ಲಂಬಾಣಿ ಭಾಷೆಗೆ ಮಾನ್ಯತೆ ನೀಡಿ


Team Udayavani, Aug 28, 2017, 10:13 AM IST

gul 1.jpg

ಕಲಬುರಗಿ: ಲಂಬಾಣಿ ಭಾಷೆಗೆ ಸಾಂವಿಧಾನಿಕ ಮಾನ್ಯತೆ ನೀಡುವುದು ಸೇರಿದಂತೆ ಹಲವು ಮಹತ್ವದ ನಿರ್ಣಯಗಳನ್ನು
ಗುಲಬರ್ಗಾ ವಿವಿ ಅಂಬೇಡ್ಕರ್‌ ಭವನದಲ್ಲಿ ರವಿವಾರ ನಡೆದ ರಾಜ್ಯ ಮಟ್ಟದ ಬಂಜಾರಾ ಯುವ ಚಿಂತನ ಶಿಬಿರದ
ಸಮಾರೋಪ ಸಮಾರಂಭದಲ್ಲಿ ಸರ್ವಾನುಮತದ ನಿರ್ಣಯ ಕೈಗೊಳ್ಳಲಾಯಿತು. ರಾಜ್ಯದಲ್ಲಿರುವ ತಾಂಡಾಗಳನ್ನು ಕಂದಾಯ ಗ್ರಾಮಗಳಾಗಿ ಘೋಷಣೆ ಮಾಡುವ ಮಸೂದೆಗೆ ರಾಷ್ಟ್ರಪತಿ ಅಂಕಿತ ಹಾಕುವಂತೆ ಒತ್ತಾಯಿಸಿ ಸಹಿ ಸಂಗ್ರಹ ಮತ್ತು ಪತ್ರ ಚಳವಳಿ ನಡೆಸುವುದು. ಬಂಜಾರಾ ಸಮಾಜಕ್ಕೆ ಪ್ರತ್ಯೇಕ ಅಕಾಡೆಮಿ ಸ್ಥಾಪನೆ ಸೇರಿದಂತೆ ವಿವಿಧ ನಿರ್ಣಯ ಕೈಗೊಳ್ಳಲಾಯಿತು. ಗುಲಬರ್ಗಾ ವಿವಿಯ ಸಂತ ಸೇವಾಲಾಲ ಅಧ್ಯಯನ ಪೀಠ, ಪರ್ಯಾಯ ಸಮಾಜ ಕಾರ್ಯ ಮಹಾವಿದ್ಯಾಲಯ, ಬೆಂಗಳೂರಿನ ಹಮ್‌ ಗೋರ್‌ ಕಟಮಾಳ್ಳೋ ಕರ್ನಾಟಕ ಸಂಘಟನೆ ಆಶ್ರಯದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್‌, ಡಾ| ಅಂಬೇಡ್ಕರ ಸ್ಮರಣಾರ್ಥ ಶಿಬಿರದಲ್ಲಿ ದೇಶವ್ಯಾಪಿ ನೆಲೆಸಿರುವ ಬಂಜಾರಾ ಸಮುದಾಯದವರ ರಾಷ್ಟ್ರವ್ಯಾಪಿ ಸಮೀಕ್ಷೆ ಅಗತ್ಯ ಎಂದು ಶಿಬಿರ ಪ್ರತಿಪಾದಿಸಿತು. ಸಂಘಟಕ ಅನಂತನಾಯಕ ಮಾತನಾಡಿ, ಅಲೆಮಾರಿಗಳಾಗಿರುವ ಬಂಜಾರಾ ಸಮುದಾಯದ ಜನರನ್ನು ಸಾಂವಿಧಾನಿಕ ಚೌಕಟ್ಟಿನಲ್ಲಿ ತರುವ ಉದ್ದೇಶ ಮತ್ತು ವಿಶಿಷ್ಟ ಸಂಸ್ಕೃತಿಯಿರುವ ಸಮುದಾಯದಲ್ಲಿ ಸಂಘಟನೆ ಮತ್ತು ಒಗ್ಗಟ್ಟು ತರುವುದು ಶಿಬಿರದ ಉದ್ದೇಶವಾಗಿದೆ ಎಂದರು. ಭಾಷಾ ಸಮಸ್ಯೆ, ಸಂಘಟನೆ, ನಿರುದ್ಯೋಗ, ಸಾಮಾಜಿಕ ಜಾಲತಾಣ, ನೌಕರರ ಸಮಸ್ಯೆ, ಮಾಧ್ಯಮ, ಉದ್ಯೋಗಾವಕಾಶ, ಮಹಿಳಾ ಸಬಲೀಕರಣ ಇತ್ಯಾದಿ ಜ್ವಲಂತ ವಿಷಯಗಳ ಬಗ್ಗೆ ರಮೇಶ ಜಾಧವ್‌, ಡಾ| ಶಾರದಾ ಜಾಧವ್‌, ಖಂಡ್ಯಾ ನಾಯಕ, ಗುರು ಚವ್ಹಾಣ, ಡಾ|ಹರಿಶ್ಚಂದ್ರ, ಪ್ರತಿಮಾ ಕೆ.ಆರ್‌., ಮಂಜುನಾಥ, ಮಕ್ತುಂಬಿ, ನಾಗರಾಜ ಗೋಷ್ಠಿಗಳಲ್ಲಿ ವಿಷಯ ಮಂಡಿಸಿದರು. ಶಿಬಿರಾರ್ಥಿ ಬಾಬಿ ಎಂ. ಜಾಧವ್‌ ಮಾತನಾಡಿ, ಬಂಜಾರಾ ಜನಾಂಗದ ಮೂಲ, ಲಮಾಣಿ ಮಾರ್ಗಗಳು, ಭಾರತ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬಂಜಾರಾ ಜನಾಂಗದ ಕೊಡುಗೆ, ಬಂಜಾರರ ಮೌಖೀಕ ಸಾಹಿತ್ಯ, ಸಂಸ್ಕೃತಿ, ಕಲೆ, ಆಧುನಿಕ ಆಯಾಮಗಳನ್ನು ತಿಳಿದುಕೊಳ್ಳಲು ಶಿಬಿರ ಅವಕಾಶ ಕಲ್ಪಿಸಿತು. ಆಲ್‌ ಇಂಡಿಯಾ ಬಂಜಾರಾ ಸೇವಾ ಸಂಘದ ರಾಜ್ಯಾಧ್ಯಕ್ಷ ಸುಭಾಷ ರಾಠೊಡ, ಸಮಾಜದ ಪ್ರಮುಖರಾದ ಇಂದ್ರನಾಯಕ, ಪಿ.ಜಿ.ರಾಠೊಡ, ಡಾ| ಆನಂದ ನಾಯಕ,, ಮಹೇಶ ರಾಠೊಡ, ಸಂತೋಷ ರಾಠೊಡ, ಶಿವರಂಜನ ಸತ್ಯಂಪೇಟ್‌ ಹಾಗೂ ಇತರರಿದ್ದರು.

