ಹೆಚ್ಚಿದ ಮಳೆ: ಕಬಿನಿ ಜಲಾಶಯದ ನೀರಿನ ಮಟ್ಟ ಏರಿಕೆ


Team Udayavani, Aug 29, 2017, 12:13 PM IST

mys4.jpg

ಎಚ್‌.ಡಿ.ಕೋಟೆ: ರಾಜ್ಯದ ಜೀವನಾಡಿಗಳಲ್ಲೊಂದಾದ ತಾಲೂಕಿನ ಬೀಚನಹಳ್ಳಿ ಗ್ರಾಮದಲ್ಲಿರುವ ಕಬಿನಿ ಜಲಾಶಯದ ಒಳ ಹರಿವಿನ ಪ್ರಮಾಣ 7200 ಕ್ಯೂಸೆಕ್‌ನಷ್ಟು ಹೆಚ್ಚಿದ್ದು, ಜಲಾಶಯದ ಮಟ್ಟ 2271.227 ಅಡಿಗೆ ಏರಿಕೆ ಕಂಡಿದೆ.

ಕೇರಳದ ವೈನಾಡು ಪ್ರದೇಶ ಸೇರಿದಂತೆ ತಾಲೂಕು ಮತ್ತು ಕಬಿನಿ ಹಿನ್ನಿರು ಪ್ರದೇಶದಲ್ಲಿ ಕಳೆದ 3-4 ದಿನಗಳಿಂದ ಹೆಚ್ಚಿನ ಮಳೆಯಾಗುತ್ತಿದ್ದು, ಜಲಾಶಯಕ್ಕೆ ಹರಿದು ಬರುತ್ತಿರುವ ಒಳ ಹರಿವಿನ ಪ್ರಮಾಣ ಹೆಚ್ಚುತ್ತಿದೆ. ಕಳೆದ ಶುಕ್ರವಾರ 3 ರಿಂದ 4 ಸಾವಿರ ಕ್ಯೂಸೆಕ್‌ ಇದ್ದ ಒಳ ಹರಿವು, ಶನಿವಾರ 3.85 ಕ್ಯೂಸೆಕ್‌ ತನಕ ಏರಿತ್ತು. ದಿನಲೂ ಉತ್ತಮ ಮಳೆಯಾದ ಪರಿಣಾಮ ಭಾನುವಾರ ಅದು 7200 ಕ್ಯೂಸೆಕ್‌ ಏರಿಕೆ ಕಂಡಿದೆ.

ಜಲಾಶಯದ ಗರಿಷ್ಠ ಮಟ್ಟ 2284 ಅಡಿ ಆಗಿದ್ದು, ಜಲಾಶಯದಲ್ಲಿ ಸದ್ಯಕ್ಕೆ 12.0 ಟಿಎಂಸಿ ನೀರು ಸಂಗ್ರಹವಾಗಿದೆ. ಕಳೆದ ವರ್ಷ ಇದೆ ದಿನಕ್ಕೆ ಜಲಾಶಯದಲ್ಲಿ 2276 ಅಡಿಗಳಷ್ಟು ನೀರು ಸಂಗ್ರಹಣವಾಗಿತ್ತು. ಆಗ ಜಲಾಶಯಕ್ಕೆ 3 ಸಾವಿರ ಕ್ಯೂಸೆಕ್‌ ನೀರು ಮಾತ್ರ ಹರಿದು ಬರುತ್ತಿತ್ತು.

ಜಲಾಶಯದಿಂದ ಈಗ ಮುಂಭಾಗದ ನದಿಗೆ ಪಕ್ಕದ ಸುಭಾಷ್‌ ವಿದ್ಯುತ್‌ ಘಟಕದ ಮೂಲಕ 2 ಸಾವಿರ ಕ್ಯೂಸೆಕ್‌ ನೀರು, ಜಲಾಶಯದ ಬಲದಂಡೆ ಮತ್ತು ಎಡದಂಡೆ ನಾಲೆ ಸೇರಿ 1850 ಕ್ಯೂಸೆಕ್‌ ನೀರನ್ನು ಹೊರ ಬಿಡಲಾಗುತ್ತಿದೆ ಜಲಾಶಯದ ಅಧಿಕಾರಿಗಳು “ಉದಯವಾಣಿ’ಗೆ ತಿಳಿಸಿದ್ದಾರೆ.

ಜಲಾಶಯದ ಇತಿಹಾಸದಲ್ಲೇ ಅತ್ಯಂತ ಕನಿಷ್ಟ ಮಟ್ಟಕ್ಕೆ ಇಳಿಮುಖ ಕಂಡಿತ್ತು. ಹೀಗಾಗಿ ಜಲಾಶಯದ ಅಭಿವೃದ್ಧಿಗೆ ನಬಾರ್ಡ್‌ ಬ್ಯಾಂಕ್‌ನಿಂದ ಬಿಡುಗಡೆಯಾಗಿದ್ದ ಸುಮಾರು 12 ಕೋಟಿ ಅನುದಾನದಲ್ಲಿ ನೀರನ್ನುಹೊರ ಬಿಟ್ಟು ಕ್ರಸ್ಟ್‌ ಗೇಟ್‌, ಗೋಡೆಗಳ ಸೋರಿಕೆ, ನೀರಿನ ರಭಸ ತಡೆಯಲು ಮುಂಭಾಗ ಇರುವ ದಿಮ್ಮಿಗಳ ದುರಸ್ತಿ ಕಾರ್ಯ ನಡೆಸಿದ್ದರು. 

