ಗಣೇಶ ವಿಸರ್ಜನೆ ವೇಳೆ ಬಾಲಕ ಬಲಿ
Team Udayavani, Aug 28, 2017, 12:41 PM IST
ಬೆಂಗಳೂರು: ನಗರದ ಕುರುಬರಹಳ್ಳಿ ಸಮೀಪ ಭಾನುವಾರ ರಾತ್ರಿ ಗಣೇಶ ವಿಗ್ರಹ ವಿಸರ್ಜನೆಗೆಂದು ಮೆರವಣಿಗೆಯಲ್ಲಿ ತೆರಳುತ್ತಿದ್ದ ಟೆಂಪೋದ ಬ್ರೇಕ್ ಫೇಲ್ ಆಗಿ, ಮೆರವಣಿಗೆಯಲ್ಲಿ ತೆರಳುತ್ತಿದ್ದ ಭಕ್ತರ ಮೇಲೆ ಹರಿದಿದೆ. ಈ ವೇಳೆ, ಮೆರವಣಿಗೆಯಲ್ಲಿ ತೆರಳುತ್ತಿದ್ದ ಬಾಲಕನೊಬ್ಬ ಮೃತಪಟ್ಟಿದ್ದು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಭಾನುವಾರ ರಾತ್ರಿ 10ರ ಸುಮಾರಿಗೆ ಈ ಘಟನೆ ನಡೆದಿದೆ. ಕುರುಬರಹಳ್ಳಿಯಲ್ಲಿ ಯುವಕರ ಗುಂಪೊಂದು ಟೆಂಪೋ (407) ದಲ್ಲಿ ಗಣೇಶ ಮೂರ್ತಿ ತೆಗೆದುಕೊಂಡು ವಿಸರ್ಜನೆಗೆಂದು ಹೊರಟಿತ್ತು. ಈ ಸಂದರ್ಭದಲ್ಲಿ ಗಣೇಶ ಮೂರ್ತಿ ಇದ್ದ ಟೆಂಪೋದ ಬ್ರೇಕ್ ಫೇಲ್ ಆಗಿ, ಚಾಲಕನ ನಿಯಂತ್ರಣ ಕಳೆದುಕೊಂಡಿತು. ಮೆರವಣಿಗೆಯಲ್ಲಿ ಹಲವರು ಪಾಲ್ಗೊಂಡಿದ್ದರು. ನಿಯಂತ್ರಣಕ್ಕೆ ಸಿಗದ ಟೆಂಪೋ ಜನರ ಗುಂಪಿನ ಮೇಲೆ ನುಗ್ಗಿದ ಪರಿಣಾಮ 10ಕ್ಕೂ ಹೆಚ್ಚು ಮಂದಿ ಗಾಯಗೊಂಡರು. ತಕ್ಷಣವೇ ಸ್ಥಳದಲ್ಲಿದ್ದ ಸಾರ್ವಜನಿಕರು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿದರು.
ಈ ಮಧ್ಯೆ, ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಬಾಲಕನೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ. ವಿಷಯ ತಿಳಿಯುತ್ತಿದ್ದಂತೆ ಮಹಾಲಕ್ಷ್ಮೀ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಘಟನೆ ಕುರಿತು ಪರಿಶೀಲನೆ ನಡೆಸಿದ್ದಾರೆ. ಮೃತಪಟ್ಟವರ ಗುರುತು ಪತ್ತೆಗೆ ಕ್ರಮ ಕೈಗೊಂಡಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