ್ಧದ ರೇಪ್ ಕೇಸ್ ತೀರ್ಪು; ಪೊಲೀಸ್ ಸರ್ಪಗಾವಲು
Team Udayavani, Aug 24, 2017, 3:44 PM IST
ಚಂಡೀಗಢ್: ಡೇರಾ ಸಚ್ಚಾ ಸೌದಾ ಸಮುದಾಯದ ಧರ್ಮಗುರು ಗುರ್ಮೀತ್ ರಾಮ್ ರಹೀಮ್ ಸಿಂಗ್ ವಿರುದ್ಧದ ಸುಮಾರು 15 ವರ್ಷಗಳ ಹಿಂದಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿಂತೆ ಹರ್ಯಾಣದ ಪಂಚಕುಲದಲ್ಲಿರುವ ಸಿಬಿಐ ವಿಶೇಷ ಕೋರ್ಟ್ ತೀರ್ಪು ಪ್ರಕಟಿಸಲಿರುವ ಹಿನ್ನೆಲೆಯಲ್ಲಿ ಚಂಡೀಗಢ್ ಮತ್ತು ಪಂಚಕುಲದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಪಂಚಕುಲ ಹಾಗೂ ಚಂಡೀಗಢ್ ನಿಂದ ಸುಮಾರು 15 ಕಿಲೋ ಮೀಟರ್ ದೂರದಲ್ಲಿ ರಾಮ್ ರಹೀಮ್ ನ ಸುಮಾರು 2 ಲಕ್ಷ ಅನುಯಾಯಿಗಳು ಈಗಾಗಲೇ ಜಮಾಯಿಸಿದ್ದಾರೆ. ನಾನು ತೀವ್ರತರವಾದ ಬೆನ್ನು ನೋವು ಕಾಡುತ್ತಿದೆ. ಆದರೂ ನ್ಯಾಯಾಧೀಶರ ಆದೇಶದ ಮೇರೆಗೆ ನಾನು ಶುಕ್ರವಾರ ಕೋರ್ಟ್ ಗೆ ಆಗಮಿಸಲಿದ್ದೇನೆ, ನನಗೆ ದೇವರ ಮೇಲೆ ನಂಬಿಕೆ ಇದೆ. ನನ್ನ ಅನುಯಾಯಿಗಳು ಶಾಂತಿಯನ್ನು ಕಾಪಾಡಬೇಕೆಂದು ಡೇರಾ ಬಾಬಾ ಟ್ವೀಟ್ ಮಾಡಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ಸುಮಾರು 25 ವರ್ಷಗಳ ಹಿಂದೆ ಇಬ್ಬರು ಸಾಧ್ವಿಗಳ ಮೇಲೆ ಅತ್ಯಾಚಾರ ಎಸಗಿದ್ದಾರೆಂಬ ಪ್ರಕರಣ ಇದಾಗಿದೆ. ಈ ನಿಟ್ಟಿನಲ್ಲಿ ಕಾನೂನು ಸುವ್ಯವಸ್ಥೆಯ ಸಮಸ್ಯೆ ಉದ್ಭವಿಸಬಾರದೆಂದು ಹರ್ಯಾಣ ಮತ್ತು ಪಂಜಾಬ್ ಸರ್ಕಾರ ನೂರಾರು ಪೊಲೀಸರು ಹಾಗೂ ಅರೆಸೇನಾ ಪಡೆಯನ್ನು ನಿಯೋಜಿಸಿದೆ ಎಂದು ವರದಿ ವಿವರಿಸಿದೆ. ಅಷ್ಟೇ ಅಲ್ಲ ಆಗಸ್ಟ್ 24 ಮತ್ತು 25ರಂದು ಶಾಲೆಗಳನ್ನು ತೆರೆಯದಿರುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.
ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ ಆದೇಶದ ಮೇರೆಗೆ 2002ರಲ್ಲಿ ರಾಮ್ ರಹೀಮ್ ವಿರುದ್ಧ ಸಿಬಿಐ ಐಪಿಸಿಯ ವಿವಿಧ ಸೆಕ್ಷನ್ ಗಳ ಅಡಿ ಅಪರಾಧ ಸಂಚು, ವಂಚನೆ, ಹರಿತವಾದ ಆಯುಧದಿಂದ ಗಂಭೀರ ಗಾಯ ಹಾಗೂ ಬೆದರಿಕೆ ಪ್ರಕರಣ ದಾಖಲಿಸಲಾಗಿತ್ತು.
ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಆದೇಶದ ಮೇರೆಗೆ ರಾಂ ರಹೀಮ್ ವಿರುದ್ಧ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್ಗಳ ಅಡಿ ಅಪರಾಧ ಸಂಚು, ವಂಚನೆ, ಹರಿತವಾದ ಆಯುಧದಿಂದ ಗಂಭೀರವಾದ ಗಾಯ ಹಾಗೂ ಬೆದರಿಕೆ ಪ್ರಕರಣ ದಾಖಲಿಸಲಾಗಿದೆ.
ಡೇರಾ ಆಶ್ರಮದ ಮಾಜಿ ಅನುಯಾಯಿ ಹಂಸರಾಜ್ ಚೌಹಾಣ್ ಎಂಬುವರು ರಾಮ್ ರಹೀಮ್ ವಿರುದ್ಧ ಹೈಕೋರ್ಟ್ನಲ್ಲಿ ದಾವೆ ಹೂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