ಟಾಪ್ ನ್ಯೂಸ್

naksal (2)

Naxal ಶರಣಾದರೆ ಸರಕಾರದಿಂದ  ಪ್ರೋತ್ಸಾಹ: ಡಾ| ಬಂಜಗೆರೆ ಜಯಪ್ರಕಾಶ್‌

1-ewewqe

Anjali ಹತ್ಯೆ: ಹುಬ್ಬಳ್ಳಿಯಲ್ಲಿ ಭುಗಿಲೆದ್ದ ಪ್ರತಿಭಟನೆ; ಬಿಜೆಪಿ ಕಾರ್ಯಕರ್ತರು ವಶಕ್ಕೆ

Exam

SSLC  ಪರೀಕ್ಷೆ-2:  ನೋಂದಣಿ ದಿನಾಂಕ ವಿಸ್ತರಣೆ

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

voter

EC; ಮೊದಲ 4 ಹಂತದ ಚುನಾವಣೆಯಲ್ಲಿ ಶೇ.67 ಮತದಾನ

kejriwal 2

ಜೂ.4ರ ಬಳಿಕ ಐಎನ್‌ಡಿಐಎ ಸರಕಾರ: ಅರವಿಂದ ಕೇಜ್ರಿವಾಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; Suresh Sajjan submits nomination as BJP rebel candidate