ಬತ್ತಿದ ಕೆರೆ ಕಟ್ಟೆ ಬೋರಲ್ಲೂ ನೀರು ಇಲ್ಲ: ಕಳೆದ 3 ವರ್ಷಗಳಲ್ಲಿ ಆವರಿಸಿದ್ದ ಬರದ ಛಾಯೆಯಿಂದ ಮೊದಲೇ ಬೆಳೆ ನಷ್ಟ ಕಂಡಿದ್ದ ರೈತರು ಈ ಬಾರಿಯೂ ಮುಂಗಾರು ಮಳೆ ಕೈಕೊಟ್ಟು, ಹಿಂಗಾರು ಮಳೆ ಪ್ರಾರಂಭ ಆಗದೆ ಸಂಕಷ್ಟಕ್ಕೀಡಾಗಿದ್ದರು. 

ಉತ್ತಮ ಮಳೆ, ಮತ್ತೇ ಚಿಗುರಿದ ಕನಸು: ಜಲಾಶಯಕ್ಕೆ 7 ಸಾವಿರ ಕ್ಯೂಸೆಕ್‌ಗೂ ಹೆಚ್ಚಿನ ನೀರು ಹರಿದು ಬರುತ್ತಿದೆ. ಇನ್ನೂ ಸೋಮವಾರ ಕೂಡ ಮಳೆ ಹೆಚ್ಚಿದ್ದು ಜಲಾಶಯದ ಒಳ ಹರಿವು ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ಜಲಾಶಯ ಶೀಘ್ರ ಭರ್ತಿಗೊಳ್ಳುವ ಸಾಧ್ಯತೆ ತಳ್ಳಿ ಹಾಕುವಂತಿಲ್ಲ.

ಈ ಹಿಂದೆ ಜಲಾಶಯದ ನೀರಿನ ಮಟ್ಟ ಕುಸಿದಿತ್ತು 
ನೆರೆ ರಾಜ್ಯ ಕೇರಳದ ವೈನಾಡು ಪ್ರದೇಶದಲ್ಲಿ ಕಳೆದ ತಿಂಗಳು ಹಾಗೂ ಅದಕ್ಕೂ ಮುನ್ನ ಪೂರ್ವ ಮುಂಗಾರು ವೇಳೆ ಕೆಲ ದಿನಗಳು ಮಳೆ ಅಬ್ಬರಿಸಿದ ಪರಿಣಾಮ ಜಲಾಶಯಕ್ಕೆ ಸುಮಾರು 17 ಸಾವಿರ ಕ್ಯೂಸೆಕ್‌ ನಷ್ಟು ನೀರು ಹರಿದು ಬಂದ ಪರಿಣಾಮ ಜಲಾಶಯದಲ್ಲಿ 74 ಅಡಿಗಳಷ್ಟು ನೀರು ಸಂಗ್ರಹಣಗೊಂಡಿತ್ತು.

ಆದರೆ, ಜಲಾಶಯ ಇನ್ನೇನು ತುಂಬಿ ಬಾಗಿನಕ್ಕೆ ಭಾಜನವಾಗಬಹುದು ಎಂದು ತಾಲೂಕಿನ ಜನರು ಕನಸು ಕಂಡಿದ್ದರೂ ಅಷ್ಟರಲ್ಲೇ ಸರ್ಕಾರ ಸಂಕಷ್ಟ ಸೂತ್ರ ನೆಪವೊಡ್ಡಿ ದಿನಲೂ ಕಬಿನಿ ಜಲಾಶಯದಿಂದ 10 ಸಾವಿರಕ್ಕೂ ಹೆಚ್ಚು ನೀರನ್ನು ಹೊರ ಬಿಟ್ಟ ಕಾರಣ ಮತ್ತು ಇತ್ತೀಚಿಗೆ ಕೆರೆ ಕಟ್ಟೆ ತುಂಬಿಸಲು ಹಾಗೂ ಜಾನುವಾರುಗಳಿಗೆ ನೀರುಣಿಸಲು ಎಡ ಮತ್ತು ಬಲದಂಡೆ ನಾಲೆಗಳಿಗೆ ನದಿ ಸೇರಿ ದಿನಾಲೂ 4 ಸಾವಿರ ನೀರು ಹರಿಸಿದ್ದರಿಂದ ತುಂಬುವ ಹಂತದಲ್ಲಿದ್ದ ಜಲಾಶಯ 68 ಅಡಿಗೆ ಕುಸಿದಿತ್ತು.

ಕೇರಳದ ವೈನಾಡು ಹಾಗೂ ಜಲಾಶಯದ ಹಿನ್ನೀರು ವ್ಯಾಪ್ತಿಯಲ್ಲಿ ಉತ್ತಮ ಮಳೆ ಆದ ಪರಿಣಾಮ ಹೆಚ್ಚಿನ ನೀರು ಹರಿದು ಬಂದಿದೆ. ದಿನಾಲೂ ಒಳ ಹರಿವಿನ ಪ್ರಮಾಣ ಹೆಚ್ಚಾಗುತ್ತಿದ್ದು, ಇದೇ ರೀತಿ ಇನ್ನಷ್ಟು ದಿನ ಮಳೆ ಮುಂದುವರಿದರೆ ಜಲಾಶಯ ಭರ್ತಿಯಾಗುವ ಸಾಧ್ಯತೆ ಇದೆ.
-ಕೃಷ್ಣಯ್ಯ, ಎಇಇ

* ಬಿ.ನಿಂಗಣ್ಣಕೋಟೆ

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.