Kalaburagi; ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸುರೇಶ ಸಜ್ಜನ್ ನಾಮಪತ್ರ ಸಲ್ಲಿಕೆ

Kalaburagi: ಮರ್ಮಾಂಗಕ್ಕೆ ಕರೆಂಟ್ ಶಾಕ್ ನೀಡಿದ ಪ್ರಕರಣ: ಶೀಘ್ರ ಇನ್ನುಳಿದ ಆರೋಪಿಗಳ ಬಂಧನ

Kalaburagi: ಮರ್ಮಾಂಗಕ್ಕೆ ಕರೆಂಟ್ ಶಾಕ್ ನೀಡಿದ ಪ್ರಕರಣ: ಶೀಘ್ರ ಇನ್ನುಳಿದ ಆರೋಪಿಗಳ ಬಂಧನ

ಕಲಬುರಗಿ: ಎಂಎಲ್ಸಿ ಚುನಾವಣೆಯಲ್ಲಿ ಕೈತಪ್ಪಿದ ಟಿಕೆಟ್: ಬಿಜೆಪಿಯಲ್ಲಿ ಬಂಡಾಯ ಬಿಸಿ

ಎಂಎಲ್ಸಿ ಚುನಾವಣೆ: ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಮುಂದಾದ ಬಿಜೆಪಿ ನಾಯಕ…

2-kalburgi

Kalburgi: ಕರೆಂಟ್ ಶಾಕ್ ಪ್ರಕರಣ;ಖಂಡಿಸಿ ಹಿಂದೂ ಜಾಗೃತಿ ಸೇನೆಯಿಂದ ಸರಕಾರದ ಪ್ರತಿಕೃತಿ ದಹನ

1-wqew-ewqe

Kalaburagi: ಹಣಕ್ಕಾಗಿ ಮೂವರ ವಿವಸ್ತ್ರಗೊಳಿಸಿ ಗುಪ್ತಾಂಗಕ್ಕೆ ಶಾಕ್‌!: 7 ಮಂದಿ ಸೆರೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

ಸುಳ್ಳು ವರದಕ್ಷಿಣೆ ಪ್ರಕರಣ ತಡೆಗೆ ಮದುವೆಯಲ್ಲಿ ದೊರೆತ ಉಡುಗೊರೆ ಪಟ್ಟಿ ಇರಿಸಿಕೊಳ್ಳಿ

ಸುಳ್ಳು ವರದಕ್ಷಿಣೆ ಪ್ರಕರಣ ತಡೆಗೆ ಮದುವೆಯಲ್ಲಿ ದೊರೆತ ಉಡುಗೊರೆ ಪಟ್ಟಿ ಇರಿಸಿಕೊಳ್ಳಿ

naksal (2)

Naxal ಶರಣಾದರೆ ಸರಕಾರದಿಂದ  ಪ್ರೋತ್ಸಾಹ: ಡಾ| ಬಂಜಗೆರೆ ಜಯಪ್ರಕಾಶ್‌

India vs South Africa: 48 ವರ್ಷಗಳ ಬಳಿಕ ಚೆನ್ನೈಯಲ್ಲಿ ಮಹಿಳಾ ಟೆಸ್ಟ್‌ ಪಂದ್ಯ ಆಯೋಜನೆ

India vs South Africa: 48 ವರ್ಷಗಳ ಬಳಿಕ ಚೆನ್ನೈಯಲ್ಲಿ ಮಹಿಳಾ ಟೆಸ್ಟ್‌ ಪಂದ್ಯ ಆಯೋಜನೆ

1-ewewqe

Anjali ಹತ್ಯೆ: ಹುಬ್ಬಳ್ಳಿಯಲ್ಲಿ ಭುಗಿಲೆದ್ದ ಪ್ರತಿಭಟನೆ; ಬಿಜೆಪಿ ಕಾರ್ಯಕರ್ತರು ವಶಕ್ಕೆ

Exam

SSLC  ಪರೀಕ್ಷೆ-2:  ನೋಂದಣಿ ದಿನಾಂಕ ವಿಸ್ತರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.